ಚೊಂಬನ್ನು ಅರಗಿಸಿಕೊಳ್ಳಲಾಗದೇ ಬಿಜೆಪಿ ಪಿಕ್ಪಾಕೆಟ್ ಜಾಹೀರಾತು- ಡಿಕೆಶಿ ವಾಗ್ದಾಳಿ
ಬೆಂಗಳೂರು ಏಪ್ರಿಲ್ 23: ಚೊಂಬನ್ನು ಅರಗಿಸಿಕೊಳ್ಳಲಾಗದೇ ಬಿಜೆಪಿ ಪಿಕ್ಪಾಕೆಟ್ ಜಾಹೀರಾತು ನೀಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿದಾಳಿ ಮಾಡಿದರು.
ಬೆಂಗಳೂರಿನ ಸದಾಶಿವ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಜಾಹೀರಾತಿನ ವಿರುದ್ಧ ವಾಗ್ದಾಳಿ ಮಾಡಿದರು. ಚೊಂಬು ಜಾಹೀರಾತು ಅರಗಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಹೀಗಾಗಿ ನಮ್ಮ ವಿರುದ್ಧ ಜಾಹೀರಾತು ನೀಡಿದ್ದಾರೆ. ತಾವು ಮಾಡಿದ ಪಿಕ್ಪಾಕೆಟ್ ಅನ್ನು ನಮ್ಮ ಮೇಲೆ ಹಾಕ್ತಿದ್ದಾರೆ ಎಂದು ತಿರುಗೇಟು ಕೊಟ್ಟಿದ್ದಾರೆ.

ತಮಿಳುನಾಡಿನ ಸಂಸದ, ವಿಸಿಕೆ ಪಕ್ಷದ ಅಧ್ಯಕ್ಷ ಅತುಲ್ ತಿರುಮಲವರನ್ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ತಮಿಳುನಾಡಿನ ವಿಸಿಕೆ- ವಿದುತಲೈ ಚಿರುತೈಗಲ್ ಕಚ್ಚಿ ಪಕ್ಷದಿಂದ ಕಾಂಗ್ರೆಸ್ ಗೆ ಬೆಂಬಲ ದೊರೆತಿದೆ. ಕರ್ನಾಟಕ ಹಲವು ಕ್ಷೇತ್ರದಲ್ಲಿ ಸ್ವರ್ಧೆ ಮಾಡಿದ್ದ ವಿಸಿಕೆ ಪಕ್ಷದ ಅಭ್ಯರ್ಥಿಗಳಿಂದ ನಿವೃತ್ತಿ ಘೋಷಣೆ ಮಾಡಲಾಗಿದೆ. ಬರ ಪರಿಹಾರ ನೀಡುವುದಾಗಿ ಕೇಂದ್ರ ಹೇಳಿದೆ, ನಮಗೆ ಪರಿಹಾರ ಸಿಗುತ್ತೆ. ನಮಗೆ ನ್ಯಾಯ ಸಿಗುತ್ತೆ. ಸಾಂಕೇತಿಕವಾಗಿ ಹೋರಾಟ ಪ್ರಾರಂಭಿಸಿದ್ದೇವೆ ಎಂದರು.
ಇಂದು ಪತ್ರಿಕಾ ಜಾಹೀರಾತಿನಲ್ಲಿ ಬಿಜೆಪಿ ಮತ್ತೆ ಕಾಂಗ್ರೆಸ್ 'ಚೊಂಬು' ಜಾಹೀರಾತಿನ ವಿರುದ್ಧ ಮತ್ತೊಂದು ಜಾಹೀರಾತನ್ನು ನೀಡಿದೆ. ಜಾಹೀರಾತಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡ ಬಿಜೆಪಿ 'ಕೊಟ್ಟಿದ್ದಕ್ಕಿಂತ ದೋಚಿದ್ದೇ ಜಾಸ್ತಿ ಕಾಂಗ್ರೆಸ್ ಡೇಂಜರ್' ಎಂದಿದೆ. ಹಾಗಾದರೆ ಇಂದು ಬಿಜೆಪಿ ನೀಡಿದ ಜಾಹೀರಾತಿನಲ್ಲಿ ಏನಿದೆ?
''ಕೊಟ್ಟಿದ್ದಕ್ಕಿಂತ ದೋಚಿದ್ದೇ ಜಾಸ್ತಿ
ಕಾಂಗ್ರೆಸ್ ಡೇಂಜರ್
*ವಿದ್ಯುತ್ ದರ ಹೆಚ್ಚಳ
*ಆಸ್ತಿ ತೆರಿಗೆ ದುಪ್ಪಟ್ಟು
*ವಿವಿಧ ಕಂದಾಯ ಪ್ರಮಾಣಪತ್ತೆ 100 ಪಟ್ಟು ಹೆಚ್ಚಳ
* ಕೃಷಿ ಸಮ್ಮಾನ್ ನಿಧಿ ವಾರ್ಷಿಕ 4000ಕಡಿತ
*ಹಾಲಿನ ದರ ಏರಿಕೆ
*ರೈತ ವಿದ್ಯಾನಿಧಿ ಸ್ಥಗಿತ
*ಮದ್ಯ ಅಬಕಾರಿ ದುಬಾರಿ
*ಭಾಗ್ಯಲಕ್ಷ್ಮಿ ಯೋಜನೆ ರದ್ದು
*ಸ್ಟ್ಯಾಂಪ್ ಡ್ಯೂಟಿ ಗಗನಕ್ಕೆ
* ಮಹಿಳಾ ಸ್ವಸಹಾಯ ಸಂಘಕ್ಕೆ ನೀಡುತ್ತಿದ್ದ ಐದು ಲಕ್ಷ ರದ್ದು
* ರೈತರ ಪಂಪ್ ಸೆಟ್ಗಳ ಸಂಪರ್ಕ ಶುಲ್ಕ 1.5 ಲಕ್ಷಕ್ಕೆ ಏರಿಕೆ
ರಾಜ್ಯದ ಜಖಾನೆ ಖಾಲಿ
ಅಭಿವೃದ್ಧಿಗೆ ತಿಲಾಂಜಲಿ
ಪ್ರತಿ ತಿಂಗಳು ನಿಮ್ಮನ್ನು ದೋಚುತ್ತಿರುವ ಕಾಂಗ್ರೆಸ್ ತಿರಸ್ಕರಿಸಿ
ಕಮಲದ ಬಟನ್ ಒತ್ತಿ ಬಿಜೆಪಿಯನ್ನು ಗೆಲ್ಲಿಸಿ'' ಎಂದು ಬಿಜೆಪಿ ಜಾಹೀರಾತು ನೀಡಿದೆ.
ಬಿಜೆಪಿ ಜಾಹೀರಾತು vs ಕಾಂಗ್ರೆಸ್ ಜಾಹೀರಾತು:-
ಕೆಲ ದಿನಗಳಿಂದ ಕಾಂಗ್ರೆಸ್ ಹಾಗೂ ಬಿಜೆಪಿ ಪರಸ್ಪರ ಜಾಹೀರಾತು ದಾಳಿಗಿಳಿದಿವೆ. ಇದನ್ನು ಕಾಂಗ್ರೆಸ್ ಮೊದಲು ಆರಂಭಿಸಿತ್ತು. ಕಳೆದ ಶುಕ್ರವಾರ ಕಾಂಗ್ರೆಸ್ ಬಿಜೆಪಿ ವಿರುದ್ಧ ಜಾಹೀರಾತು ನೀಡುವ ಮೂಲಕ ಕಮಲವನ್ನು ಕೆಣಕಿತ್ತು. 'ಚೊಂಬು' ಜಾಹೀರಾತು ನೀಡುವ ಮೂಲಕ ಕಾಂಗ್ರೆಸ್ ಬಿಜೆಪಿ ವಿರುದ್ಧ ನೇರದಾಳಿ ಆರಂಭಿಸಿತು. ಇದಕ್ಕೆ ಸಾಕಷ್ಟು ಕಮಲ ದಳಪತಿಗಳು ತಿರುಗೇಟು ನೀಡಿದರು.
ಆದರೆ ಕಾಂಗ್ರೆಸ್ ಇಷ್ಟಕ್ಕೆ ಸುಮ್ಮನಾಗಲಿಲ್ಲ. ಭಾನುವಾರವೂ ಬಿಜೆಪಿ ವಿರುದ್ಧ ಜಾಹೀರಾತನ್ನು ಪ್ರಕಟಿಸಿದೆ. ಇದರಲ್ಲಿ ಮೋದಿ ಸರ್ಕಾರ ರಾಜ್ಯಕ್ಕೆ ತೆರಿಗೆ ಹಣ ವಂಚನೆ ಮಾಡಿದೆ. ಚುನಾವಣೆಗೂ ಮುನ್ನ ನೀಡಿದ ಭರವಸೆಗಳಾದ ನಿರುದ್ಯೋಗ ಸಮಸ್ಯೆ, ರೈತರ ಖಾತೆಗೆ ಹಣ ಜಮಾವಣೆ ಆಗಿಲ್ಲ. ಈ ಮೂಲಕ ಮೋದಿ ಸರ್ಕಾರ ಅನ್ಯಾಯ ಮಾಡಿ 'ಚೊಂಬು' ನೀಡಿದೆ ಎಂದು ಜಾಹೀರಾತಿನಲ್ಲಿ ದಾಳಿ ಮಾಡಿತ್ತು.
ಇದಕ್ಕೆ ಪ್ರತಿಕ್ರಿಯಾಗಿ ಸೋಮವಾರ ಬಿಜೆಪಿ ಪತ್ರಿಕೆ ಜಾಹೀರಾತು ನೀಡಿ 'ಡೇಂಜರ್ ಕಾಂಗ್ರೆಸ್' ಎಂದು ಕರೆದಿತ್ತು. ರಾಜ್ಯದಲ್ಲಿ ಆಗುವ ಬಾಂಬ್ ಸ್ಪೋಟಗಳಿಗೆ ಲವ್ ಜಿಹಾದ್ ಗೆ ಕಾಂಗ್ರೆಸ್ ಕುಮ್ಮಕ್ಕು ಇದೆ ಎಂದು ಬಿಜೆಪಿ ಜಾಹೀರಾತಿನಲ್ಲಿ ದೂರಿತ್ತು. ಇದರಿಂದ ಪಾರಾಗಲು ಬಿಜೆಪಿಯನ್ನು ಗೆಲ್ಲಿಸಿ ಎಂದು ಮತಯಾಚನೆ ಮಾಡಿತ್ತು.
ಇಂದೂ ಕೂಡ ಬಿಜೆಪಿ ಪತ್ರಿಕಾ ಜಾಹೀರಾತಿನಲ್ಲಿ ಕಾಂಗ್ರೆಸ್ ಅನ್ನು ಪಿಕ್ಪಾಕೆಟ್ ಎಂದು ಕರೆದಿದೆ. ಇದು ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಹೀಗಾಗಿ ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಬಿಜೆಪಿಗೆ ತಿರುಗೇಟು ನೀಡಿದರು. ಲೋಕಸಭಾ ಚುನಾವಣೆಗೆ ಮತದಾನ ಏಪ್ರಿಲ್ 26ರಂದು ನಡೆಯಲಿದ್ದು, ಈ ಪತ್ರಿಕಾ ಜಾಹೀರಾತು ಫೈಟ್ ಎಲ್ಲಿವರಿಗೆ ಮುಂದುವರೆಯುತ್ತದೆ ಎಂದು ಕಾದು ನೋಡಬೇಕಿದೆ.
-
ಜಿಬಿಎ ಚುನಾವಣೆ: ಕರಡು ಮತದಾರರ ಪಟ್ಟಿ ಬಗ್ಗೆರಾಜಕೀಯ ಪ್ರತಿನಿಧಿಗಳ ಆಕ್ಷೇಪಣೆ, ಆಯುಕ್ತರಿಗೆ ಮಹತ್ವದ ಸಲಹೆ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ











Click it and Unblock the Notifications