BJP Final List Of Candidates: ಮಾನ್ವಿ, ಶಿವಮೊಗ್ಗಕ್ಕೆ ಅಭ್ಯರ್ಥಿ ಘೋಷಣೆ, ಈಶ್ವರಪ್ಪ ಪುತ್ರನಿಗಿಲ್ಲ ಟಿಕೆಟ್!
ಬೆಂಗಳೂರು, ಏಪ್ರಿಲ್. 19: ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಿದ್ದು, ಮಾನ್ವಿ ಹಾಗೂ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಗಳಿಗೆ ಇನ್ನು ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ. ಆದರೆ, ಬಹುನಿರೀಕ್ಷಿತ ಶಿವಮೊಗ್ಗ ಕ್ಷೇತ್ರದಿಂದ ಕೆಎಸ್ ಈಶ್ವರಪ್ಪ ಪುತ್ರನಿಗೆ ಬಿಜೆಪಿ ಟಿಕೆಟ್ ನೀಡಿಲ್ಲ.
ಕಳೆದ ವಾರ ಬಿಜೆಪಿ ತನ್ನ ಅಭ್ಯರ್ಥಿಗಳು ಎರಡನೇ ಪಟ್ಟಿ ಬಿಡುಗಡೆ ಮಾಡಿತ್ತು. ಈ ಹಿಂದಿನ ಎರಡು ಪಟ್ಟಿಗಳಲ್ಲಿ 212 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿತ್ತು. ಬಳಿಕ ಮೊನ್ನೆಯಷ್ಟೇ 10 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ಮತ್ತು ಮಾನ್ವಿ ವಿಧಾನಸಭಾ ಕ್ಷೇತ್ರಗಳನ್ನು ಹಾಗೆ ಉಳಿಸಿಕೊಂಡು ಕುತೂಹಲ ಮೂಡಿಸಿತ್ತು.

ಶಿವಮೊಗ್ಗ ಕ್ಷೇತ್ರದ ಹಾಲಿ ಶಾಸಕ ಕೆಎಸ್ ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿರುವ ಕಾರಣ ಮಗನಿಗಾಗಿ ಟಿಕೆಟ್ಗೆ ಬೇಡಿಕೆಯಿಟ್ಟಿದ್ದರು. ಮಗ ಕಾಂತೇಶ್ಗೆ ಟಿಕೆಟ್ ಸಿಗಲಿದೆ ಎನ್ನಲಾಗುತ್ತಿತ್ತು. ಆದರೆ, ಕೊನೆ ಕ್ಷಣದಲ್ಲಿ ಬಿಜೆಪಿ ಈಶ್ವರಪ್ಪ ಕುಟುಂಬಕ್ಕೆ ಟಿಕೆಟ್ ನೀಡದೆ ಅವರನ್ನು ನಿರಾಸೆಗೆ ನೂಕಿದೆ.
ಶಿವಮೊಗ್ಗ ಕ್ಷೇತ್ರಕ್ಕೆ ಚನ್ನಬಸವಪ್ಪ ಅವರನ್ನು ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರ ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ಬಿ.ವಿ.ನಾಯಕ ಅವರನ್ನು ಅಭ್ಯರ್ಥಿಗಳನ್ನಾಗಿ ಪಕ್ಷ ಘೋಷಿಸಿದೆ. ಮಾಜಿ ಸಂಸದ ಬಿವಿ ನಾಯಕ ಅವರು ಮಂಗಳವಾರ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು.

ಶಿವಮೊಗ್ಗ ನಗರ ಕ್ಷೇತ್ರವನ್ನು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿನಿಧಿಸುತ್ತಿದ್ದು, ತಮ್ಮ ರಾಜಕೀಯ ಜೀವನ ಮುಡುಪಿಟ್ಟು ಮಗನ ಭವಿಷ್ಯ ಬೆಳಗಿಸುವ ಕನಸು ಕಂಡಿದ್ದರು. ಅವರ ಮಗ ಕಾಂತೇಶ್ಗೆ ಟಿಕೆಟ್ ನೀಡಬೇಕು ಎಂಬ ಬೇಡಿಕೆಯಿಟ್ಟಿದ್ದರು. ಇದಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಅವರ ಮಗನಿಗೆ ಶಿಕಾರಿಪುರದಲ್ಲಿ ಟಿಕೆಟ್ ನೀಡಿರುವುದನ್ನು ಉದಾಹರಣೆಯಾಗಿ ಹೇಳಿದ್ದರು. ಆದರೂ ಹೈಕಮಾಂಡ್ ಈಶ್ವರಪ್ಪ ಒತ್ತಡಕ್ಕೆ ಮಣಿದಿಲ್ಲ.
ಮಗನಿಗೆ ಟಿಕೆಟ್ ದೊರೆಯುವ ಭರವಸೆಯಿಂದ ರಾಜಕೀಯ ನಿವೃತ್ತಿ ಘೋಷಿಸಿ ಪಕ್ಷವನ್ನು ಅಧಿಕಾರಕ್ಕೆ ತರಲು ಹೋರಾಡುವುದಾಗಿ ಈಶ್ವರಪ್ಪ ಹೇಳಿದ್ದರು. ಇದರ ಜೊತೆಗೆ ಶಿವಮೊಗ್ಗ ನಗರ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಚನ್ನಬಸಪ್ಪ (ಚನ್ನಿ) ಮಹಾನಗರಪಾಲಿಕೆ ಸದಸ್ಯರು. ಲಿಂಗಾಯತ ಸಮುದಾಯದ ಚನ್ನಬಸಪ್ಪ, ಹಾಲಿ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಕಟ್ಟಾ ಬೆಂಬಲಿಗ ಹಾಗೂ ಮಾನಸಪುತ್ರ ಎನ್ನಲಾಗುತ್ತದೆ.
ಆರ್ಎಸ್ಎಸ್ ನಲ್ಲಿ ಅಕ್ರಿಯವಾಗಿ ತೊಡಗಿಸಿಕೊಂಡಿರುವ ಚನ್ನಬಸಪ್ಪಗೆ ಟಿಕೆಟ್ ಪಡೆಯಲು ಅದು ಒಂದು ಕಾರಣ ಎನ್ನಲಾಗಿದೆ.
ರಾಯಚೂರು ಜಿಲ್ಲೆಯಎಸ್ಟಿ ಮೀಸಲು ಕ್ಷೇತ್ರ ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ಬಿವಿ ನಾಯಕ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಇಲ್ಲಿ ಬಿಜೆಪಿಯಿಂದ ಮಾಜಿ ಶಾಸಕ ಗಂಗಾಧರ ನಾಯಕ ಹಾಗೂ ಮುಖಂಡ ಬಿ.ಮಾನಪ್ಪ ನಾಯಕ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೆ, ಮಂಗಳವಾರವಷ್ಟೇ ಬಿಜೆಪಿ ಸೇರಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ವಿ.ನಾಯಕ ಅವರಿಗೆ ಟಿಕೆಟ್ ನೀಡಲಾಗಿದೆ.
ಬಿ.ವಿ.ನಾಯಕ ರಾಯಚೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದರು, ಮಾನ್ವಿಯಿಂದ ಟಿಕೆಟ್ ಬಯಸಿದ್ದ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದರು. ಬಳಿಕ ಹುಬ್ಬಳ್ಳಿಗೆ ತೆರಳಿ ಬಿಜೆಪಿ ಪ್ರಮುಖರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾದರು. ಮಾಜಿ ಸಂಸದರೂ ಆದ ಬಿ.ವಿ. ನಾಯಕ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಕ್ಷಕ್ಕೆ ಸ್ವಾಗತಿಸಿದ್ದರು. ಈಗ ಪಕ್ಷದಿಂದ ಟಿಕೆಟ್ ನೀಡಲಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications