ಎಚ್ಡಿಕೆ ಯನ್ನು ಭೇಟಿ ಮಾಡಿದ ಬಿಜೆಪಿ ಅತೃಪ್ತ ಶಾಸಕರು: ಭಿನ್ನಮತದ ಸೂಚನೆ
Recommended Video
ಬೆಂಗಳೂರು, ಫೆಬ್ರವರಿ 20: ಬಿಜೆಪಿ ಭಿನ್ನಮತೀಯ ಶಾಸಕರು ಕೆಲವರು ಜೆಡಿಎಸ್ ನಾಯಕ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ರಾಜಕೀಯ ಚರ್ಚೆ ನಡೆಸಿದ್ದಾರೆ.
ಸಚಿವ ಸ್ಥಾನ ಸಿಗದೇ ಪಕ್ಷದ ಮೇಲೆ ಅಸಮಾಧಾನಗೊಂಡಿರುವ ಬಿಜೆಪಿ ಹಿರಿಯ ಶಾಸಕರಾದ ಉಮೇಶ್ ಕತ್ತಿ, ಮುರಗೇಶ ನಿರಾಣಿ ಹಾಗೂ ಗೂಳಿಹಟ್ಟಿ ಶೇಖರ್ ಅವರು ಕುಮಾರಸ್ವಾಮಿ ಅವರನ್ನು ಭೇಟಿ ಆಗಿದ್ದಾರೆ ಎಂಬ ಸುದ್ದಿ ವಿಧಾನಸೌಧ ಮೊಗಸಾಲೆಯಲ್ಲಿ ಹರಿದಾಡುತ್ತಿದೆ.
ಪಕ್ಷಕ್ಕೆ ಬಂದ ಹೊಸಬರಿಗೆ ಅವಕಾಶ ಕೊಟ್ಟು ಮೂಲ ಬಿಜೆಪಿಗರನ್ನು ಕಡೆಗಣಿಸಿದ್ದಾರೆ ಎಂದು ಈಗಾಗಲೇ ಹಲವು ಮೂಲ ಬಿಜೆಪಿಗರು ರಾಜ್ಯ ಬಿಜೆಪಿ ನಾಯಕತ್ವದ ಮೇಲೆ ಸಿಟ್ಟಾಗಿದ್ದಾರೆ. ಇದೇ ಕಾರಣಕ್ಕೆ ಕೆಲವರು ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರನ್ನು ಭೇಟಿ ಆಗಿ 'ಭವಿಷ್ಯ'ದ ಚರ್ಚೆ ಮಾಡಿದ್ದಾರೆ.

ಸರ್ಕಾರ ಕೆಡವುವ ಕಾರ್ಯಕ್ಕೆ ನನ್ನನ್ನು ಕರೆಯಬೇಡಿ: ಎಚ್ಡಿಕೆ
ಮುಂದಿನ ದಿನಗಳಲ್ಲಿ ಭಿನ್ನಮತ ಹೆಚ್ಚಾಗಿ ಸರ್ಕಾರ ಕೆಡವುವ ಪರಿಸ್ಥಿತಿ ನಿರ್ಮಾಣವಾದರೆ ತಾವು ಬೆಂಬಲ ನೀಡಬೇಕು ಎಂದು ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಕುಮಾರಸ್ವಾಮಿ ಅವರು ಸರ್ಕಾರ ಕೆಡವಲು ಒಪ್ಪಿಗೆ ನೀಡಿಲ್ಲ ಎನ್ನಲಾಗಿದೆ.

ಸುದ್ದಿಯನ್ನು ಅಲ್ಲಗಳೆದಿರುವ ನಿರಾಣಿ
ಆದರೆ ಈ ಸುದ್ದಿಯನ್ನು ಅಲ್ಲಗಳೆದಿರುವ ಮುರಗೇಶ ನಿರಾಣಿ, 'ನಮ್ಮ ರಾಜಕೀಯ ಭವಿಷ್ಯಕ್ಕಾಗಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದೇವೆ ಎಂಬುದು ಸುಳ್ಳು, ನಮಗೆ ಯಡಿಯೂರಪ್ಪ ನಾಯಕತ್ವದ ಮೇಲೆ ವಿಶ್ವಾಸವಿದೆ' ಎಂದಿದ್ದಾರೆ.

ನಿಖಿಲ್ ಕುಮಾರಸ್ವಾಮಿ ನಿಶ್ಚಿತಾರ್ಥ ಕಾರ್ಯ ನಡೆದಿದೆ
'ನಿಖಿಲ್ ಕುಮಾರಸ್ವಾಮಿ ನಿಶ್ಚಿತಾರ್ಥ ಸಂದರ್ಭದಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಕೈ-ಕುಲುಕಿ ಶುಭ ಹಾರೈಸಿದ್ದೇವೆ ವಿನಃ ರಾಜಕೀಯ ಚರ್ಚೆ ಮಾಡಿಲ್ಲ' ಎಂದು ನಿರಾಣಿ ಹೇಳಿದ್ದಾರೆ.

ಸ್ವಾಮೀಜಿ ನೇತೃತ್ವದಲ್ಲಿ ಶಾಸಕರ ಗುಪ್ತ ಸಭೆ
ನಿರಾಣಿ ನಾಯಕತ್ವದಲ್ಲಿ ಬಿಜೆಪಿಯ ಪಂಚಮಸಾಲಿ ಲಿಂಗಾಯತ ಶಾಸಕರು ಹಾಗೂ ಇನ್ನೂ ಕೆಲವು ಅತೃಪ್ತ ಶಾಸಕರು ಸ್ವಾಮೀಜಿ ಒಬ್ಬರ ನೇತೃತ್ವದಲ್ಲಿ ಕೆಲವು ದಿನಗಳ ಹಿಂದೆ ಗುಪ್ತ ಸಭೆ ನಡೆಸಿ, ಸಚಿವ ಸ್ಥಾನಕ್ಕಾಗಿ ಯಡಿಯೂರಪ್ಪ ಮೇಲೆ ಒತ್ತಡ ಹೇರಲು ತೀರ್ಮಾನಿಸಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications