ಕುಮಾರಸ್ವಾಮಿ ಬಜೆಟ್ ಮಂಡನೆ: ಬಿಜೆಪಿ ತಂತ್ರವೇನು?
Recommended Video

ಬೆಂಗಳೂರು, ಫೆಬ್ರವರಿ 08: ಇಂದು (ಫೆಬ್ರವರಿ 08) ರಂದು ಮಧ್ಯಾಹ್ನ 12:30 ಕ್ಕೆ ಕುಮಾರಸ್ವಾಮಿ ಅವರು ಮೈತ್ರಿ ಸರ್ಕಾರದ ಎರಡನೇ ಬಜೆಟ್ ಮಂಡಿಸಲಿದ್ದಾರೆ. ಎರಡು ದಿನದಿಂದ ಅಧಿವೇಶನದಲ್ಲಿ ಗದ್ದಲ ಎಬ್ಬಿಸಿರುವ ಬಿಜೆಪಿ ಮೂರನೇ ದಿನ ಯಾವ ತಂತ್ರ ಅನುಸರಿಸುತ್ತದೆ ಎಂಬುದು ಕುತೂಹಲ ಕೆರಳಿಸಿದೆ.
ಬಜೆಟ್ ಭಾಷಣ ಆರಂಭ ಆಗುವ ಮುನ್ನವೇ ಬಿಜೆಪಿಯು ಸದನದಲ್ಲಿ ಗದ್ದಲ ಎಬ್ಬಿಸಲಿದೆ ಎನ್ನಲಾಗಿದೆ. ಬಜೆಟ್ ಪ್ರತಿಗಳನ್ನು ಮುಂದಾಗಿ ನೀಡುವುದು ಬೇಡವೆಂಬ ನಿರ್ಣಯವನ್ನು ಎಚ್ಡಿಕೆ ಮಾಡಿದ್ದು, ಇದರ ವಿರುದ್ಧ ನಾಳೆ ಬಜೆಟ್ ಭಾಷಣೆ ಆರಂಭಕ್ಕೂ ಮುನ್ನವೇ ಬಿಜೆಪಿ ಪ್ರತಿಭಟಿಸಲಿದೆ.

ಬಜೆಟ್ ಭಾಷಣ ಆರಂಭಕ್ಕೂ ಮುನ್ನವೇ ಎಲ್ಲಾ ಸದಸ್ಯರಿಗೂ ಬಜೆಟ್ ಪ್ರತಿಯನ್ನು ನೀಡುವುದು ಸಂಪ್ರದಾಯ. ಆದರೆ ಈ ಬಾರಿ ಸಂಪ್ರದಾಯವನ್ನು ಮುರಿಯುವ ನಿರ್ಣಯವನ್ನು ಎಚ್ಡಿಕೆ ಮಾಡಿದ್ದಾರೆ. ಸರ್ಕಾರದ ವಿರುದ್ಧ ಹರಿಹಾಯಲು ಸಿದ್ಧವಾಗಿರುವ ಬಿಜೆಪಿಗೆ ಕುಮಾರಸ್ವಾಮಿ ಅವರ ಈ ನಿರ್ಣಯ ಗದ್ದಲಕ್ಕೆ ವಸ್ತು ಒದಗಿಸಿದ ಹಾಗೆ ಆಗಿದೆ.
ಬಜೆಟ್ಗೆ ಮುನ್ನವೇ ಪ್ರತಿಗಳನ್ನು ನೀಡಬೇಕು ಎಂದು ಈಗಾಗಲೇ ಯಡಿಯೂರಪ್ಪ ಅವರು ಸಭಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಒಂದೊಮ್ಮೆ ಬಜೆಟ್ ಪ್ರತಿಗಳು ಭಾಷಣಕ್ಕೆ ಮುನ್ನಾ ವಿತರಣೆ ಆಗಲಿಲ್ಲವೆಂದರೆ ಗದ್ದಲ ಆಗುವುದು ಖಂಡಿತ.
ಒಂದೊಮ್ಮೆ ಬಜೆಟ್ ಭಾಷಣ ಸುಸೂತ್ರವಾಗಿ ನಡೆದರೆ ಬಜೆಟ್ ಪ್ರತಿಗಳನ್ನು ಹರಿದುಹಾಕಿ ಬಜೆಟ್ ವಿರುದ್ಧ ಪ್ರತಿಭಟನೆಯನ್ನು ಬಿಜೆಪಿ ಮಾಡಲಿದೆ. ನಂತರ ಬಜೆಟ್ ಮೇಲಿನ ಚರ್ಚೆಯಲ್ಲಿ ಬಜೆಟ್ ಅನ್ನು ಟೀಕಿಸಿ. ಹಾಗೂ ಅನುಮೋದನೆ ಸಮಯ ಕಾಂಗ್ರೆಸ್ನ ಕೆಲವು ಶಾಸಕರಿಂದಲೂ ಬಜೆಟ್ ವಿರುದ್ಧವಾಗಿ ಮತಹಾಕಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ತಂತ್ರವನ್ನು ಬಿಜೆಪಿ ಹೆಣೆದಿದೆ ಎನ್ನಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications