ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜು.28ರ ಅಮಿತ್ ಶಾ ಕರ್ನಾಟಕ ಭೇಟಿ ರದ್ದು?

By Gururaj
|
Google Oneindia Kannada News

ಬೆಂಗಳೂರು, ಜುಲೈ 17 : ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕರ್ನಾಟಕ ಭೇಟಿ ರದ್ದಾಗುವ ಸಾಧ್ಯತೆ ಇದೆ. ಜುಲೈ 28ರಂದು ಅಮಿತ್ ಶಾ ಕರ್ನಾಟಕ ಪ್ರವಾಸ ಕೈಗೊಂಡು, ರಾಜ್ಯದ ನಾಯಕರ ಜೊತೆ ಚರ್ಚೆ ನಡೆಸಬೇಕಿತ್ತು.

ಅಮಿತ್ ಶಾ ಆಗಮನಕ್ಕೂ ಮುನ್ನವೇ ರಾಜ್ಯ ಬಿಜೆಪಿ ಘಟಕ ಜು.21ರಂದು ಕೋರ್ ಕಮಿಟಿ ಸಭೆ ಕರೆದಿತ್ತು. 2019ರ ಲೋಕಸಭೆ ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ ನಡೆಸಲು ಅಮಿತ್ ಶಾ ರಾಜ್ಯಕ್ಕೆ ಆಗಮಿಸಬೇಕಿತ್ತು.

ಜು.28ಕ್ಕೆ ಅಮಿತ್ ಶಾ ಆಗಮನ, ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ?ಜು.28ಕ್ಕೆ ಅಮಿತ್ ಶಾ ಆಗಮನ, ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ?

ಜು.28ರಂದು ಬಿಜೆಪಿ ದೆಹಲಿಯಲ್ಲಿ ಸಂಸದರ ಸಭೆ ಕರೆದಿದೆ. ಈ ಸಭೆಯಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ. ಆದ್ದರಿಂದ, ಅಂದು ನಿಗದಿಯಾಗಿದ್ದ ಕರ್ನಾಟಕ ಭೇಟಿ ರದ್ದಾಗುವ ಅಥವ ಮುಂದೂಡುವ ಸಾಧ್ಯತೆ ಇದೆ.

BJP chief Amit Shah may cancel or change July 28 Karnataka tour

2018ರ ಕರ್ನಾಟಕ ವಿಧಾನಸಭೆ ಚುನಾವಣೆ ಬಳಿಕ ಮೊದಲ ಬಾರಿಗೆ ಅಮಿತ್ ಶಾ ರಾಜ್ಯ ಪ್ರವಾಸ ಕೈಗೊಂಡಿದ್ದರು. ಅದರಲ್ಲೂ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ವಿರುದ್ಧ ಹೋರಾಟ ಮಾಡಲು ಅವರು ರಾಜ್ಯ ನಾಯಕರಿಗೆ ಸೂಚನೆ ನೀಡುವ ನಿರೀಕ್ಷೆ ಇತ್ತು.

ಯಡಿಯೂರಪ್ಪ-ಅಮಿತ್ ಶಾ ಭೇಟಿಯ ರಹಸ್ಯ ಬಹಿರಂಗ!ಯಡಿಯೂರಪ್ಪ-ಅಮಿತ್ ಶಾ ಭೇಟಿಯ ರಹಸ್ಯ ಬಹಿರಂಗ!

ವೀಕ್ಷಕರ ನೇಮಕ : ಕರ್ನಾಟಕ ಬಿಜೆಪಿ 28 ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಿದೆ. ಕೋರ್ ಕಮಿಟಿ ಸದಸ್ಯರು, ಕಾರ್ಯಕಾರಣಿಯ ಸದಸ್ಯರು ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರಾಗಿದ್ದಾರೆ. ಕ್ಷೇತ್ರದ ಲೋಕಸಭೆ ಚುನಾವಣೆ ಸಿದ್ಧತೆಯನ್ನು ಇವರು ನೋಡಿಕೊಳ್ಳಲಿದ್ದಾರೆ.

English summary
The BJP's national president Amit Shah might either cancel or change the Karnataka tour schedule. Amit Shah scheduled to visit Karnataka on July 28, 2018 and hold meeting with party leaders to review the preparations for the Lok Sabha elections 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X