ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಿಷತ್ ಚುನಾವಣೆ ಗೆದ್ದು ಸಚಿವ ಸ್ಥಾನ ಉಳಿಸಿಕೊಂಡ ಸವದಿ!

|
Google Oneindia Kannada News

ಬೆಂಗಳೂರು, ಫೆಬ್ರವರಿ 17 : ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ ಸವದಿ ಗೆಲುವು ಸಾಧಿಸಿದರು. ರಿಜ್ವಾನ್ ಅರ್ಷದ್ ರಾಜೀನಾಮೆಯಿಂದ ತೆರವಾದ ಸ್ಥಾನವನ್ನು ಭರ್ತಿ ಮಾಡಲು ಉಪ ಚುನಾವಣೆ ನಡೆದಿತ್ತು.

ಸೋಮವಾರ ಬೆಳಗ್ಗೆಯಿಂದ ಮತದಾನ ಮಾಡಲು ಅವಕಾಶವಿತ್ತು. ವಿಧಾನಸಭೆಯ ಶಾಸಕರು ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಮತದಾನ ಮಾಡಿದರು. ಒಟ್ಟು 120 ಮತಗಳು ಚಲಾವಣೆಗೊಂಡಿದ್ದವು. 7 ಮತಗಳು ಅಸಿಂಧುವಾಗಿವೆ.

ಪರಿಷತ್ ಚುನಾವಣೆ; ಜೆಡಿಎಸ್‌ ಶಾಸಕನಿಂದ ಬಿಜೆಪಿ ಅಭ್ಯರ್ಥಿಗೆ ಮತಪರಿಷತ್ ಚುನಾವಣೆ; ಜೆಡಿಎಸ್‌ ಶಾಸಕನಿಂದ ಬಿಜೆಪಿ ಅಭ್ಯರ್ಥಿಗೆ ಮತ

ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಮತ್ತು ಬಿಜೆಪಿಯ ಅಭ್ಯರ್ಥಿ ಲಕ್ಷ್ಮಣ ಸವದಿ 113 ಮತಗಳನ್ನು ಪಡೆದು ಜಯಗಳಿಸಿದರು. ಎದುರಾಳಿಗಳಾಗಿ ನಾಮಪತ್ರ ಸಲ್ಲಿಸಿದ್ದ ಇಬ್ಬರು ಕಣದಿಂದ ಹಿಂದೆ ಸರಿದ ಕಾರಣ ಲಕ್ಷ್ಮಣ ಸವದಿ ಗೆಲುವಿನ ಹಾದಿ ಸುಗಮವಾಗಿತ್ತು.

ಶಾಸಕ ಜಿ.ಟಿ.ದೇವೇಗೌಡ ವಿರುದ್ಧ ಕುಮಾರಸ್ವಾಮಿ ಆಕ್ರೋಶಶಾಸಕ ಜಿ.ಟಿ.ದೇವೇಗೌಡ ವಿರುದ್ಧ ಕುಮಾರಸ್ವಾಮಿ ಆಕ್ರೋಶ

2018ರ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಲಕ್ಷ್ಮಣ ಸವದಿ ಯಡಿಯೂರಪ್ಪ ಸಂಪುಟದಲ್ಲಿ ಸಾರಿಗೆ ಸಚಿವರಾಗಿದ್ದರು. ಫೆಬ್ರವರಿ 26ರೊಳಗೆ ವಿಧಾನಸಭೆ, ಪರಿಷತ್ ಸದಸ್ಯರಾಗದಿದ್ದಲ್ಲಿ ಸಚಿವ ಸ್ಥಾನ ಕಳೆದುಕೊಳ್ಳಬೇಕಿತ್ತು.

ಚುನಾವಣೆ ಸೋತರೂ ಸಚಿವರಾದ ಲಕ್ಷ್ಮಣ ಸವದಿ ಪರಿಚಯಚುನಾವಣೆ ಸೋತರೂ ಸಚಿವರಾದ ಲಕ್ಷ್ಮಣ ಸವದಿ ಪರಿಚಯ

ಎಲ್ಲರಿಗೂ ಧನ್ಯವಾದ ಹೇಳಿದ ಡಿಸಿಎಂ

ಎಲ್ಲರಿಗೂ ಧನ್ಯವಾದ ಹೇಳಿದ ಡಿಸಿಎಂ

ಮಾಧ್ಯಮಗಳ ಜೊತೆ ಮಾತನಾಡಿದ ಲಕ್ಷ್ಮಣ ಸವದಿ, "ತಮ್ಮನ್ನು ಆಯ್ಕೆ ಮಾಡಿದ ಎಲ್ಲಾ ಶಾಸಕರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಧನ್ಯವಾದ. ಅವಿರೋಧ ಆಯ್ಕೆ ನಡೆಯಬೇಕಿತ್ತು. ಆದರೆ, ಅನಿಲ್ ಕುಮಾರ್ ಸ್ಪರ್ಧೆಯಿಂದ ಮತದಾನ ನಡೆಯಬೇಕಾಯಿತು" ಎಂದರು.

ಶಾಸಕರು ಮತದಾನ ಮಾಡಿದ್ದಾರೆ

ಶಾಸಕರು ಮತದಾನ ಮಾಡಿದ್ದಾರೆ

"ಅನಿಲ್ ಕುಮಾರ್ ಬೆಂಬಲವಿಲ್ಲದ ಕಾರಣ ಸ್ಪರ್ಧೆಯಿಂದ ಹಿಂದೆ ಸರಿದು ಸವದಿಯವರಿಗೆ ಒಳ್ಳೆಯದಾಗಲಿ ಎಂದಿದ್ದಾರೆ ಅವರಿಗೂ ಧನ್ಯವಾದಗಳು. ಜೆಡಿಎಸ್‌ನ ಜಿ. ಟಿ. ದೇವೇಗೌಡರಿಗೆ ಶಾಸಕಾಂಗ ಪಕ್ಷದ ನಿರ್ಣಯ ಗೊತ್ತಿರಲಿಕ್ಕಿಲ್ಲ ಹೀಗಾಗಿ ಅವರು ಬಂದು ಮತದಾನ ಮಾಡಿದ್ದಾರೆ. ಪಕ್ಷೇತರ ಶಾಸಕರಿಗೆ ಮನವಿ ‌ಮಾಡಿದ್ದೆ ಹೀಗಾಗಿ ಅವರೂ ಕೂಡ ಮತಚಲಾಯಿಸಿದ್ದಾರೆ" ಎಂದು ಲಕ್ಷ್ಮಣ ಸವದಿ ಹೇಳಿದರು.

ಸೋತರೂ ಸಚಿವರಾಗಿದ್ದ ಸವದಿ

ಸೋತರೂ ಸಚಿವರಾಗಿದ್ದ ಸವದಿ

2018ರ ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಮಹೇಶ್ ಕುಮಟಳ್ಳಿ ವಿರುದ್ಧ ಲಕ್ಷ್ಮಣ ಸವದಿ ಸೋಲು ಕಂಡಿದ್ದರು. ಆದರೆ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಚ್ಚರಿಯ ರೀತಿಯಲ್ಲಿ ಯಡಿಯೂರಪ್ಪ ಸಂಪುಟದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದರು. ಸಾರಿಗೆ ಖಾತೆಯ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿತ್ತು.

ಬದಲಾದ ರಾಜಕೀಯ ಲೆಕ್ಕಾಚಾರ

ಬದಲಾದ ರಾಜಕೀಯ ಲೆಕ್ಕಾಚಾರ

2018ರ ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದು ಗೆದ್ದಿದ್ದ ಮಹೇಶ್ ಕುಮಟಳ್ಳಿ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 2019ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದು ಗೆದ್ದಿದ್ದಾರೆ. ಇದರಿಂದಾಗಿ ರಾಜಕೀಯ ಲೆಕ್ಕಾಚಾರವೇ ಬದಲಾಗಿದೆ.

English summary
BJP candidate Lakshman Savadi won legislative council by elections with 113 votes. Post vacant after Rizwan Arshad elected in Shivajinagar assembly seat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X