ಬಿಜೆಪಿಯವರು ಹೊಟ್ಟೆ ಉರಿದುಕೊಂಡು ಸಾಯುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ಬೆಂಗಳೂರು, ಮಾರ್ಚ್07:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 16 ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ ಎಂದು ಬಿಜೆಪಿಯವರು ಹೊಟ್ಟೆ ಉರಿದುಕೊಂಡು ಸಾಯುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರತಿಪಕ್ಷಗಳ ಟೀಕೆಗಳಿಗೆ ಖಡಕ್ ಉತ್ತರ ನೀಡಿದರು.

ಬಜೆಟ್ ಬಗ್ಗೆ ಬಿಜೆಪಿಯವರ ಟೀಕೆಯ ಕುರಿತು ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಜೊತೆಗೆ ಡಿ ಕೆ ಶಿವಕುಮಾರ್‌ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತನ್ನುಉಳಿಸಿಕೊಂಡಿದೆ, ಉತ್ತಮವಾದ ಬಜೆಟ್ ನೀಡುತ್ತಿದ್ದಾರಲ್ಲ ಎನ್ನುವ ಹೊಟ್ಟೆಯುರಿ. ನೆನ್ನೆ ವಿರೋಧ ಪಕ್ಷಗಳ ಶಾಸಕರು ಕೇವಲ ಫೋಟೋಗಾಗಿ ಮಾತ್ರ ಬಂದಿದ್ದರು. ಏನನ್ನೂ ಕೇಳಲು ಬಂದಿರಲಿಲ್ಲ. ಮುಖ್ಯಮಂತ್ರಿಗಳು ಇಲಾಖೆಗೆ ಏನು ಕೊಡಬೇಕು ಎಂದು ಸಚಿವರ ಬಳಿ ಚರ್ಚೆ ಮಾಡುತ್ತಾರೆ ಎಂದು ತಿರುಗೇಟು ನೀಡಿದರು.

BJP Criticism of the Karnataka Budget DK Shivakumar Reaction

ಕಳೆದ ಎರಡು ದಿನಗಳಿಂದ ನೀಲಿ ಶಾಲು ಹಾಕಿಕೊಂಡು ಪ್ರತಿಪಕ್ಷಗಳು ಪ್ರತಿಭಟನೆ ಮಾಡುತ್ತಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಏನು ಬೇಕಾದರೂ ಮಾಡಲಿ. ಪ್ರತಿದಿನ ಬೇಕಾದರೂ ಪ್ರತಿಭಟನೆ ಮಾಡಲಿ, ಕೂಗಲಿ, ಕಿರುಚಲಿ. ನಾವು ರಾಜ್ಯದ ಜನತೆಗೆ ಏನು ಒಳ್ಳೆಯದು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದರು. ಬಿಜೆಪಿಗೆ ನಾಚಿಕೆಯಾಗಬೇಕು. ನಾವು ಕೊಟ್ಟ ಮಾತುಗಳನ್ನು ಉಳಿಸಿಕೊಂಡಿದ್ದೇವೆ. ಅವರ ಕಾಲದ ಬಜೆಟ್ ರೀತಿ ನಮ್ಮದು ಇರುವುದಿಲ್ಲ. ಕೇಂದ್ರ ಬಜೆಟ್ ಅಲ್ಲಿ ಕರ್ನಾಟಕಕ್ಕೆ ಏನೂ ಕೊಡುಗೆ ನೀಡಿಲ್ಲ. ಕರ್ನಾಟಕ ಉಳಿಸಿ ಎಂದು ಹೇಳುವುದಕ್ಕೆ ಅವರಿಗೆ ನೈತಿಕತೆಯಿಲ್ಲ. ನಾವು ನಮ್ಮ ಜನರನ್ನು ಕಾಪಾಡುತ್ತೇವೆ, ಕಾಪಾಡಿದ್ದೇವೆ" ಎಂದು ಹೇಳಿದರು.

ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಸಮತೋಲನ ಬಜೆಟ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡವರು, ಶ್ರಮಿಕರು ಸೇರಿದಂತೆ ರಾಜ್ಯದ ಎಲ್ಲ ವರ್ಗದ ಜನರ ಸರ್ವತೋಮುಖ ಅಭಿವೃದ್ಧಿಯ ದೂರದೃಷ್ಟಿಯನ್ನು ಹೊಂದಿರುವ ಸಮತೋಲನವಾದ ಬಜೆಟ್ ನೀಡಿದ್ದಾರೆ ಎಂದು ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಹೇಳಿದ್ದಾರೆ.

ರಾಜ್ಯದ ಇತಿಹಾಸದಲ್ಲೇ 16 ಬಾರಿ ಬಜೆಟ್ ಮಂಡಿಸಿ ಮೈಲಿಗಲ್ಲು ಸೃಷ್ಟಿಸಿದ್ದಾರೆ. ಅವರಿಗೆ ಈ ಮೂಲಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಈ ಬಾರಿಯ ಬಜೆಟ್ ೪.೦೯ ಲಕ್ಷ ಕೋಟಿಗೆ ಹೋಗಿದೆ. ಅದು ಸಾಮಾನ್ಯ ಅಂತ ನಾನು ಅಂದುಕೊಳ್ಳುವುದಿಲ್ಲ. ಎಲ್ಲರಿಗೂ ಬಜೆಟ್ ನಲ್ಲಿ ಒತ್ತು ನೀಡಲಾಗಿದೆ ಎಂದಿದ್ದಾರೆ.

ಮೂಲಭೂತ ಸೌಲಭ್ಯ, ನೀರಾವರಿ, ಸಮಾಜ ಕಲ್ಯಾಣ, ಗ್ಯಾರಂಟಿ ಯೋಜನೆಗಳಿಗೆ ಸೇರಿದಂತೆ ಎಲ್ಲ ಇಲಾಖೆಗಳಿಗೂ ನ್ಯಾಯ ಒದಗಿಸಿದ್ದಾರೆ. ಕೈಗಾರಿಕೆ, ಕೃಷಿ, ಶಿಕ್ಷಣ, ನಗರಾಭಿವೃದ್ಧಿ ಸೇರಿ ಹಲವು ವಲಯಗಳಿಗೆ ಹೆಚ್ಚು ಒತ್ತು ಕೊಟ್ಟಿದ್ದಾರೆ. ಮಹಿಳಾ ಸಬಲೀಕರಣಕ್ಕೆ ಆಧ್ಯತೆ ನೀಡಲಾಗಿದ್ದು, ರಾಜ್ಯದ ಸಮಗ್ರ ಅಭಿವೃದ್ಧಿಗೆ ಬಜೆಟ್ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಪೊಲೀಸ್ ಇಲಾಖೆಯ ಬಲವರ್ಧನೆಗೆ ಒತ್ತು ನೀಡಿರುವುದು ಸ್ವಾಗತರ್ಹ:- ನಮ್ಮ ಸರ್ಕಾರವು ನಂದಿ ಬೆಟ್ಟದ ಕೂಡುಗುರ್ಕಿ ಮತ್ತು ಕೆಜಿಎಫ್ ಬಳಿ ಎರಡು ಭಾರತೀಯ ಮೀಸಲು ಪೊಲೀಸ್ ಪಡೆಗಳನ್ನು (ಐಆರ್ ಬಿ) ಸ್ಥಾಪಿಸಲು 80 ಕೋಟಿ ರೂಪಾಯಿ ಅನುದಾನ ಕಲ್ಪಿಸಲಾಗಿದೆ. ಬೆಂಗಳೂರು ನಗರದ ಪರಿಣಾಮಕಾರಿ ಪೊಲೀಸ್ ವ್ಯವಸ್ಥೆಗಾಗಿ ಈಗಿರುವ 8 ಪೊಲೀಸ್ ವಿಭಾಗಗಳನ್ನು 11ಕ್ಕೆ ಏರಿಕೆ ಮಾಡಲಾಗಿದೆ. ರಾಜ್ಯದಲ್ಲಿ ಪ್ರಸ್ತುತ 5 ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರಸಕ್ತ ವರ್ಷದಿಂದ ಬಳ್ಳಾರಿ, ದಾವಣಗೆರೆ, ಮೈಸೂರ್ ಮತ್ತು ಬೆಂಗಳೂರು ಕೇಂದ್ರ ವಲಯಗಳಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳ ಸ್ಥಾಪನೆಗೆ ಒತ್ತು ನೀಡಿರುವುದು ಸ್ವಾಗತಾರ್ಹ ಎಂದಿದ್ದಾರೆ.

ಪೊಲೀಸ್ ಗೃಹ 2025 ಯೋಜನೆಯಲ್ಲಿ ಇವರೆಗೆ 2016 ವಸತಿಗೃಹ ನಿರ್ಮಾಣ ಕಾರ್ಯ ಪೂರ್ಣವಾಗಿದ್ದು, 2068 ವಸತಿಗೃಹಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಈ ಯೋಜನೆಗೆ 2025-26ನೆ ಸಾಲಿಗೆ 300 ಕೋಟಿ ರೂ. ನೀಡಿರುವುದು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ವಾರ್ಷಿಕೋತ್ಸವದ ಆರೋಗ್ಯ ತಪಾಸಣೆಗೆ ನೀಡಲಾಗುತ್ತಿದ್ದ ವೆಚ್ಚವನ್ನು ಹೆಚ್ಚಿಸಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+