ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ: ಛತ್ರಿ ಭಾಗ್ಯ
ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷ ಬಿಜೆಪಿ ಅವಕಾಶ ಸಿಕ್ಕಾಗಲೆಲ್ಲಾ ಹರಿಹಾಯುತ್ತಿದೆ. ಬಿಜೆಪಿ, ಕಾಂಗ್ರೆಸ್ ಪಕ್ಷದ ತಪ್ಪುಗಳನ್ನು ನೋಡುತ್ತಿದ್ದು, ಆ ತಪ್ಪನ್ನು ಹಿಡಿದು ಸರ್ಕಾರದ ವಿರುದ್ಧ ಕಿಡಿ ಕಾರುತ್ತಿದೆ. ಕೈ ನಾಯಕರ ಆಡಳಿತದ ವಿರುದ್ಧ ರಾಜ್ಯ ಬಿಜೆಪಿ ಸತತ ಕೆಲವು ದಿನಗಳಿಂದ ಟ್ವೀಟ್ ವಾರ್ ಮುಂದುವರೆಸಿದೆ.
ಗುರುವಾರ ರಾಜ್ಯ ಸರ್ಕಾರದ ವಿರುದ್ಧ ಉಡ್ತಾ ಬೆಂಗಳೂರು ಎಂದು ಟ್ವೀಟ್ ಮಾಡಿ ಗಮನ ಸೆಳೆದಿದ್ದ ಬಿಜೆಪಿ, ಈಗ ಛತ್ರಿ ಭಾಗ್ಯ ಎನ್ನುವ ಟ್ವೀಟ್ ಮಾಡಿ ಎಲ್ಲರ ಚಿತ್ತ ಕದ್ದಿದೆ. ಈ ಟ್ವೀಟ್ನಲ್ಲಿ ಬಿಜೆಪಿ ಒಂದು ಫೋಟೋ ಹಾಕಿದ್ದು, ಫೋಟೋದಲ್ಲಿ ಬಸ್ ಚಾಲಕ ಛತ್ರಿ ಹಿಡಿದು ಬಸ್ ಚಾಲನೆ ಮಾಡುತ್ತಿರುವುದು ಕಂಡು ಬಂದಿದ್ದು. ಹಿಂಭಾಗದಲ್ಲಿ ಪ್ರಯಾಣಿಕರನ್ನು ಕಾಣಬಹುದು.

ಉತ್ತರ ಕರ್ನಾಟಕ ಭಾಗದಲ್ಲಿ ಜನರು ಅನುಭವಿಸುತ್ತಿರುವ ಕಷ್ಟವನ್ನು ಆಗಾಗ ರಾಜ್ಯ ಸರ್ಕಾರದ ಮುಂದೆ ತರುವ ವಿಡಿಯೋಗಳನ್ನು ಕಾಣಬಹುದಾಗಿದೆ. ಇತ್ತೀಚಿಗೆ ಸಾಮಾಜಿಕ ತಾಣದಲ್ಲಿ ವಿಡಿಯೋ ಒಂದು ವೈರಲ್ ಆಗಿತ್ತು. ಆ ವಿಡಿಯೋದಲ್ಲಿ ಚಾಲಕ ಛತ್ರಿ ಹಿಡಿದು ಬಸ್ ಚಲಾವಣೆ ಮಾಡುತ್ತಿರುವ ದೃಶ್ಯಗಳು ಕಂಡು ಬಂದಿದ್ದವು. ಈ ದೃಶ್ಯ ಈ ಭಾಗದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳಿಗೆ ಹಿಡಿದ ಕೈ ಗನ್ನಡಿಯಾಗಿದೆ.
ಸನ್ಮಾನ್ಯ @RLRBTM ಅವರೇ, ಇದು ನಮ್ಮ ಸರ್ಕಾರಿ ಬಸ್ಸುಗಳ ದುಃಸ್ಥಿತಿ. ಈ ರೀತಿ ಒಂದು ಕೈಯಲ್ಲಿ ಕೊಡೆ, ಒಂದು ಕಯ್ಯಲ್ಲಿ ಸ್ಟಿಯರಿಂಗ್ ವೀಲ್ ಬ್ಯಾಲೆನ್ಸ್ ಮಾಡುತ್ತ ಓಡಿಸುವುದರಿಂದ ಚಾಲಕರು ಹಾಗೂ ಪ್ರಯಾಣಿಕರ ಜೀವಕ್ಕೆ ಕುತ್ತು. ಇದೇನಾ ಚಾಲಕರಿಗೆ ಇರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ ? (standard operating procedure). ಚಾಲಕರ,… pic.twitter.com/zcG43pdWvf
— Basanagouda R Patil (Yatnal) (ಮೋದಿಯವರ ಕುಟುಂಬ) (@BasanagoudaBJP) May 24, 2024
ಇದನ್ನೆ ಬಿಂಬಿಸುವ ಪೋಸ್ಟರ್ನ್ನು ಬಿಜೆಪಿ ಹಂಚಿಕೊಂಡಿದೆ. ಈ ಪೋಸ್ಟ್ನಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲನೆಯನ್ನು ಸಿದ್ಧರಾಮಯ್ಯ ಮಾಡುತ್ತಿರುವಂತೆ ತೋರುತ್ತಿದ್ದು ಕೈಯಲ್ಲಿ ಛತ್ರಿ ಹಿಡಿದು ಚಾಲನೆ ಮಾಡುತ್ತಿದ್ದಾರೆ. ಹಿಂಭಾಗದಲ್ಲಿ ಉಪ ಮುಖ್ಯ ಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕುಳಿತಿಕೊಂಡಿರುವುದು ಕಂಡು ಬಂದಿದೆ. ಈ ಪೋಸ್ಟ್ ಸಾಮಾಜಿಕ ತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
ಉಡ್ತಾ ಬೆಂಗಳೂರು
ಬಿಜೆಪಿ ಗುರುವಾರ ಸಹ ಇಂತಹದ್ದೇ ಒಂದು ಟ್ವೀಟ್ ಮಾಡಿ ರಾಜ್ಯದಲ್ಲಿನ ಪರಿಸ್ಥಿತಿಯ ಬಗ್ಗೆ ಬೆಳಕು ಚೆಲ್ಲಿತ್ತು. ಈ ಟ್ವೀಟ್ನಲ್ಲಿ ಬಿಜೆಪಿ ಉಡ್ತಾ ಬೆಂಗಳೂರು ಎಂಬ ಶಿರ್ಷಿಕೆಯಡಿ ಒಂದು ಪೋಸ್ಟ್ ಮಾಡಿತ್ತು. ಈ ಪೋಸ್ಟ್ನಲ್ಲಿ ರಾಜ್ಯ ಸರ್ಕಾರದ ಆಡಳಿತದ ವಿರುದ್ಧ ಕತ್ತಿ ಮಸಿದಿದೆ. ಬೆಂಗಳೂರಿನ ಹೊರ ವಲಯದಲ್ಲಿ ಇತ್ತೀಚಿಗೆ ನಡೆದ ರೇವ್ ಪಾರ್ಟಿ ಹಾಗೂ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆಯನ್ನು ಬಿಂಬಿಸುವ ಪೋಸ್ಟ್ ಇದಾಗಿದ್ದು, ಈ ಪೋಸ್ಟ್ ಸಖತ್ ವೈರಲ್ ಆಗಿತ್ತು. ಈಗ ಬಿಜಿಪಿ ಇಂತಹದ್ದೇ ಮತ್ತೊಂದು ಪೋಸ್ಟ್ ಮಾಡಿ ಭಾರೀ ಸುದ್ದಿಯಲ್ಲಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications