ಕುಮಾರಸ್ವಾಮಿ ಸಿಂಗಪುರ ಪ್ರವಾಸವನ್ನು ಟೀಕಿಸಿದ ಬಿಜೆಪಿ
ಬೆಂಗಳೂರು, ಡಿಸೆಂಬರ್ 29 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ವಿದೇಶ ಪ್ರವಾಸವನ್ನು ಬಿಜೆಪಿ ಟೀಕಿಸಿದೆ. ಕುಟುಂಬ ಸಮೇತರಾಗಿ ನಾಲ್ಕು ದಿನಗಳ ಪ್ರವಾಸಕ್ಕೆ ಕುಮಾರಸ್ವಾಮಿ ಅವರು ಸಿಂಗಪುರಕ್ಕೆ ತೆರಳಿದ್ದಾರೆ.
ಡಿಸೆಂಬರ್ 28ರ ಶುಕ್ರವಾರ ಎಚ್.ಡಿ.ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಸಿಂಗಪುರಕ್ಕೆ ಪ್ರಯಾಣಿಸಿದ್ದಾರೆ. ಜನವರಿ 1ರಂದು ಅವರು ರಾಜ್ಯಕ್ಕೆ ವಾಪಸ್ ಆಗಲಿದ್ದಾರೆ.
After new govt was formed
— BJP Karnataka (@BJP4Karnataka) December 29, 2018
377 farmers have ended their lives
156 talukas declared drought-hit
Loan waiver has still not been done
Karnataka has slipped to a debt ridden state
& here we have the so called son of soil CM @hd_kumaraswamy celebrating new year in Singapore.
ನಿಗಮ-ಮಂಡಳಿ ನೇಮಕ ಮಾಡದೆ ವಿದೇಶ ಪ್ರವಾಸಕ್ಕೆ ತೆರಳಿದ ಸಿಎಂ
ಪ್ರತಿಪಕ್ಷ ಬಿಜೆಪಿ ಕುಮಾರಸ್ವಾಮಿ ಅವರ ವಿದೇಶ ಪ್ರವಾಸವನ್ನು ಟೀಕಿಸಿದೆ. ಮಣ್ಣಿನ ಮಗ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿಗಳು ಹೊಸ ವರ್ಷಾಚರಣೆಗಾಗಿ ಸಿಂಗಪುರಕ್ಕೆ ಪ್ರವಾಸ ತೆರಳಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.
'ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಯಾದ ಬಳಿಕ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 156 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ರೈತರ ಸಾಲಮನ್ನಾ ಭರವಸೆ ಈಡೇರಿಲ್ಲ. ರಾಜ್ಯ ಸಾಲದಲ್ಲಿ ಮುಳುಗಿದೆ. ಆದರೆ, ಮಣ್ಣಿನ ಮಗ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿಗಳು ಹೊಸ ವರ್ಷಾಚರಣೆಗಾಗಾಗಿ ಸಿಂಗಾಪುರಕ್ಕೆ ತೆರಳಿದ್ದಾರೆ' ಎಂದು ಬಿಜೆಪಿ ಟ್ವೀಟ್ ಮಾಡಿದೆ.
If there was a movie titled #AccidentalCM who will play the role of @hd_kumaraswamy ?
— BJP Karnataka (@BJP4Karnataka) December 29, 2018
ಆಕ್ಸಿಡೆಂಟಲ್ ಸಿಎಂ ಎಂದು ಸಿನಿಮಾ ಮಾಡಿದರೆ ಯಾರು? ಪಾತ್ರ ಮಾಡಬಹುದು ಎಂದು ಬಿಜೆಪಿ ವ್ಯಂಗ್ಯವಾಡಿದೆ.