ಉಮಾಶ್ರೀ ಅಶ್ಲೀಲ-ದ್ವಂದ್ವಾರ್ಥ ಡೈಲಾಗ್ ಕಲಾವಿದೆ

ತಮ್ಮನ್ನು ಅತ್ಯಾಚಾರಿ ಎಂಬರ್ಥದಲ್ಲಿ ಹೀಗಳೆದಿರುವ ಕಾಂಗ್ರೆಸ್ ಸಚಿವೆ ಉಮಾಶ್ರೀ ಅವರನ್ನು ಸಂಪುಟದಿಂದ ಕೈಬಿಡಬೇಕೆಂದೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ಮಾಜಿ ಸಚಿವ ರೇಣುಕಾಚಾರ್ಯ ಆಗ್ರಹಿಸಿದ್ದಾರೆ.
ಈ ಸಂಬಂಧ ನಿನ್ನೆ ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ರೇಣುಕಾಚಾರ್ಯ ಅವರು 'ಕಳೆದ ವಾರ ನಡೆದ ತುಮಕೂರು ಕಾಂಗ್ರೆಸ್ ಸಮಾವೇಶದಲ್ಲಿ ಸಚಿವೆ ಉಮಾಶ್ರೀ ನನ್ನ ಬಗ್ಗೆ ಹಾಗೂ ನಮ್ಮ ಬಿಜೆಪಿ ನಾಯಕರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಯಾವುದೇ ವ್ಯಕ್ತಿಯ ಖಾಸಗಿ ವಿಷಯಗಳನ್ನು ಪ್ರಸ್ತಾಪಿಸುವ ನೈತಿಕತೆ ಉಮಾಶ್ರೀ ಅವರಿಗಿಲ್ಲ' ಎಂದು ಕಿಡಿಕಿಡಿಯಾದರು.
ಅಶ್ಲೀಲ-ದ್ವಂದ್ವಾರ್ಥ ಡೈಲಾಗ್ ಕಲಾವಿದೆ:
'ಉಮಾಶ್ರೀ ಅಶ್ಲೀಲ-ದ್ವಂದ್ವಾರ್ಥ ಡೈಲಾಗ್ ಕಲಾವಿದೆ. ಸಿನಿಮಾ ಮತ್ತು ನಾಟಕಗಳಲ್ಲಿ ಅಶ್ಲೀಲ ಸಂಭಾಷಣೆಗಳ ಮಹಾಪೂರವನ್ನೇ ಹರಿಸಿ, ರಾಜಕೀಯಕ್ಕೆ ಬಂದವರು ಉಮಾಶ್ರೀ. ಉಮಾಶ್ರೀ ಅದನ್ನು ಮರೆತಿದ್ದಾರೆ ಅಂತಕಾಣುತ್ತಿದೆ. ಇಂತಹ ಉಮಾಶ್ರೀ ಅವರು ನನ್ನ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ. ಉಮಾಶ್ರೀಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ನೀಡಿರುವುದೇ ಹಾಸ್ಯಾಸ್ಪದ ಮತ್ತು ಅವಮಾನಕರ' ಎಂದು ರೇಣುಕಾಚಾರ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
'ನನ್ನ ಮತ್ತು ನರ್ಸ್ ಜಯಲಕ್ಷ್ಮಿ ವಿಚಾರಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯ ಈಗಾಗಲೇ ನನ್ನನ್ನು ನಿರ್ದೋಷಿ ಎಂದು ತೀರ್ಪು ನೀಡಿದೆ. ಮಾಧ್ಯಮಗಳಲ್ಲಿ ಪ್ರಚಾರ ಪಡೆಯುವ ದೃಷ್ಟಿಯಿಂದ ಸಚಿವೆ ಉಮಾಶ್ರೀ ಅವರು ಹೀಗೆ ಅವಮಾನಕರವಾಗಿ ಮಾತನಾಡುವುದು ತರವಲ್ಲ. ಮತ್ತೊಮ್ಮೆ ಈ ರೀತಿ ಮಾತನಾಡಿದರೆ ಮಾನನಷ್ಟ ಮೊಕದ್ದಮೆ ಹೂಡುವೆ' ಎಂದು ಮಾಜಿ ಸಚಿವ ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications