ಶಾಸಕಾಂಗ ಸಭೆಯಲ್ಲಿ ಯಡಿಯೂರಪ್ಪ ಬಳಿ ಬಿಜೆಪಿ ಮುಖಂಡರ ದೂರು
ಬೆಂಗಳೂರು, ನವೆಂಬರ್ 30: ರಾಜ್ಯ ಬಿಜೆಪಿಯು ಈ ಹಿಂದೆ ಬಿಡುಗಡೆ ಮಾಡಿದ್ದ ಕ್ಷೇತ್ರವಾರು ಚುನಾವಣೆ ಉಸ್ತುವಾರಿಗಳು ಮತ್ತು ಪ್ರಭಾರಿಗಳ ಪಟ್ಟಿಯೂ ತಂತ್ರಗಾರಿಕೆ ಹೊಂದಿಲ್ಲ, ಅದನ್ನು ಬದಲಾಯಿಸುವಂತೆ ಬಿಜೆಪಿ ಪ್ರಮುಖ ಶಾಸಕರು ಪಟ್ಟು ಹಿಡಿದಿದ್ದಾರೆ.
ನಿನ್ನೆ ನಗರದಲ್ಲಿ ನಡೆದ ಬಿಜೆಪಿ ಪಕ್ಷ ಶಾಸಕಾಂಗ ಸಭೆಯಲ್ಲಿ ಬಹುತೇಕ ಶಾಸಕರು ಕ್ಷೇತ್ರವಾರು ಉಸ್ತುವಾರಿ ಮತ್ತು ಪ್ರಭಾರಿಗಳನ್ನು ಬದಲಾಯಿಸಿ ಎಂದು ಯಡಿಯೂರಪ್ಪ ಅವರ ಬಳಿ ಒತ್ತಾಯಿಸಿದ್ದಾರೆ.
ಶಾಸಕರ ಒತ್ತಾಯ ಹೆಚ್ಚಾದ ಕಾರಣ ಯಡಿಯೂರಪ್ಪ ಅವರು ಬದಲಾವಣೆಗೆ ಒಪ್ಪಿದ್ದು, ಶೀಘ್ರದಲ್ಲಿಯೇ ಕ್ಷೇತ್ರವಾರು ಲೋಕಸಭಾ ಚುನಾವಣಾ ಉಸ್ತುವಾರಿ ಮತ್ತು ಪ್ರಭಾರಿಗಳ ಪರಿಷ್ಕೃತ ಪಟ್ಟಿಯನ್ನು ಸಿದ್ದಪಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕೆ.ಎಸ್.ಈಶ್ವರಪ್ಪ, ಸಂಪಂಗಿ, ವಿ.ಸೋಮಣ್ಣ, ಸದಾನಂದಗೌಡ ಇನ್ನೂ ಹಲವು ಪ್ರಮುಖ ಮುಖಂಡರುಗಳೇ ಉಸ್ತುವಾರಿ ಹಾಗೂ ಪ್ರಭಾರಿ ಪಟ್ಟಿಗೆ ಬೇಸರ ವ್ಯಕ್ತಪಡಿಸಿರುವ ಕಾರಣ ಉಸ್ತುವಾರಿ ಹಾಗೂ ಪ್ರಭಾರಿ ಪಟ್ಟಿಯನ್ನು ತಿದ್ದುವ ಭರವಸೆಯನ್ನು ಯಡಿಯೂರಪ್ಪ ನೀಡಿದ್ದಾರೆ.

ಈಶ್ವರಪ್ಪ ತೀವ್ರ ಅಸಮಾಧಾನ
ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರಿಗೆ ಮೈಸೂರು-ಕೊಡಗು ಕ್ಷೇತ್ರದ ಉಸ್ತುವಾರಿ ನೀಡಲಾಗಿತ್ತು. ಇದಕ್ಕೆ ಭಾರಿ ವಿರೋಧ ವ್ಯಕ್ತಪಡಿಸಿದ ಅವರು, ಶಿವಮೊಗ್ಗ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ನನಗೆ ಮೈಸೂರು-ಕೊಡಗು ನೀಡಿರುವುದು ಸರಿಯಲ್ಲ, ಕ್ಷೇತ್ರ ಬದಲಾಯಿಸಬೇಕು ಎಂದು ಪಟ್ಟು ಹಿಡಿದಿದ್ದರು ಎನ್ನಲಾಗಿದೆ.

ವಿ.ಸೋಮಣ್ಣ ತಕರಾರರು
ವಿ.ಸೋಮಣ್ಣ ಅವರಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಉಸ್ತುವಾರಿ ನೀಡಲಾಗಿದೆ. ಇದು ಸೋಮಣ್ಣ ಅವರನ್ನು ಕೆರಳಿಸಿದೆ. 'ನಾನು ಲಿಂಗಾಯತ ಸಮುದಾಯವನು, ಒಕ್ಕಲಿಗ ಸಮುದಾಯ ಹೆಚ್ಚಿಗೆ ಇರುವ ಕ್ಷೇತ್ರದ ಉಸ್ತುವಾರಿ ನನಗೆ ನೀಡಲಾಗಿದೆ, ಇದು

ಕೋಲಾರ ಕ್ಷೇತ್ರಕ್ಕೂ ಬದಲಾವಣೆ
ಕೋಲಾರ ಲೋಕಸಭಾ ಕ್ಷೇತ್ರದ ಉಸ್ತುವಾರಿಯನ್ನು ಸಂಪಂಗಿ ಅವರಿಗೆ ಕೊಡಲಾಗಿತ್ತು. ಆದರೆ ತಮ್ಮ ಕ್ಷೇತ್ರ ಬದಲಾಯಿಸುವಂತೆ ಸಂಪಂಗಿ ಅವರು ಮನವಿ ಮಾಡಿದ್ದಾರೆ.

ಸದಾನಂದಗೌಡ ಅಸಮಾಧಾನ
ಕೃಷ್ಣಾರೆಡ್ಡಿ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದ ಉಸ್ತುವಾರಿ ನೀಡಿರುವುದಕ್ಕೆ ಸದಾನಂದಗೌಡ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೃಷ್ಣಾರೆಡ್ಡಿ ಅವರು ಕೋಲಾರದವರು, ಅವರಿಗೆ ಕೋಲಾರ ಅಥವಾ ಚಿಕ್ಕಬಳ್ಳಾಪುರ ನೀಡಿ ಎಂದು ಸದಾನಂದಗೌಡ ಅವರು ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.

ಅಧಿವೇಶನದ ಬಳಿಕ ಪರಿಷ್ಕರಣೆ
ಎಲ್ಲರ ಅಸಮಾಧಾನ, ಮನವಿಗಳನ್ನು ಕೇಳಿದ ಯಡಿಯೂರಪ್ಪ ಅವರು, ಬೆಳಗಾವಿ ಅಧಿವೇಶನದ ಬಳಿಕ ಲೋಕಸಭೆ ಚುನಾವಣೆ ಕ್ಷೇತ್ರ ಉಸ್ತುವಾರಿ ಮತ್ತು ಪ್ರಭಾರಿಗಳ ಪಟ್ಟಿಯನ್ನು ಬದಲಾಯಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications