ಕನ್ನಡ ಧ್ವಜವೇ ಇಲ್ಲದೆ ಕನ್ನಡ ರಾಜ್ಯೋತ್ಸವ: ಸರ್ಕಾರದ ವಿರುದ್ಧ ಆಕ್ರೋಶ
ಬೆಂಗಳೂರು, ನವೆಂಬರ್ 1: ಕನ್ನಡ ರಾಜ್ಯೋತ್ಸವ ಎಂದರೆ ಸಾಕು ಬಿಳಿ ಜುಬ್ಬ, ಬಿಳಿ ಪಂಚೆ ತೊಟ್ಟು , ಪ್ಯಾಂಟ್ ತೊಟ್ಟು ಸೈಕಲ್, ಬೈಕ್ಗಳಲ್ಲಿ ಕನ್ನಡ ಧ್ವಜ ಹಿಡಿದು ಜಾಥಾ ಹೊರಡೋದೆ.
ಆದರೆ ಈ ಬಾರಿ ಚಿತ್ರಣ ಸಂಪೂರ್ಣ ಬದಲಾಗಿದೆ. ಕನ್ನಡ ರಾಜ್ಯೋತ್ಸವೆಂದರೆ ಎಲ್ಲೆಲ್ಲೂ ಕನ್ನಡ ಬಾವುಟದ್ದೇ ಕಲರವ, ಉದ್ದಗಲಕ್ಕೂ ಕನ್ನಡದ ಕಾರ್ಯಕ್ರಮಗಳನ್ನು ಕಾಣುತ್ತೇವೆ. ಆದರೆ ಈ ಬಾರಿ ಕನ್ನಡ ಬಾವುಟ ವಿಲ್ಲದೆಯೇ ಕನ್ನಡ ರಾಜ್ಯೋತ್ಸವ ಆಚರಿಸಿ ಎಂದು ಹೇಳಿರುವ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ನಾಡ ಬಾವುಟ ಇಲ್ಲದೆ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಾಕ್ಷಿಯಾಗಿರುವುದು ಇದೀಗ ರಾಜ್ಯಾದ್ಯಂತ ಭಾರೀ ಜನಾಕ್ರೋಶಕ್ಕೆ ಕಾರಣವಾಗಿದೆ.

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಬಾವುಟ ಹಾರಿಸಬಾರದು, ರಾಷ್ಟ್ರಧ್ವಜ ಇರುವಾಗ ಪ್ರಾದೇಶಿಕ ಬಾವುಟಗಳಿಗೆ ಮಾನ್ಯತೆ ಇಲ್ಲ ಎಂದು ಕೇಂದ್ರ ಬಿಜೆಪಿ ಸರ್ಕಾರ ಕಳೆದ ಎರಡು ವರ್ಷದಿಂದ ಖ್ಯಾತೆ ತೆಗೆಯುತ್ತಲೇ ಇದೆ. ಆದರೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕನ್ನಡ ಧ್ವಜ ರಚನೆಗೆ ಸಮಿತಿ ರಚಿಸಿ ನೂತನ ಧ್ವಜವನ್ನು ವಿನ್ಯಾಸಗೊಳಿಸಿದ್ದರು. ಅಲ್ಲದೆ, ಕನ್ನಡ ರಾಜ್ಯೋತ್ಸವದ ದಿನದಂದು ಕನ್ನಡ ಬಾವುಟ ಹಾರಿಸುವುದು ಕನ್ನಡಿಗರ ಹಕ್ಕು ಎಂದು ಪ್ರತಿಪಾದಿಸಿದ್ದರು.
ಆದರೂ ಕೆಲವೆಡೆ ಕನ್ನಡ ಬಾವುಟವನ್ನು ಹಾರಿಸಲಾಗಿದೆ. ರಾಜ್ಯದ ಮೂಲೆ ಮೂಲೆಯಲ್ಲಿ ಕನ್ನಡ ಬಾವುಟ ಕಂಗೊಳಿಸಬೇಕಾಗಿದ್ದ ದಿನದಂದು ರಾಜ್ಯ ಸರ್ಕಾರ ಕನ್ನಡ ಬಾವುಟವನ್ನೇ ಹಾರಿಸದಿರುವುದು ಇದೀಗ ಹಲವಾರು ಚರ್ಚೆ ಮತ್ತು ವಿವಾದಕ್ಕೆ ಎಡೆಮಾಡಿಕೊಟ್ಟಿದೆ.
ರಾಜ್ಯ ಸರ್ಕಾರ ಹೀಗೆ ಕನ್ನಡ ಬಾವುಟ ಇಲ್ಲದೆ ರಾಜ್ಯೋತ್ಸವ ಆಚರಿಸಿ ನಾಡಿಗೆ ಅಪಮಾನ ಎಸಗಿದೆ ಎಂದು ಕೆಲವರು ಈಗಾಗಲೇ ಟೀಕೆ ಮುಂದುವರೆಸಿದ್ದಾರೆ. ಇದು ಯಾವ ಹಂತಕ್ಕೆ ಬಂದು ತಲುಪಲಿದೆ ಎಂದು ಕಾದು ನೋಡಬೇಕಿದೆ.
ಆದರೆ, ಬೀದರ್, ಬಾಗಲಕೋಟೆ, ಹಾಸನ, ರಾಯಚೂರು, ಉಡುಪಿ, ಶಿವಮೊಗ್ಗ, ರಾಮನಗರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೊಡಗು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ರಾಷ್ಟ್ರಧ್ವಜವನ್ನು ಮಾತ್ರ ಹಾರಿಸಲಾಗಿದೆ. ಈ ಯಾವ ಜಿಲ್ಲೆಯಲ್ಲೂ ಕನ್ನಡ ಧ್ವಜ ಹಾರಿಸಲಾಗಿಲ್ಲ.
-
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications