ಬಿಜೆಪಿ ಸರ್ಕಾರ ರಚನೆಗೆ ಆಹ್ವಾನ ಕೊಟ್ಟಿರುವುದು ಸರಿಯಲ್ಲ : ಉಗ್ರಪ್ಪ
ಬೆಂಗಳೂರು, ಜುಲೈ 26 : "ಪಕ್ಷ 112 ಸದಸ್ಯರ ಬಲವನ್ನು ಹೊಂದಿದ್ದರೆ ಮಾತ್ರ ಸರ್ಕಾರ ರಚನೆಗೆ ಆಹ್ವಾನ ಕೊಡಬಹುದು. 105 ಸದಸ್ಯ ಬಲ ಹೊಂದಿರುವ ಬಿಜೆಪಿಗೆ ರಾಜ್ಯಪಾಲರು ಆಹ್ವಾನ ಕೊಟ್ಟಿರುವುದು ಸರಿಯಲ್ಲ" ಎಂದು ಕಾಂಗ್ರೆಸ್ ನಾಯಕ ವಿ. ಎಸ್. ಉಗ್ರಪ್ಪ ಹೇಳಿದರು.
ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ ವಿ. ಎಸ್. ಉಗ್ರಪ್ಪ ಪತ್ರಿಕಾಗೋಷ್ಠಿ ನಡೆಸಿದರು. "ಬಿಜೆಪಿ ಮತ್ತು ರಾಜ್ಯಪಾಲರು ಸೇರಿ ಪ್ರಜಾಪ್ರಭುತ್ವಕ್ಕೆ ಅಪಚಾರ ಮಾಡುವ ಕೆಲಸ ಮಾಡುತ್ತಿದ್ದಾರೆ" ಎಂದು ಆರೋಪಿಸಿದರು.
"ಕಾಂಗ್ರೆಸ್-ಜೆಡಿಎಸ್ ಸರ್ಕಾರವಿದ್ದಾಗ ಸದನ ನಡೆಯುವಾಗ ರಾಜ್ಯಪಾಲರು ವಿಶ್ವಾಸಮತ ನಿರ್ಣಯದ ಬಗ್ಗೆ ತರಾತುರಿ ತೋರಿದರು. ಈಗ ಹೊಸ ಸರ್ಕಾರ ರಚನೆ ಮಾಡುವುದರಲ್ಲೂ ತರಾತುರಿ ತೋರುತ್ತಿದ್ದಾರೆ" ಎಂದು ಉಗ್ರಪ್ಪ ದೂರಿದರು.

"112 ಸದಸ್ಯರ ಬಲ ಇದ್ದರೆ ಮಾತ್ರ ಸರ್ಕಾರ ರಚನೆಗೆ ಆಹ್ವಾನ ಮಾಡಬಹುದು. ಆದರೆ, 105 ಸಂಖ್ಯಾಬಲ ಇರುವ ಬಿಜೆಪಿಗೆ ಆಹ್ವಾನ ಕೊಟ್ಟಿದ್ದು ಸರಿಯಲ್ಲ. ಹೊಸ ಸಂಪ್ರದಾಯವನ್ನು ರಾಜ್ಯಪಾಲರು ಆರಂಭಿಸಿದ್ದಾರೆ" ಎಂದು ಉಗ್ರಪ್ಪ ಹೇಳಿದರು.
"ಸದಸ್ಯ ಬಲ 112 ಆಗಬೇಕು ಅಂದರೆ ಕುದರೆ ವ್ಯಾಪಾರ ಮಾಡುವುದು ಒಂದೇ ಇವರ ಮುಂದೆ ಇರುವ ದಾರಿ. ಇದಕ್ಕೆ ರಾಜ್ಯಪಾಲರು ಕುಮ್ಮಕ್ಕು ಕೊಡುತ್ತಿದ್ದಾರೆ. ಹೊಸ ಸಂಪ್ರದಾಯ ಆರಂಭ ಮಾಡುವುದು ಬಿಟ್ಟು ಜನಾದೇಶಕ್ಕೆ ಹೋಗೋಣ ಬನ್ನಿ" ಎಂದು ಉಗ್ರಪ್ಪ ಆಹ್ವಾನ ನೀಡಿದರು.
ಕರ್ನಾಟಕದಲ್ಲಿ ಮಂಗಳವಾರ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡಿತ್ತು. ಶುಕ್ರವಾರ ಬಿಜೆಪಿ ಸರ್ಕಾರ ರಚನೆಯಾಗುತ್ತಿದೆ. ಬಿ. ಎಸ್. ಯಡಿಯೂರಪ್ಪ ಅವರು ಸಂಜೆ 6 ಗಂಟೆಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications