ರಾಜ್ಯ ಸರ್ಕಾರದ ವಿರುದ್ಧ ಪೋಸ್ಟರ್ ವಾರ್ ಮುಂದುವರೆಸಿದ ಬಿಜೆಪಿ: 'ಉಡ್ತಾ ಬೆಂಗಳೂರು'
ಕರ್ನಾಟಕ ರಾಜ್ಯದಲ್ಲಿ ಲೋಕಸಭಾ ಚುನಾವಣೆಗಳು ಮುಗಿದರೂ ಸಹ ರಾಜಕೀಯ ಪಕ್ಷಗಳ ಕೆಸರೆರಚಾಟ ಇನ್ನು ನಿಂತಿಲ್ಲ. ಕಾಂಗ್ರೆಸ್ ಪಕ್ಷವನ್ನು ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ತೀವ್ರ ತರಾಟೆಗೆ ತೆಗೆದುಕೊಂಡಿವೆ. ಇಷ್ಟು ದಿನ ತಣ್ಣಾಗಿದ್ದಂತೆ ಕಾಣುತ್ತಿದ್ದ ವಿರೋಧ ಪಕ್ಷಗಳು ಈಗ ಫುಲ್ ಎಕ್ಟಿವ್ ಆಗಿವೆ. ಈಗೇನಿದ್ದರೂ ಸಾಮಾಜಿಕ ತಾಣದಲ್ಲಿ ಪೋಸ್ಟರ್ ವಾರ್ ಬಿರುಸು ಪಡೆದಿದೆ.
ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದು, ಕಾಂಗ್ರೆಸ್ ವಿರುದ್ಧವೂ ಸಹ ಒಟ್ಟಾಗಿ ಮುಗಿ ಬೀಳುತ್ತಿವೆ. ಜೆಡಿಎಸ್ ಪಕ್ಷ ನಿನ್ನೆ ಸಿಡಿ ಶಿವು ಎಂಬ ಹೆಸರಿನ ಎರಡು ಪೋಸ್ಟರ್ ಬಿಡುಗಡೆ ಮಾಡಿತ್ತು. ಇದರ ಬೆನ್ನಲ್ಲೆ ಬಿಜೆಪಿ ಸಹ ಪೋಸ್ಟರ್ ವಾರ್ ಮುಂದುವರೆಸಿದೆ.

ಸರ್ಕಾರದ ವಿರುದ್ಧ ಆಕ್ರೋಶ
ಜೆಡಿಎಸ್ ಪಕ್ಷ ಸರ್ಕಾರದಲ್ಲಿರುವ ಒಬ್ಬ ವ್ಯಕ್ತಿಯನ್ನು ಟಾರ್ಗೆಟ್ ಮಾಡಿ ಪೋಸ್ಟ್ ವಾರ್ ನಡೆಸಿದರೆ, ಬಿಜೆಪಿ ಸರ್ಕಾರದ ವಿರುದ್ಧವೇ ಧ್ವನಿ ಎತ್ತಿದೆ. ಅಸಲಿಗೆ ಬಿಜೆಪಿ ಪೋಸ್ಟ್ ಸಾಮಾಜಿಕ ತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಪೋಸ್ಟ್ ಮೂಲಕ ಬಿಜೆಪಿ ರಾಜ್ಯದಲ್ಲಿರುವ ಕಾನೂನು ಸುವ್ಯವಸ್ಥೆಯ ಬಗ್ಗೆ ಆಕ್ರೋಶವನ್ನು ಹೊರ ಹಾಕಿದೆ.
ಉಡ್ತಾ ಬೆಂಗಳೂರು
ರಾಜ್ಯದಲ್ಲಿ ಇರುವ ಕಾನೂನು ಸುವ್ಯವಸ್ಥೆಯ ಬಗ್ಗೆ ಈ ಪೋಸ್ಟರ್ ಬಿಂಬಿಸುವಂತಿದೆ. ಈ ಪೋಸ್ಟರ್ನಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂಬುದನ್ನು ತೋರಿಸಲಾಗಿದೆ.

ಬೆಂಗಳೂರಿನ ಹೊರ ಒಲಯದಲ್ಲಿ ಇತ್ತೀಚಿಗೆ ನಡೆದಿದ್ದ ರೇವ್ ಪಾರ್ಟಿ, ಸಖತ್ ಸದ್ದು ಮಾಡಿತ್ತು. ಇದನ್ನೇ ಗುರಿಯಾಗಿಸಿ ಬಿಜೆಪಿ ತನ್ನ ಆಕ್ರೋಶವನ್ನು ಹೊರ ಹಾಕಿದೆ. ಬೆಂಗಳೂರಿನಲ್ಲಿ ನಡೆದ ಪಾರ್ಟಿಯಲ್ಲಿ ತೆಲುಗು ನಟಿಯರು ಭಾಗೀಯಾಗಿದ್ದಾರೆ ಎಂಬ ಬಗ್ಗೆ ವರದಿಗಳು ಆಗಿದ್ದವು. ಇದರ ಬೆನ್ನಲ್ಲೆ ಬಿಜೆಪಿ ಪೋಸ್ಟರ್ ಜನರ ಚಿತ್ತ ಕದ್ದಿದೆ.
ಜಾಹೀರಾತು ವಾರ್
ಚುನಾವಣೆಗಳು ಆರಂಭಕ್ಕೂ ಮುನ್ನವೆ ಕಾಂಗ್ರೆಸ್ ಸಹ ಇದೇ ತಂತ್ರವನ್ನು ಅನುಸರಿಸಿ ಜಾಹೀರಾತು ವಾರ್ ಆರಂಭಿಸಿತ್ತು. ಅಲ್ಲದೆ ಬೀದಿಗಿಳಿದು ಪ್ರತಿಭಟನೆ ನಡೆಸಿತ್ತು. ಆರಂಭದಲ್ಲಿ ಕಾಂಗ್ರೆಸ್ ಚೊಬ್ಬಿನ ಜಾಹೀರಾತನ್ನು ನೀಡಿತ್ತು. ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ನೀಡಿದ್ದು ಬರೀ ಚೊಂಬಿ ಎಂಬತೆ ಈ ಜಾಹೀರಾತನ್ನು ಬಿಂಬಿಸಲಾಗಿತ್ತು. ಅಲ್ಲದೆ ಇದೇ ಜಾಹೀರಾತಿನ ಮುಂದುವರೆದ ಭಾಗವಾಗಿ ಖಾಲಿ ಚಿಪ್ಪನ್ನು ಜಾಹೀರಾತಿನಲ್ಲಿ ನೀಡಿತ್ತು. ಕಾಂಗ್ರೆಸ್ ಸರ್ಕಾರದ ಈ ಪ್ರಯತ್ನವೂ ಸಹ ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ ನೀಡಿಲ್ಲ ಎಂಬುದನ್ನು ಸೂಚಿಸಲು ಆಗಿತ್ತು.
ಕಾಂಗ್ರೆಸ್ ಮಾಡಿದ ತಂತ್ರವನ್ನೇ ಬಿಜೆಪಿ ಸಹ ಅನುಸರಿಸಿ ಚುನಾವಣೆಗಳಿಗೆ ಮುನ್ನ ಹಲವು ಜಾಹೀರಾತನ್ನು ನೀಡಿತ್ತು. ಎರಡನೇ ಹಂತದ ಚುನಾವಣೆಗಳು ಆರಂಭವಾಗುವ ಹೊತ್ತಗೆ ಪೆನ್ ಡ್ರೈವ್ ಪ್ರಕರಣ ರಾಜ್ಯದ ಭಾರೀ ಸದ್ದು ಮಾಡಿತ್ತು. ಈಗ ಮತ್ತೆ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಧ್ವನಿ ಎತ್ತಲು ಆರಂಭಿಸಿದೆ.
ಕಳೆದ ಕೆಲವು ದಿನಗಳ ಹಿಂದೆ ಬಿಜೆಪಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ವೈದ್ಯರು ಪರದಾಡುತ್ತಿರುವ ಫೋಟೋವನ್ನು ಸಹ ಬಿಜೆಪಿ ಪೋಸ್ಟ್ ಮಾಡಿತ್ತು.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications