ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಸಭೆ ಚುನಾವಣೆ; ಜೂ.6ರಂದು ಬಿಜೆಪಿ ಕೋರ್ ಕಮಿಟಿ ಸಭೆ

|
Google Oneindia Kannada News

ಬೆಂಗಳೂರು, ಜೂನ್ 03 : ಕರ್ನಾಟಕ ಬಿಜೆಪಿಯ ಕೋರ್ ಕಮಿಟಿ ಸಭೆ ಜೂನ್ 6ರಂದು ನಡೆಯಲಿದೆ. ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಕುರಿತು ಚರ್ಚೆ ನಡೆಸಲು ಸಭೆ ಕರೆಯಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀನ್ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದೆ. ನಳಿನ್ ಕುಮಾರ್ ಕಟೀಲ್ ಶನಿವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಪಕ್ಷದ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಲಿದೆ.

 ರಾಜ್ಯಸಭೆ ಚುನಾವಣೆ: ಬಿಜೆಪಿಯಿಂದ ತೇಜಸ್ವಿನಿ ಅನಂತ್‌ಕುಮಾರ್, ಕಾಂಗ್ರೆಸ್‌ನಿಂದ ಖರ್ಗೆ..? ರಾಜ್ಯಸಭೆ ಚುನಾವಣೆ: ಬಿಜೆಪಿಯಿಂದ ತೇಜಸ್ವಿನಿ ಅನಂತ್‌ಕುಮಾರ್, ಕಾಂಗ್ರೆಸ್‌ನಿಂದ ಖರ್ಗೆ..?

ಕರ್ನಾಟಕ ವಿಧಾನಸಭೆಯಿಂದ ನಾಲ್ವರು ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಜೂನ್ 19ರಂದು ಚುನಾವಣೆ ನಡೆಯಲಿದೆ. ವಿಧಾನಸಭೆಯಲ್ಲಿ 116 ಸದಸ್ಯರನ್ನು ಹೊಂದಿರುವ ಬಿಜೆಪಿ 2 ಸ್ಥಾನಗಳನ್ನು ಸುಲಭವಾಗಿ ಗೆಲ್ಲಲಿದೆ.

ರಾಜ್ಯಸಭೆಗೆ ಚುನಾವಣೆ; ಕರ್ನಾಟಕ ಕಾಂಗ್ರೆಸ್‌ನಿಂದ ಅಚ್ಚರಿಯ ಹೆಸರು! ರಾಜ್ಯಸಭೆಗೆ ಚುನಾವಣೆ; ಕರ್ನಾಟಕ ಕಾಂಗ್ರೆಸ್‌ನಿಂದ ಅಚ್ಚರಿಯ ಹೆಸರು!

ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿ ಯಾರು? ಎಂಬ ಬಗ್ಗೆ ಚರ್ಚೆ ನಡೆದಿದೆ. ಹಲವಾರು ಹೆಸರುಗಳು ಕೇಳಿ ಬರುತ್ತಿದ್ದು, ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಹೈಕಮಾಂಡ್‌ಗೆ ಪಟ್ಟಿಯನ್ನು ಸಹ ಕಳಿಸುವ ನಿರೀಕ್ಷೆ ಇದೆ.

ರಾಜ್ಯಸಭೆ ಚುನಾವಣೆ, ಕರ್ನಾಟಕದಲ್ಲಿ 4 ಸ್ಥಾನ ಖಾಲಿ, ರೇಸ್‌ನಲ್ಲಿ ಯಾರಿದ್ದಾರೆ?ರಾಜ್ಯಸಭೆ ಚುನಾವಣೆ, ಕರ್ನಾಟಕದಲ್ಲಿ 4 ಸ್ಥಾನ ಖಾಲಿ, ರೇಸ್‌ನಲ್ಲಿ ಯಾರಿದ್ದಾರೆ?

ಹಲವು ಹೆಸರುಗಳು ಕೇಳಿ ಬರುತ್ತಿವೆ

ಹಲವು ಹೆಸರುಗಳು ಕೇಳಿ ಬರುತ್ತಿವೆ

ರಾಜ್ಯಸಭೆ ಚುನಾವಣೆಗೆ ಸುಧಾಮೂರ್ತಿ, ತೇಜಸ್ವಿನಿ ಅನಂತ ಕುಮಾರ್, ನಿವೃತ್ತಿ ಐಎಎಸ್ ಅಧಿಕಾರಿ ರತ್ನಪ್ರಭಾ, ಉಮೇಶ್ ಕತ್ತಿ ಸಹೋದರ ರಮೇಶ್ ಕತ್ತಿ ಸೇರಿದಂತೆ ಹಲವಾರು ಹೆಸರು ಕೇಳಿ ಬರುತ್ತಿದೆ. ಕೋರ್ ಕಮಿಟಿ ಸಭೆಯಲ್ಲಿ ಯಾರು ಅಭ್ಯರ್ಥಿಯಾಗಬೇಕು ಎಂದು ಚರ್ಚೆ ನಡೆಸಲಾಗುತ್ತದೆ.

ಹೈಕಮಾಂಡ್‌ಗೆ ಪಟ್ಟಿ ರವಾನೆ

ಹೈಕಮಾಂಡ್‌ಗೆ ಪಟ್ಟಿ ರವಾನೆ

ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಹೈಕಮಾಂಡ್‌ಗೆ ಕಳಿಸುವ ಸಾಧ್ಯತೆ ಇದೆ. ಹೈಕಮಾಂಡ್ ಸೂಚಿಸುವ ಅಭ್ಯರ್ಥಿಗೆ ಟಿಕೆಟ್ ಸಿಗಲಿದೆ. ಇದಕ್ಕೂ ಮೊದಲು ಎಲ್ಲಾ ನಾಯಕರ ಅಭಿಪ್ರಾಯವನ್ನು ಸಂಗ್ರಹ ಮಾಡಲಾಗುತ್ತದೆ.

ಚುನಾವಣೆ ಬಗ್ಗೆ ಚರ್ಚೆ

ಚುನಾವಣೆ ಬಗ್ಗೆ ಚರ್ಚೆ

ವಿಧಾನ ಪರಿಷತ್ ಚುನಾವಣೆ ಮತ್ತು ರಾಜ್ಯಸಭೆ ಚುನಾವಣೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಯಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ. ವಿಧಾನ ಪರಿಷತ್ ಚುನಾವಣೆ ಟಿಕಟ್‌ಗೆ ಸಹ ಭಾರಿ ಪೈಪೋಟಿ ಆರಂಭವಾಗಿದೆ. ಅದರಲ್ಲೂ 13 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸೋತವರು, ಟಿಕೆಟ್ ವಂಚಿತರಾದವರು ಆಕಾಂಕ್ಷಿಗಳಾಗಿದ್ದಾರೆ.

ಉಮೇಶ್ ಕತ್ತಿ ಭೇಟಿ

ಉಮೇಶ್ ಕತ್ತಿ ಭೇಟಿ

ಬುಧವಾರ ಉಮೇಶ್ ಕತ್ತಿ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿಯಾಗಿದ್ದರು. ಉಮೇಶ್ ಕತ್ತಿ ಸಹೋದರ ರಮೇಶ್ ಕತ್ತಿ ರಾಜ್ಯಸಭೆ ಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಭೇಟಿ ಮಹತ್ವ ಪಡೆದುಕೊಂಡಿತ್ತು. ರಾಜ್ಯಸಭೆ ಚುನಾವಣೆ ವಿಚಾರದಲ್ಲಿ ಯಡಿಯೂರಪ್ಪ ಹೈಕಮಾಂಡ್‌ ಕಡೆ ಕೈ ತೋರಿಸಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.

English summary
Karnataka BJP unit called its core committee meeting on June 6, 2020 to discuss about legislative council and rajya sabha elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X