ಕೋಗಿಲು ಅಕ್ರಮದಲ್ಲಿ ನೆಲೆ ಕಳೆದುಕೊಂಡವರಿಗೆ ಮನೆ: ಬಿಜೆಪಿಯಿಂದ ಜ.5 ರಂದು ಬೃಹತ್ ಪ್ರತಿಭಟನೆ
ಬೆಂಗಳೂರು: ಕೋಗಿಲು ಬಡಾವಣೆಯಲ್ಲಿ ಅಕ್ರಮ ನಿವಾಸಿಗಳ ತೆರವು ವಿವಾಧ ಆಗುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಸಭೆ ನಡೆಸಿದ್ದು, ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡ ಅರ್ಹರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲಾಗುವುದು. ಯಾರು ಅರ್ಹರು ಇದ್ದಾರೋ ಅವರಿಗೆ ವ್ಯವಸ್ಥೆ ಮಾಡಲಾಗುವುದು. 11.20 ಲಕ್ಷ ಮೌಲ್ಯದಲ್ಲಿ ಮನೆ ನಿರ್ಮಿಸಿಕೊಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದು, ಸರ್ಕಾರದ ನಿರ್ಧಾರದ ಕುರಿತು ಬಿಜೆಪಿ ಬೃಹತ್ ಪ್ರತಿಭಟನೆಗೆ ಮುಂದಾಗಿದೆ.
ಕೋಗಿಲು ಅಕ್ರಮ ಮನೆ- ಗುಡಿಸಲುಗಳ ತೆರವು ಪ್ರಕರಣದಲ್ಲಿ ವಾಸಸ್ಥಳ ಕಳಕೊಂಡವರಿಗೆ ಮನೆ ನೀಡಲು ಮುಂದಾದ ಕರ್ನಾಟಕ ಸರ್ಕಾರದ ಕ್ರಮದ ವಿರುದ್ಧ ಜನವರಿ 5 ರಂದು ಬಿಜೆಪಿ ವತಿಯಿಂದ ಫ್ರೀಡಂ ಪಾರ್ಕಿನಲ್ಲಿ ದೊಡ್ಡ ಪ್ರಮಾಣದ ಹೋರಾಟ ನಡೆಸಲಿದ್ದೇವೆ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಅವರು ತಿಳಿಸಿದರು. ಕೋಗಿಲುವಿನಲ್ಲಿ ಅಕ್ರಮ ಮನೆಗಳ ತೆರವು ಪ್ರಕರಣದ ಕುರಿತು ಸತ್ಯಾಸತ್ಯತೆ ತಿಳಿಯಲು ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು 5 ಜನರ ಸಮಿತಿ ರಚಿಸಿದ್ದಾರೆ. ಅದರ ಮೊದಲ ಸಭೆ ಇಂದು ನಡೆದಿದೆ ಎಂದರು. ಸ್ಥಳ ಪರಿಶೀಲನೆಯನ್ನೂ ಮಾಡಲಿದ್ದೇವೆ ಎಂದು ತಿಳಿಸಿದರು.

ಅಲ್ಲಿನ ಸರ್ವೇ ನಂಬರ್, ಯಾವ ರಾಜ್ಯದವರು, ಯಾವ ದೇಶದವರು ಎಂಬಿತ್ಯಾದಿ ಮಾಹಿತಿಯನ್ನು ಸಂಗ್ರಹಿಸಲಿದ್ದೇವೆ. ಒಂದು ವಾರದಲ್ಲಿ ಈ ಸಂಬಂಧ ರಾಜ್ಯಾಧ್ಯಕ್ಷರಿಗೆ ವರದಿ ಕೊಡುವುದಾಗಿ ಹೇಳಿದರು. ತರಾತುರಿಯಲ್ಲಿ ನಾಳೆಯೇ ಮನೆ ನೀಡಲು ಸಾಧ್ಯವಿಲ್ಲ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಅವರು ಹೇಳಿದರು. ನನ್ನ ಕ್ಷೇತ್ರದಲ್ಲೂ ಮನೆಗಳು ನಿರ್ಮಾಣ ಹಂತದಲ್ಲಿವೆ. ಆರು ವರ್ಷಗಳ ಹಿಂದೆ 1 ಲಕ್ಷ ಹಣ ಕಟ್ಟಿದವರಿಗೆ ಮನೆ ಕೊಟ್ಟಿಲ್ಲ. 3 ಲಕ್ಷ ಆದಾಯ ಬೇಕು. ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆ ಕೊಡಲು ಬೆಂಗಳೂರು ನಗರದಲ್ಲಿ 5 ವರ್ಷ ವಾಸವಾಗಿರುವ ದೃಢೀಕರಣ ಪತ್ರವನ್ನು ಕಂದಾಯ ಇಲಾಖೆಯಿಂದ ಕೊಡಬೇಕಾಗುತ್ತದೆ. ಅಧಿಕಾರಿಗಳು ಅಂಥ ದೃಢೀಕರಣ ಪತ್ರವನ್ನು ನೀಡಿದರೆ ಅದು ಕಾನೂನಿಗೆ ವಿರುದ್ಧ ಆಗಲಿದೆ ಎಂದು ತಿಳಿಸಿದರು.
ಬೈಯಪ್ಪನಹಳ್ಳಿಯಲ್ಲಿ 14 ಮಹಡಿ ಇರುವ ಮನೆ ನಿರ್ಮಾಣ ನಡೆದಿದೆ. ಆನ್ಲೈನ್ನಲ್ಲಿ ಶೇ 50 ಮನೆಗಳ ಮಂಜೂರಾತಿ ನಡೆದಿದೆ. ಶಾಸಕರು ನೀಡುವ ಶೇ 50 ಮನೆಗಳನ್ನು ಇನ್ನೂ ನೀಡಿಲ್ಲ ಎಂದರು. 6 ವರ್ಷದಿಂದ ಕಾಯುವವರಿಗೆ ಮನೆ ಕೊಟ್ಟಿಲ್ಲ; ವಾರದಲ್ಲಿ ಮನೆ ಇಲ್ಲದವರಿಗೆ ಮನೆ ಕೊಡಲು ಹೇಗೆ ಸಾಧ್ಯ? ಇದು ಅಕ್ರಮವಾಗಿ ಮನೆ ಕೊಟ್ಟಂತಾಗುತ್ತದೆ ಎಂದು ಆಕ್ಷೇಪಿಸಿದರು. ಇನ್ನೂ ಸರಕಾರಿ ಜಾಗಕ್ಕೆ ವಿದ್ಯುತ್ ಸಂಪರ್ಕ ನೀಡಿದ್ದು ಅಕ್ರಮವಲ್ಲವೇ? ಅಲ್ಲಿ ಮನೆ ಕಟ್ಟಿದವರ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಬೇಕಿತ್ತು. ವಿದ್ಯುತ್ ಸಂಪರ್ಕ ನೀಡಿದವರ ಮೇಲೂ ಕ್ರಮ ಕೈಗೊಳ್ಳಬೇಕಿತ್ತು. ಸರ್ಕಾರ ತರಾತುರಿಯಲ್ಲಿ ಮನೆ ಕೊಟ್ಟರೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ರಾಜ್ಯಪಾಲರಿಗೂ ಮನವಿ ಕೊಡುತ್ತೇವೆ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಅವರು ಹೇಳಿದರು.
-
ಯಾವ ಧರ್ಮವೂ ಧ್ವೇಷ ಬೋಧಿಸಲ್ಲ: ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ: ಸಿದ್ದರಾಮಯ್ಯ -
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ












Click it and Unblock the Notifications