ಹಿಂದುತ್ವದ ಭದ್ರಕೋಟೆಯಲ್ಲಿ ಹಾಲಿ ಸಂಸದರಿಗಿಂತ ಹಿಂದುತ್ವದ ನಾಯಕರಿಗೆ ಮಣೆ- ಬಿಜೆಪಿ ಹೈಕಮಾಂಡ್‌ ಲೆಕ್ಕಾಚಾರವೇನು?

ಬೆಂಗಳೂರು, ಜನವರಿ 25: ಲೋಕಸಭಾ ಚುನಾವಣೆಗೆ ಬಿಜೆಪಿ ಹೈಕಮಾಂಡ್‌ ಭರ್ಜರಿ ತಯಾರಿ ನಡೆಸಿದೆ. ಈ ನಡುವೆ ಕರ್ನಾಟಕದಲ್ಲಿ ಕರಾವಳಿ ಭಾಗದಲ್ಲಿ ಹಿಂದುತ್ವದ ಭದ್ರಕೋಟೆಯ ಕ್ಷೇತ್ರಗಳನ್ನ ಇನ್ನಷ್ಟು ಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್‌ ಮಾಸ್ಟರ್‌ ಪ್ಲಾನ್‌ ನಡೆಸಿದೆ.

ಹೌದು, ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ, ಕರ್ನಾಟಕದಲ್ಲಿ ಬಿಜೆಪಿಯು ಕರಾವಳಿ ಭಾಗದಲ್ಲಿ ಹಿಂದುತ್ವದ ಭದ್ರಕೋಟೆಯ ಕ್ಷೇತ್ರಗಳಲ್ಲಿ ಹೊಸ ದಾಳ ಉರುಳಿಸಲು ಬಿಜೆಪಿ ಹೈಕಮಾಂಡ್‌ ನಾಯಕರು ಮುಂದಾಗಿದ್ದಾರೆ. ಹಿಂದುತ್ವದ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರು ಈ ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗಿಂತ ಹಿಂದುತ್ವದ ನಾಯಕರಿಗೆ ಅವಕಾಶ ಕೊಡುವ ಮೂಲಕ ಹಿಂದುತ್ವ ನಾಯಕರನ್ನ ಬೆಳೆಸುವುದು ಹೈಕಮಾಂಡ್‌ ನಾಯಕರ ಲೆಕ್ಕಾಚಾರ ಎನ್ನಲಾಗಿದೆ.

BJP give more importance to Hindu leaders in Lok Sabha election instead of Sitting MPs

ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಈ ಮೂರು ಲೋಕಸಭಾ ಸ್ಥಾನಗಳು ಯಾವಾಗಲೂ ಬಿಜೆಪಿಗೆ ಅತೀ ಹೆಚ್ಚು ಮತಗಳು ಬಂದಿವೆ. 2019 ರಲ್ಲಿ ಸುಮಾರು 75% ಮತದಾನವನ್ನು ದಾಖಲಾಗಿದ್ದು, ಬಿಜೆಪಿಯ ಮೂವರು ಅಭ್ಯರ್ಥಿಗಳು ಹೆಚ್ಚು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ

ಪ್ರಭಾವಿ ಹಿಂದು ಹುಲಿ ಹಾಗೂ ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾದ ಅನಂತಕುಮಾರ್ ಹೆಗಡೆ ಅವರು ಉತ್ತರ ಕನ್ನಡ ಜಿಲ್ಲೆಯಲ್ಲಿ ಐದು ಬಾರಿ ಸಂಸದರಾಗಿ ಆಯ್ಕೆಯಾಗಿದ್ಧಾರೆ. ಕಳೆದ ಚುನಾವಣೆಯಲ್ಲಿ ಉತ್ತರ ಕನ್ನಡ ಕ್ಷೇತ್ರದಿಂದ 4.79 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ.

ಕಳೆದ ವರ್ಷ ನಡೆದ ರಾಜ್ಯ ಚುನಾವಣೆಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಐದರಲ್ಲಿ ಗೆದ್ದು ಸಂಸದೀಯ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಬಲವಾಗಿ ಹೊರಹೊಮ್ಮಿತ್ತು. ಇಷ್ಟು ದಿನಗಳ ಮೂಲಕ ಅನಾರೋಗ್ಯ ಕಾರಣದಿಂದ ರಾಜಕೀಯ ಕಾರ್ಯಕ್ರಮಗಳಿಂದ ದೂರ ಉಳಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಏಕ ವಚನದಲ್ಲಿ ವಾಗ್ದಾಳಿ ನಡೆಸಿದ್ದು, ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

BJP give more importance to Hindu leaders in Lok Sabha election instead of Sitting MPs

ಬೆಳಗಾವಿ ಜಿಲ್ಲೆಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ, ಉತ್ತರ ಕನ್ನಡ ಕ್ಷೇತ್ರಕ್ಕೆ ಒಳಪಡುವ ಕೆಲವು ಭಾಗಗಳಲ್ಲಿ, ಕಾರ್ಯಕರ್ತರಿಗಾಗಿ ಹಾಗೂ ಅಭಿವೃದ್ಧಿಗಾಗಿ ಏನು ಮಾಡಿದ್ದೀರಿ ಎಂದು ಕೇಳಿದ್ದಾರೆ ಹೇಳಲಾಗಿದೆ. ಅಲ್ಲದೇ ನರೇಂದ್ರ ಮೋದಿ ಮತ್ತು ಹಿಂದುತ್ವ ಕಾರ್ಡ್‌ನಲ್ಲಿ ಹೆಗ್ಡೆ ಗೆಲ್ಲಬಹುದು, ಆದರೆ ಈ ಪ್ರದೇಶದ ಹಲವು ಭಾಗಗಳಲ್ಲಿ ಅಭಿವೃದ್ಧಿ ಕಾರ್ಯಗಳ ಕೊರತೆ ಮತ್ತು ದೀರ್ಘಕಾಲದವರೆಗೆ ಅವರ ಅನುಪಸ್ಥಿತಿಯಿಂದಾಗಿ ಅವರು ಕಠಿಣ ಸವಾಲನ್ನು ಎದುರಿಸಬೇಕಾಗುತ್ತದೆ.

ಈ ವಾರ ಖಾನಾಪುರ ಭಾಗದ ಬಿಜೆಪಿ ಮುಖಂಡ ಜಯಂತ್ ತಿನಾಯ್ಕರ್ ಅವರು ಬ್ರಾಹ್ಮಣ ಹೆಗ್ಗಡೆಯವರು ಬದಲಿ ವ್ಯಕ್ತಿಯನ್ನು ನಾಮನಿರ್ದೇಶನ ಮಾಡಿ ಪಕ್ಕಕ್ಕೆ ಸರಿಯಬೇಕೆಂದು ಬಹಿರಂಗವಾಗಿ ಸಲಹೆ ನೀಡಿದರು. ಇನ್ನೂ ಕರ್ನಾಟಕದ ಮಾಜಿ ಸ್ಪೀಕರ್ ಮತ್ತು ಮಾಜಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪರ್ಧಿಸಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.

ಇನ್ನೂ ಮತ್ತೊಂದು ಕಡೆಯಿಂದ ಪ್ರಬಲ ಸ್ಪರ್ಧಿ ಚಕ್ರವರ್ತಿ ಸೂಲಿಬೆಲೆ ಅವರು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ರಚಿಸಲಾದ ನಮೋ ಬ್ರಿಗೇಡ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರದಲ್ಲಿ ಭಾಗವಹಿಸಿದ್ದಾರೆ. ಇತ್ತೀಚೆಗಷ್ಟೇ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ವಾಗ್ದಾಳಿ ನಡೆಸಿ ಸೂಲಿಬೆಲೆ ಸುದ್ದಿಯಾಗಿದ್ದರು. ಉತ್ತರ ಕನ್ನಡ ಕ್ಷೇತ್ರದಿಂದ ಇವರು ಹೆಸರು ಸಹ ಕೇಳಿ ಬರುತ್ತಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ

ಮಾಜಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್‌ ಕುಮಾರ್‌ ಕಟೀಲ್‌ ಅವರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸರಣಿ ಗೆಲುವು ಸಾಧಿಸಿದ್ದು, 2009 ರಲ್ಲಿ 40,000 ಮತಗಳಿಂದ 2014 ರಲ್ಲಿ 1.43 ಲಕ್ಷ ಮತಗಳಿಗೆ 2019 ರಲ್ಲಿ 2.74 ಲಕ್ಷ ಮತಗಳಿಗೆ ಗೆಲುವು ಸಾಧಿಸಿದ್ದಾರೆ. ಕಳೆದ ವರ್ಷ ನಡೆದ ರಾಜ್ಯ ಚುನಾವಣೆಯಲ್ಲೂ ಬಿಜೆಪಿ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಆರರಲ್ಲಿ ಗೆದ್ದು ತನ್ನ ಹಿಡಿತ ಸಾಧಿಸಿತ್ತು. ಜುಲೈ 26, 2022 ರಂದು ದಕ್ಷಿಣ ಕನ್ನಡದಲ್ಲಿ ಪಕ್ಷದ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ಕಟೀಲು ಕೂಡ ಮಂಕಾದರು. ಹತ್ಯೆಯ ಶಂಕಿತರೊಂದಿಗೆ ವ್ಯಾಪಾರ ವಹಿವಾಟು ನಡೆಸಿದ್ದಾರೆ ಎಂದು ಬಿಜೆಪಿ ನಿಷ್ಠಾವಂತ ಆರೋಪಿಸಿದ್ದರು.

ಕಟೀಲ್ ಅವರು ತಮ್ಮ ಆರ್‌ಎಸ್‌ಎಸ್ ಸಂಪರ್ಕಗಳ ಮೇಲೆ ನಿಷ್ಠಾವಂತ ಬೆಂಬಲ ನೆಲೆಯನ್ನು ಬೆಳೆಸುವಲ್ಲಿ ವಿಫಲರಾಗಿದ್ದಾರೆ ಎಂಬ ಅಂಶವೂ ಅವರಿಗೆ ವಿರುದ್ಧವಾಗಬಹುದು. ನಳಿನ್‌ ಕುಮಾರ್‌ ಕಟೀಲ್‌ ಅವರ ವಿರುದ್ಧ ಕ್ಷೇತ್ರದಲ್ಲಿ ವಿರೋಧಿ ಅಲೆ ಶುರುವಾಗಿದ್ದು, ಈ ಕ್ಷೇತ್ರಕ್ಕೆ ಅರುಣ್ ಪುತ್ತಿಲ ಅವರ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದೆ. ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರಿನಿಂದ ಬಿಜೆಪಿಯ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಲು ಅವರ ನಿರ್ಧಾರವು ಪಕ್ಷಕ್ಕೆ ಸ್ಥಾನವನ್ನು ಕಳೆದುಕೊಂಡಿತು ಎಂದು ಮೂಲಗಳು ತಿಳಿಸಿವೆ.

ಮತ್ತೊಬ್ಬ ಸ್ಪರ್ಧಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಈ ಭಾಗದವರೇ ಆಗಿದ್ದಾರೆ.ಪ್ರಸ್ತುತ ರಾಜ್ಯಸಭಾ ಸಂಸದರಾಗಿರುವ ಇಬ್ಬರು ಕೇಂದ್ರ ಸಚಿವರಾದ ಎಸ್ ಜೈಶಂಕರ್ ಅಥವಾ ನಿರ್ಮಲಾ ಸೀತಾರಾಮನ್ ಅವರಿಗೆ ಈ ಕ್ಷೇತ್ರದಿಂದ ಸ್ಪರ್ಧಿಸಬಹುದು ಎನ್ನುವ ಮಾತುಗಳು ಕೇಳಿ ಬರುತ್ತಿದೆ.

ಉಡುಪಿ ಚಿಕ್ಕಮಗಳೂರು

2019ರ ಲೋಕಸಭೆ ಚುನಾವಣೆಯಲ್ಲಿ ಕರಾವಳಿಯ ಉಡುಪಿ ಜಿಲ್ಲೆ ಮತ್ತು ಮಲೆನಾಡಿನ ಚಿಕ್ಕಮಗಳೂರು ಜಿಲ್ಲೆಯನ್ನು ವ್ಯಾಪಿಸಿರುವ ಉಡುಪಿ ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಜ್ಯದಲ್ಲಿ ಎರಡನೇ ಅತ್ಯಧಿಕ ಗೆಲುವಿನ ಅಂತರವನ್ನು ದಾಖಲಿಸಿತ್ತು. ಶೋಭಾ ಕರಂದ್ಲಾಜೆ ಅವರು 2014 ಮತ್ತು 2019 ರ ನಡುವೆ ತಮ್ಮ ಗೆಲುವಿನ ಅಂತರವನ್ನು 1.81 ಲಕ್ಷದಿಂದ 3.49 ಲಕ್ಷಕ್ಕೆ ದ್ವಿಗುಣಗೊಳಿಸಿದರು. ಆದರೆ, ಕ್ಷೇತ್ರದಲ್ಲಿ ಅವರ ಬೆಂಬಲ ಕ್ಷೀಣಿಸುತ್ತಿದೆ.

2019 ರಲ್ಲಿ ಅವರು ಸೋಲಿಸಿದ ಅಭ್ಯರ್ಥಿ, ಬಿಜೆಪಿಯ ಮಾಜಿ ಸಂಸದೆ ಮನೋರಮಾ ಮಧ್ವರಾಜ್ ಅವರ ಪುತ್ರ ಪ್ರಮೋದ್ ಮಧ್ವರಾಜ್, ಈಗ ಬಿಜೆಪಿಯಲ್ಲಿದ್ದಾರೆ ಮತ್ತು ಉಡುಪಿ ಚಿಕ್ಕಮಗಳೂರಿನ ಸ್ಪರ್ಧಿಯಾಗಿ ಕಂಡು ಬಂದಿದ್ದಾರೆ. 2023 ರ ರಾಜ್ಯ ಚುನಾವಣೆಯಲ್ಲಿ ಸೋತ ನಂತರ ತಮ್ಮ ಅದೃಷ್ಟವನ್ನು ಹಿಮ್ಮೆಟ್ಟಿಸಲು ಪ್ರಯತ್ನಿಸುತ್ತಿರುವ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಈ ಲೋಕಸಭಾ ಕ್ಷೇತ್ರದಿಂದ ಇನ್ನೊಬ್ಬ ಸ್ಪರ್ಧಿಯಾಗಿದ್ದಾರೆ. ಒಟ್ನಲಿ ಈ ಮೂರು ಕ್ಷೇತ್ರದಲ್ಲಿ ಮುಂದಿನ ಚುನಾವಣೆಯಲ್ಲಿ ಹಾಲಿ ಸಂಸದರು ಗೆಲುವು ಸಾಧಿಸಬಹುದಾದರೂ ಹಿಂದುತ್ವದ ಅಲೆ ಇರುವ ಕ್ಷೇತ್ರದಲ್ಲಿ ಹಿಂದುತ್ವದ ವರ್ಚಸ್ಸು ಹೊಂದಿರುವ ನಾಯಕರಿಗೆ ಮಣೆ ಹಾಕುವ ತಂತ್ರಗಾರಿಕೆಯನ್ನ ನಡೆಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+