KS Eshwarappa: ಬಿಜೆಪಿಯಿಂದ ಕೆಎಸ್ ಈಶ್ವರಪ್ಪ ಉಚ್ಛಾಟನೆ
ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಗನಿಗೆ ಟಿಕೆಟ್ ಕೈತಪ್ಪಿದ ನಂತರ ಬಂಡೆದ್ದಿರುವ ಕೆಎಸ್ ಈಶ್ವರಪ್ಪ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದು ಬಿಜೆಪಿಗೆ ಮುಜುಗರ ತಂದಿತ್ತು. ಈಶ್ವರಪ್ಪ ಮನವೊಲಿಸಲು ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಹಲವು ನಾಯಕರು ಪ್ರಯತ್ನ ಮಾಡಿದ್ದರು. ಆದರೆ ಯಾವುದಕ್ಕೂ ಬಗ್ಗದ ಈಶ್ವರಪ್ಪ ಸ್ಪರ್ಧೆ ಮಾಡಿದ್ದಾರೆ.

ತಮ್ಮ ಚುನಾವಣಾ ಪ್ರಚಾರದಲ್ಲಿ ನರೇಂದ್ರ ಮೋದಿ ಭಾವಚಿತ್ರ ಬಳಸುವ ಮೂಲಕ ಬಿಜೆಪಿಗೆ ಮತ್ತಷ್ಟು ತಲೆನೋವು ತಂದಿದ್ದರು. ಈಗ ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡಿ ಆದೇಶ ನೀಡಲಾಗಿದೆ.
ಚಿಹ್ನೆ ಪಡೆದುಕೊಂಡ ಈಶ್ವರಪ್ಪ
ಸೋಮವಾರ ಸಂಜೆ ನಾಮಪತ್ರ ಹಿಂಪಡೆಯಲು ಚುನಾವಣಾ ಆಯೋಗದ ಗಡುವು ಮುಗಿದ ಕೆಲವೇ ಗಂಟೆಗಳಲ್ಲಿ ಈ ನಿರ್ಧಾರ ಹೊರಬಿದ್ದಿದೆ. ಈಶ್ವರಪ್ಪ ಅವರಿಗೆ ಕಬ್ಬಿನ ಮುಂದೆ ನಿಂತಿರುವ ರೈತನ ಚಿಹ್ನೆಯನ್ನು ನೀಡಲಾಗಿದೆ. ಶಿವಮೊಗ್ಗದಲ್ಲಿ ಮೇ 7 ರಂದು ಲೋಕಸಭಾ ಚುನಾವಣೆಯ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.
ಹಾವೇರಿ ಕ್ಷೇತ್ರದಲ್ಲಿ ತಮ್ಮ ಪುತ್ರ ಕೆ.ಇ.ಕಾಂತೇಶ್ಗೆ ಟಿಕೆಟ್ ನಿರಾಕರಿಸಿದ ಬೆನ್ನಲ್ಲೇ ಬಿಜೆಪಿ ಹಾಗೂ ಈಶ್ವರಪ್ಪ ನಡುವೆ ಸಮರ ಶುರುವಾಗಿತ್ತು. ಬಿಎಸ್ವೈ ಮತ್ತು ಕುಟುಂಬದ ವಿರುದ್ಧ ಈಶ್ವರಪ್ಪ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು.
ತಮ್ಮ ಪುತ್ರನಿಗೆ ಟಿಕೆಟ್ ಕೈತಪ್ಪಿಸಿದ ಬಿಎಸ್ ಯಡಿಯೂರಪ್ಪ ವಿರುದ್ಧ ಸೇಡು ತೀರಿಸಿಕೊಳ್ಳಲು, ಬಿಎಸ್ವೈ ಪುತ್ರ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ವಿರುದ್ಧ ಶಿವಮೊಗ್ಗದಲ್ಲಿ ಸ್ಪರ್ಧೆ ಮಾಡಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications