ಸುಳ್ಳುರಾಮಯ್ಯ ಅವರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು!
ಬೆಂಗಳೂರು, ನವೆಂಬರ್ 01: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಕರ್ನಾಟಕಕ್ಕೆ ನೀಡಿರುವ ಕೊಡುಗೆಗಳ ಕುರಿತು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಸಿದ್ದರಾಮಯ್ಯ ಕೊಡುಗೆಗಳ ಕುರಿತು ವ್ಯಂಗ್ಯವಾಡಿದೆ. ಸರ್ಕಾರಿ ಖಜಾನೆ ತುಂಬಿ ತುಳುಕುತ್ತಿದೆಂದು ತೆರಿಗೆ ಹಣದಲ್ಲಿ ಜಾಹೀರಾತು ಕೊಟ್ಟು ಬಿಟ್ಟಿ ಪ್ರಚಾರ ಪಡೆದುಕೊಂಡಿರುವ ಸುಳ್ಳುರಾಮಯ್ಯ ಅವರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಸಿದ್ದರಾಮಯ್ಯ ಅವರ ಸರ್ಕಾರ ಕರ್ನಾಟಕಕ್ಕೆ ನೀಡಿರುವ ಕೊಡುಗೆಗಳು
▪️ದಸರಾ ಆಚರಣೆಗೆ ಅನುದಾನ ಕಡಿತ
▪️ಹಂಪಿ ಉತ್ಸವ ಸಂಪೂರ್ಣ ರದ್ದು
▪️ಸರ್ಕಾರಿ ಕನ್ನಡ ಶಾಲಾ ಮಕ್ಕಳಿಗಿಲ್ಲ ಪಠ್ಯಪುಸ್ತಕ
▪️ತಾಯಿ ಭುವನೇಶ್ವರಿ ಪ್ರತಿಮೆಗಿಲ್ಲ ಹಣ
▪️ಕನ್ನಡ ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಕಲೆಕ್ಷನ್
ಇನ್ನೊಂದು ಟ್ವೀಟ್ ಮಾಡಿರುವ ಬಿಜೆಪಿ, ಸಮಾಜದಲ್ಲಿ ಅಶಾಂತಿ ಮೂಡಿಸಿ, ತುಷ್ಟೀಕರಣದಿಂದ ಲಾಭ ಮಾಡಿಕೊಳ್ಳುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ನಿರಂತರವಾಗಿ ಓಲೈಕೆಯಲ್ಲೇ ಮಿಂದೇಳುತ್ತಿದೆ. ಚಾಮರಾಜಪೇಟೆಯ ಸಾರ್ವಜನಿಕ ಮೈದಾನದಲ್ಲಿ ರಾಜ್ಯೋತ್ಸವ ಆಚರಣೆಗೆ ಸಿದ್ದರಾಮಯ್ಯ ಅವರ ಸರ್ಕಾರ ಅನುಮತಿ ನಿರಾಕರಿಸಿರುವುದು ಕಾಂಗ್ರೆಸ್ನ ಕನ್ನಡ ಪ್ರೇಮದ ವಾಸ್ತವ ಚಿತ್ರಣ. ರಾಜ್ಯೋತ್ಸವ ಆಚರಣೆಗೂ ಕರ್ನಾಟಕದಲ್ಲಿ ಹೈಕೋರ್ಟ್ ಕದ ತಟ್ಟಿಯೇ ಅನುಮತಿ ಪಡೆಯುವ ಸ್ಥಿತಿ ನಿರ್ಮಾಣವಾಗಿರುವುದು ಖೇದಕರ ಮತ್ತು ಖಂಡನೀಯ ಎಂದು ಹೇಳಿದೆ.
ಕರ್ನಾಟಕ ವಿರೋಧಿ ಕಾಂಗ್ರೆಸ್ ಸರ್ಕಾರದ ಅಸಮರ್ಥ ನಡೆಯಿಂದಾಗಿ ಕನ್ನಡಿಗರಿಗೆ ನಿರಂತರವಾಗಿ ಅನ್ಯಾಯವಾಗುತ್ತಲೇ ಇದೆ. I.N.D.I. ಮೈತ್ರಿಕೂಟಕ್ಕಾಗಿ ಸಿದ್ದರಾಮಯ್ಯ ಅವರ ಸರ್ಕಾರ ಕದ್ದು ಮುಚ್ಚಿ ಕಳ್ಳತನದಿಂದ ಕಾವೇರಿ ನೀರು ಹರಿಬಿಡುತ್ತಿರುವುದರಿಂದ ಕೆ.ಆರ್.ಎಸ್. ಖಾಲಿ ಆಗಿದೆ. ರೈತರಿಗೆ ಬೆಳೆ ಬೆಳೆಯಬೇಡಿ ಎಂದು ದಿಗ್ಭಂಧನ ಹಾಕಿರುವ ತುಘಲಕ್ ಸರ್ಕಾರ ಬೆಂಗಳೂರಿಗರ ಕುಡಿಯುವ ನೀರಿಗೂ ಸಂಕಷ್ಟ ತಂದಿಟ್ಟಿದೆ ಎಂದು ಬಿಜೆಪಿ ಕಿಡಿಕಾರಿದೆ.
ಮಾನ್ಯ @siddaramaiah ಅವರ ಸರ್ಕಾರ ಕರ್ನಾಟಕಕ್ಕೆ ನೀಡಿರುವ ಕೊಡುಗೆಗಳು:
— BJP Karnataka (@BJP4Karnataka) November 1, 2023
▪️ದಸರಾ ಆಚರಣೆಗೆ ಅನುದಾನ ಕಡಿತ
▪️ಹಂಪಿ ಉತ್ಸವ ಸಂಪೂರ್ಣ ರದ್ದು
▪️ಸರ್ಕಾರಿ ಕನ್ನಡ ಶಾಲಾ ಮಕ್ಕಳಿಗಿಲ್ಲ ಪಠ್ಯಪುಸ್ತಕ
▪️ತಾಯಿ ಭುವನೇಶ್ವರಿ ಪ್ರತಿಮೆಗಿಲ್ಲ ಹಣ
▪️ಕನ್ನಡ ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಕಲೆಕ್ಷನ್
ಸರ್ಕಾರಿ ಖಜಾನೆ ತುಂಬಿ ತುಳುಕುತ್ತಿದೆಂದು…
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಲವ್ ಮಾಕ್ಟೇಲ್ 3 ವಿವಾದ: ನನ್ನ ಕಥೆಯ ದ್ವಿತೀಯಾರ್ಧ ನಕಲು: ಸಿನಿಮಾ ಬರಹಗಾರರೇ ಎಚ್ಚರ ಎಂದ ನಿರ್ದೇಶಕ ರಾಘವೇಂದ್ರ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications