14 ಕ್ಷೇತ್ರಗಳಿಗೆ ಬಿಜೆಪಿ ಪಟ್ಟಿ ಸಿದ್ಧ; ಉಳಿದವು ಕಗ್ಗಂಟು

ಈ ಮಧ್ಯೆ, ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಣಕ್ಕಿಳಿಸುವ ಸಂಬಂಧ ಗಹನವಾದ ಚರ್ಚೆಗಳು ನಡೆದವು. ಶಿವಮೊಗ್ಗದಿಂದ ಸ್ಪರ್ಧಿಸುವಂತೆ ಬಿಎಸ್ವೈ ಮೇಲೆ ಪಕ್ಷದ ರಾಜ್ಯ ಮುಖಂಡರೂ ಒತ್ತಡ ಹಾಕಿದ್ದಾರೆ.
ಶಿವಮೊಗ್ಗದ ಸ್ಥಳೀಯರು ಮುಖಂಡರು ಹಿಂದಿನಿಂದಲೂ ಯಡಿಯೂರಪ್ಪ ಮೇಲೆ ಒತ್ತಡ ಹಾಕುತ್ತಿದ್ದು, ಚುನಾವಣೆಗೆ ನಿಲ್ಲುವಂತೆ ಕೋರಿದ್ದಾರೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೋರ್ ಕಮಿಟಿ ಸಭೆಯಲ್ಲಿಯೂ 'ಯಡಿಯೂರಪ್ಪ ಅವರನ್ನು ಶಿವಮೊಗ್ಗದಿಂದ ಕಣಕ್ಕಿಳಿಯುವಂತೆ ಮನವೊಲಿಸುವ ಪ್ರಯತ್ನ ನಡೆಯಿತು' ಎಂದು ಮೂಲಗಳು ತಿಳಿಸಿವೆ.
14 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಸುಗಮ ಆಯ್ಕೆ:
ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಮಲ್ಲೇಶ್ವರದಲ್ಲಿರುವ ಪಕ್ಷದ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ಸಭೆಯಲ್ಲಿ ಆಯಾ ಜಿಲ್ಲಾ ಬಿಜೆಪಿ ಮುಖಂಡರ ಸೂಕ್ತ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯವನ್ನು ಹಂಚಿಕೊಂಡರು. ಕರ್ನಾಟಕದ ದಕ್ಷಿಣ ಭಾಗದ 14 ಲೋಕಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಕೋರ್ ಕಮಿಟಿ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ.
ಈ ಮಧ್ಯೆ 'ಒನ್ಇಂಡಿಯಾ ಕನ್ನಡ' ಜತೆ ಮಾತನಾಡಿದ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರು ಈ ವಾರಾಂತ್ಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಫೆ. 18 ಮತ್ತು 20ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಅವರು ಹೇಳಿದರು. ( ಮೋದಿ ನಾಲ್ಕು ಸಮಾವೇಶಕ್ಕೆ ಯಾವುದೇ ಶುಲ್ಕವಿಲ್ಲ )
ಮುಖಂಡರ ಅಭಿಪ್ರಾಯವನ್ನು ಗಣನೆಗೆ ತೆಗೆದುಕೊಂಡು ಅಭ್ಯರ್ಥಿಗಳ ಆಯ್ಕೆಯನ್ನು ಸುಲಲಿತವಾಗಿ ಅಂತಿಮಗೊಳಿಸಲಾಗಿದೆ. ಆದರೆ ಉಳಿದ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಕಠಿಣವಾಗಿದ್ದು, ಮುಂದಿನ ಸಭೆಯಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಸಭೆ ನಿರ್ಧರಿಸಿದೆ.
ಗಮನಾರ್ಹವೆಂದರೆ 14 ಕ್ಷೇತ್ರಗಳಲ್ಲಿ ಅಧಿಕೃತವಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೂ ಬಹಿರಂಗಪಡಿಸಿಲ್ಲ. ಗೆಲ್ಲುವ ಮುಖಗಳಿಗೆ ಮಣೆ ಹಾಕಲು ಕೋರ್ ಕಮಿಟಿಯಲ್ಲಿ ತೀರ್ಮಾನಿಸಲಾಗಿದೆ. 1. ಬೆಂಗಳೂರು ದಕ್ಷಿಣ, 2. ಬೆಂಗಳೂರು ಉತ್ತರ, 3. ಬೆಂಗಳೂರು ಕೇಂದ್ರ, 4. ಬೆಂಗಳೂರು ಗ್ರಾಮಾಂತರ, 5. ಕೋಲಾರ, 6. ತುಮಕೂರು, 7. ಹಾಸನ, 8. ಮೈಸೂರು, 9. ಚಾಮರಾಜನಗರ, 10. ಶಿವಮೊಗ್ಗ, 11. ಉತ್ತರ ಕನ್ನಡ, 12. ಹಾವೇರಿ, 13. ಬೀದರ್ ಮತ್ತು 14. ಬಳ್ಳಾರಿ ಲೋಕಸಭೆ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಲಾಗಿದೆ.
ಶೋಭಾ ಕರಂದ್ಲಾಜೆ, ಜಾವಗಲ್ ಶ್ರೀನಾಥ್ ಗೆ ಟಿಕೆಟ್:
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ, ಬೆಂಗಳೂರು ಕೇಂದ್ರ- ಪಿಸಿ ಮೋಹನ್, ಬೆಂಗಳೂರು ದಕ್ಷಿಣ- ಅನಂತ್ ಕುಮಾರ್, ಬೆಂಗಳೂರು ಗ್ರಾಮಾಂತರ- ಮುನಿರಾಜು, ಹಾವೇರಿ- ಸಿದ್ದೇಶ್, ಕೋಲಾರ- ನಾರಾಯಣಸ್ವಾಮಿ/ ಬಿಎಸ್ ವೀರಯ್ಯ, ಮೈಸೂರು- ಶೋಭಾ ಕರಂದ್ಲಾಜೆ, ಹಾಸನ- ಜಾವಗಲ್ ಶ್ರೀನಾಥ್, ಬೀದರ್- ಸೂರ್ಯವಂಶಿ ನಾಗಮಾರಪಲ್ಲಿ, ಉತ್ತರ ಕನ್ನಡ- ಅನಂತ್ ಕುಮಾರ್ ಹೆಗಡೆ ಅವರ ಹೆಸರುಗಳು ಕೇಳಿ ಬಂದಿದ್ದು, ಇದೇ ಬಹುತೇಕ ಅಂತಿಮಗೊಳ್ಳುವ ಸಾಧ್ಯತೆಗಳಿವೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications