ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ; ಬಿಜೆಪಿ ಮಹತ್ವದ ಕೋರ್ ಕಮಿಟಿ ಸಭೆ!

ಬೆಂಗಳೂರು, ಮಾ. 18: ರಾಜ್ಯದ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಹಾಗೂ ಬಿಜೆಪಿಗೆ ಮುಜುಗುರ ತಂದಿಟ್ಟಿರುವ ರಮೇಶ್ ಜಾರಕಿಹೊಳಿ 'ಸಿಡಿ' ಪ್ರಕರಣದ ಬೆಳವಣಿಗೆ ನಡುವೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಾರ್ಚ್ 19 ರಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

ನಾಳೆ (ಮಾ.19) ಸಂಜೆ 6.30ಕ್ಕೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸುವ ಅರುಣ್ ಸಿಂಗ್ ಅವರು ಕುಮಾರಕೃಪಾ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಲಿದ್ದು, ಮಾ. 20 ರಂದು ಬೆಳಗ್ಗೆ 8.30ಕ್ಕೆ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಹತ್ವದ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರಮುಖವಾಗಿ ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆ ಹಾಗೂ ಅಭ್ಯರ್ಥಿಗಳ ಆಯ್ಕೆ ಕುರಿತು ಸಭೆಯಲ್ಲಿ ಅಂತಿಮ ಹಂತದ ಚರ್ಚೆ ಆಗುವ ಸಾಧ್ಯತೆಯಿದೆ. ಬೆಳಗಾವಿ ಲೋಕಸಭೆ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನ ಸಭಾ ಕ್ಷೇತ್ರಗಳಿಗೆ ಏ. 17 ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಏ. 4 ಕೊನೆಯ ದಿನವಾಗಿದೆ.

BJP Core Committee Meeting to Select Candidates for 3 Constituencies

ಹೀಗಾಗಿ ಮಾ. 20 ರಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ನೇತೃತ್ವದಲ್ಲಿ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಮೂರು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ, ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗುತ್ತಿದೆ ಎಂಬ ಮಾಹಿತಿ ಇದೆ.

Recommended Video

      ಸಿಎಂ ಭೇಟಿಯಾದ ಬಸವಕಲ್ಯಾಣ ಟಿಕೆಟ್‌ ಆಕಾಂಕ್ಷಿ ಪ್ರದೀಪ್ ವಾತಡೆ | Oneindia Kannada

      ಜೊತೆ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣದಿಂದ ರಾಜ್ಯ ಬಿಜೆಪಿ ಹಾಗೂ ಬಿಜೆಪಿ ಸರ್ಕಾರದ ಮೇಲೆ ಆಗಿರುವ ಪರಿಣಾಮದ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+