ಚಿತ್ರಗಳಲ್ಲಿ ಬಿಜೆಪಿ ಚುನಾವಣೆ ಪ್ರಚಾರ
ಬೆಂಗಳೂರು, ಮಾ.12 : 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿ ಚುನಾವಣೆ ಅಖಾಡಕ್ಕೆ ಧುಮುಕಿರುವ ಬಿಜೆಪಿ ರಾಜ್ಯಾದ್ಯಂತ ಬಿರುಸಿನಿಂದ ಪ್ರಚಾರ ಕಾರ್ಯ ಕೈಗೊಂಡಿದೆ. ಪಕ್ಷದ ನಾಯಕರು ವಿವಿಧ ಜಿಲ್ಲೆಗಳಲ್ಲಿ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಗುರುವಾರ ಪಕ್ಷದ ಅಂತಿಮ ಪಟ್ಟಿ ಪ್ರಕಟವಾಗಲಿದೆ.
ಬುಧವಾರ ಕೋಲಾರ, ಹಾವೇರಿ, ಶಿವಮೊಗ್ಗ ಮುಂತಾದ ಕಡೆ ಪ್ರಚಾರ ಕಾರ್ಯ ನಡೆಸಿದ ವಿವಿಧ ನಾಯಕರು, ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಕಾರ್ಯಕರ್ತರ ಸಭೆಯನ್ನು ನಡೆಸಿ, ಚುನಾವಣೆ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿದರು. ಚಿತ್ರಗಳಲ್ಲಿ ನೋಡಿ ಬಿಜೆಪಿ ಪ್ರಚಾರ

ಶಿವಮೊಗ್ಗದಲ್ಲಿ ಕಾರ್ಯಕರ್ತರ ಸಭೆ
ಬುಧವಾರ ಶಿವಮೊಗ್ಗದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿತ್ತು. ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಸಭೆಯಲ್ಲಿ ಪಾಲ್ಗೊಂಡಿದ್ದರು.

ರಾಮನಗರದಲ್ಲಿ ಪ್ರಚಾರ
ರಾಮನಗರದಲ್ಲಿಯೂ ಬುಧವಾರ ಕಾರ್ಯಕರ್ತ ಸಭೆಯನ್ನು ಆಯೋಜಿಸಲಾಗಿತ್ತು. ಚುನಾವಣೆ ಕಾರ್ಯತಂತ್ರದ ಕುರಿತು ಚರ್ಚೆ ನಡೆಸಲಾಯಿತು.

ಹಾವೇರಿಯಲ್ಲಿ ಶೆಟ್ಟರ್ ಪ್ರಚಾರ
ಹಾವೇರಿ ಜಿಲ್ಲೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡಿದ್ದರು. ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಉದಾಸಿ ಸಹ ಭಾಗವಹಿಸಿದ್ದರು.

ಕೋಲಾರದಲ್ಲಿ ಪ್ರಚಾರ
ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಕೋಲಾರದಲ್ಲಿಯೂ ಕಾರ್ಯಕರ್ತರ ಸಭೆಯನ್ನು ಬುಧವಾರ ನಡೆಸಲಾಯಿತು.












Click it and Unblock the Notifications