ಶಾಸಕಾಂಗ ಸಭೆಯಲ್ಲಿ ಯಡಿಯೂರಪ್ಪ ಬಳಿ ಬಿಜೆಪಿ ಮುಖಂಡರ ದೂರು
ಬೆಂಗಳೂರು, ನವೆಂಬರ್ 30: ರಾಜ್ಯ ಬಿಜೆಪಿಯು ಈ ಹಿಂದೆ ಬಿಡುಗಡೆ ಮಾಡಿದ್ದ ಕ್ಷೇತ್ರವಾರು ಚುನಾವಣೆ ಉಸ್ತುವಾರಿಗಳು ಮತ್ತು ಪ್ರಭಾರಿಗಳ ಪಟ್ಟಿಯೂ ತಂತ್ರಗಾರಿಕೆ ಹೊಂದಿಲ್ಲ, ಅದನ್ನು ಬದಲಾಯಿಸುವಂತೆ ಬಿಜೆಪಿ ಪ್ರಮುಖ ಶಾಸಕರು ಪಟ್ಟು ಹಿಡಿದಿದ್ದಾರೆ.
ನಿನ್ನೆ ನಗರದಲ್ಲಿ ನಡೆದ ಬಿಜೆಪಿ ಪಕ್ಷ ಶಾಸಕಾಂಗ ಸಭೆಯಲ್ಲಿ ಬಹುತೇಕ ಶಾಸಕರು ಕ್ಷೇತ್ರವಾರು ಉಸ್ತುವಾರಿ ಮತ್ತು ಪ್ರಭಾರಿಗಳನ್ನು ಬದಲಾಯಿಸಿ ಎಂದು ಯಡಿಯೂರಪ್ಪ ಅವರ ಬಳಿ ಒತ್ತಾಯಿಸಿದ್ದಾರೆ.
ಶಾಸಕರ ಒತ್ತಾಯ ಹೆಚ್ಚಾದ ಕಾರಣ ಯಡಿಯೂರಪ್ಪ ಅವರು ಬದಲಾವಣೆಗೆ ಒಪ್ಪಿದ್ದು, ಶೀಘ್ರದಲ್ಲಿಯೇ ಕ್ಷೇತ್ರವಾರು ಲೋಕಸಭಾ ಚುನಾವಣಾ ಉಸ್ತುವಾರಿ ಮತ್ತು ಪ್ರಭಾರಿಗಳ ಪರಿಷ್ಕೃತ ಪಟ್ಟಿಯನ್ನು ಸಿದ್ದಪಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕೆ.ಎಸ್.ಈಶ್ವರಪ್ಪ, ಸಂಪಂಗಿ, ವಿ.ಸೋಮಣ್ಣ, ಸದಾನಂದಗೌಡ ಇನ್ನೂ ಹಲವು ಪ್ರಮುಖ ಮುಖಂಡರುಗಳೇ ಉಸ್ತುವಾರಿ ಹಾಗೂ ಪ್ರಭಾರಿ ಪಟ್ಟಿಗೆ ಬೇಸರ ವ್ಯಕ್ತಪಡಿಸಿರುವ ಕಾರಣ ಉಸ್ತುವಾರಿ ಹಾಗೂ ಪ್ರಭಾರಿ ಪಟ್ಟಿಯನ್ನು ತಿದ್ದುವ ಭರವಸೆಯನ್ನು ಯಡಿಯೂರಪ್ಪ ನೀಡಿದ್ದಾರೆ.

ಈಶ್ವರಪ್ಪ ತೀವ್ರ ಅಸಮಾಧಾನ
ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರಿಗೆ ಮೈಸೂರು-ಕೊಡಗು ಕ್ಷೇತ್ರದ ಉಸ್ತುವಾರಿ ನೀಡಲಾಗಿತ್ತು. ಇದಕ್ಕೆ ಭಾರಿ ವಿರೋಧ ವ್ಯಕ್ತಪಡಿಸಿದ ಅವರು, ಶಿವಮೊಗ್ಗ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ನನಗೆ ಮೈಸೂರು-ಕೊಡಗು ನೀಡಿರುವುದು ಸರಿಯಲ್ಲ, ಕ್ಷೇತ್ರ ಬದಲಾಯಿಸಬೇಕು ಎಂದು ಪಟ್ಟು ಹಿಡಿದಿದ್ದರು ಎನ್ನಲಾಗಿದೆ.

ವಿ.ಸೋಮಣ್ಣ ತಕರಾರರು
ವಿ.ಸೋಮಣ್ಣ ಅವರಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಉಸ್ತುವಾರಿ ನೀಡಲಾಗಿದೆ. ಇದು ಸೋಮಣ್ಣ ಅವರನ್ನು ಕೆರಳಿಸಿದೆ. 'ನಾನು ಲಿಂಗಾಯತ ಸಮುದಾಯವನು, ಒಕ್ಕಲಿಗ ಸಮುದಾಯ ಹೆಚ್ಚಿಗೆ ಇರುವ ಕ್ಷೇತ್ರದ ಉಸ್ತುವಾರಿ ನನಗೆ ನೀಡಲಾಗಿದೆ, ಇದು

ಕೋಲಾರ ಕ್ಷೇತ್ರಕ್ಕೂ ಬದಲಾವಣೆ
ಕೋಲಾರ ಲೋಕಸಭಾ ಕ್ಷೇತ್ರದ ಉಸ್ತುವಾರಿಯನ್ನು ಸಂಪಂಗಿ ಅವರಿಗೆ ಕೊಡಲಾಗಿತ್ತು. ಆದರೆ ತಮ್ಮ ಕ್ಷೇತ್ರ ಬದಲಾಯಿಸುವಂತೆ ಸಂಪಂಗಿ ಅವರು ಮನವಿ ಮಾಡಿದ್ದಾರೆ.

ಸದಾನಂದಗೌಡ ಅಸಮಾಧಾನ
ಕೃಷ್ಣಾರೆಡ್ಡಿ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದ ಉಸ್ತುವಾರಿ ನೀಡಿರುವುದಕ್ಕೆ ಸದಾನಂದಗೌಡ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೃಷ್ಣಾರೆಡ್ಡಿ ಅವರು ಕೋಲಾರದವರು, ಅವರಿಗೆ ಕೋಲಾರ ಅಥವಾ ಚಿಕ್ಕಬಳ್ಳಾಪುರ ನೀಡಿ ಎಂದು ಸದಾನಂದಗೌಡ ಅವರು ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.

ಅಧಿವೇಶನದ ಬಳಿಕ ಪರಿಷ್ಕರಣೆ
ಎಲ್ಲರ ಅಸಮಾಧಾನ, ಮನವಿಗಳನ್ನು ಕೇಳಿದ ಯಡಿಯೂರಪ್ಪ ಅವರು, ಬೆಳಗಾವಿ ಅಧಿವೇಶನದ ಬಳಿಕ ಲೋಕಸಭೆ ಚುನಾವಣೆ ಕ್ಷೇತ್ರ ಉಸ್ತುವಾರಿ ಮತ್ತು ಪ್ರಭಾರಿಗಳ ಪಟ್ಟಿಯನ್ನು ಬದಲಾಯಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications