ಶ್ರೀರಾಮುಲುಗೆ ಹೈಕಮಾಂಡ್ ಬುಲಾವ್: ಹೊಗಳಿಕೆಯೋ? ತೆಗಳಿಕೆಯೋ?
Recommended Video

ಬೆಂಗಳೂರು, ನವೆಂಬರ್ 08: ಬಳ್ಳಾರಿಯಲ್ಲಿ ಹೀನಾಯವಾಗಿ ಸೋತು ಆತ್ಮವಿಮರ್ಶೆಯಲ್ಲಿ ತೊಡಗಿರುವ ಬಿಜೆಪಿ ಪ್ರಮುಖ ಮುಖಂಡ ಶ್ರೀರಾಮುಲು ಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ.
ಬಳ್ಳಾರಿಯಲ್ಲಿ ಹೀನಾಯವಾಗಿ ಸೋತಿದ್ದಕ್ಕೆ ತೆಗಳಲು ಕರೆದಿದಯೋ, ಒಂಟಿಯಾಗಿ ಹೋರಾಡಿದ್ದಕ್ಕೆ ಹೊಗಳಲಿಕ್ಕೆ ಕರೆಯಲಾಗಿದೆಯೋ ಅಥವಾ ಉಪಚುನಾವಣೆಯ ಸಂಪೂರ್ಣ ಚಿತ್ರಣದ ಮಾಹಿತಿಯನ್ನು ಕೇಳಲು ಕರೆದಿದ್ದಾರಾ ಸ್ಪಷ್ಟವಾಗಿಲ್ಲ.
ಜನಾರ್ದನ ರೆಡ್ಡಿ ಅವರಿಗೆ ಸಿಸಿಬಿ ಗಂಡಾಂತರ ಒದಗಿ ಬಂದಿರುವ ಕಾರಣ ಇಂದು ರಾಮುಲು ಅವರು ದೆಹಲಿಗೆ ತೆರಳಿಲ್ಲ ಆದರೆ ರೆಡ್ಡಿ ಅವರಿಗೆ ನಿರೀಕ್ಷಾ ಜಾಮೀನು ದೊರಕಿದ ನಂತರ ದೆಹಲಿಗೆ ಹೋಗಿ ಅಮಿತ್ ಶಾ ಅವರನ್ನೇ ರಾಮುಲು ಅವರು ಭೇಟಿ ಆಗಿದ್ದಾರೆ ಎನ್ನಲಾಗಿದೆ.

ರಾಜ್ಯ ನಾಯಕರ ವಿರುದ್ಧ ದೂರು ನೀಡಲಿದ್ದಾರೆ ರಾಮುಲು
ಕೆಲವು ಬಿಜೆಪಿ ಪ್ರಮುಖ ನಾಯಕರು ಬಳ್ಳಾರಿಗೆ ಪ್ರಚಾರಕ್ಕೆ ಬರದೆ ಅಂತರ ಕಾಯ್ದುಕೊಂಡರು, ಉತ್ತರ ಕರ್ನಾಟಕದ ಕೆಲವು ಮುಖಂಡರೇ ಪ್ರಚಾರದಲ್ಲಿ ಭಾಗವಹಿಸಲಿಲ್ಲ, ಯಡಿಯೂರಪ್ಪ ಸಹ ಕೇವಲ ನಾಮ್ ಕೆ ವಾಸ್ತೆ ಎಂಬಂತೆ ಹಾಗೆ ಬಂದು ಹೀಗೆ ಹೋದರು ಇದೆಲ್ಲದುರ ಬಗ್ಗೆ ರಾಮುಲು ಅವರು ಹೈಕಮಾಂಡ್ ಬಳಿ ದೂರು ನೀಡುವ ಸಾಧ್ಯತೆ ಇದೆ.

ಲೋಕಸಭೆ ಚುನಾವಣೆಗೆ ಅಭ್ಯರ್ಥಿ ಬದಲಾವಣೆ
ಶಾಂತಾ ಅವರು ಭಾರಿ ಅಂತರದಲ್ಲಿ ಸೋತಿರುವ ಕಾರಣ ಲೋಕಸಭಾ ಚುನಾವಣೆಗೆ ಬಳ್ಳಾರಿಗೆ ಬೇರೆ ಅಭ್ಯರ್ಥಿಯನ್ನು ಚುನಾವಣೆಗೆ ಆಯ್ಕೆ ಮಾಡುವಂತೆ ಸೂಚಿಸುವ ಮತ್ತು ಈಗಿನಿಂದಲೇ ತಯಾರಿ ನಡೆಸಲು ಹೈಕಮಾಂಡ್ ರಾಮುಲು ಅವರಿಗೆ ಆದೇಶ ನೀಡಲಿದೆ.

ಹಿಂದುಳಿದವರ ಮುಖಂಡ ಸ್ಥಾನಕ್ಕೆ ಕುತ್ತು
ಹೈಕಮಾಂಡ್ ರಾಮುಲು ಅವರನ್ನು ಸಿದ್ದರಾಮಯ್ಯ ಅವರ ಎದುರಿಗೆ ಹಿಂದುಳಿದ ಸಮುದಾಯಗಳ ನಾಯಕ ಎಂಬಂತೆ ಬಿಂಬಿಸುವ ಯತ್ನವನ್ನು ಮಾಡಿತ್ತು ಆದರೆ ಅದರ ಲೆಕ್ಕಾಚಾರ ಈಗ ಉಲ್ಟಾ ಆಗಿದೆ. ಬಳ್ಳಾರಿ ಸೋಲನ್ನು ಗಂಭೀರವಾಗಿ ಪರಿಗಣಿಸಿರುವ ಹೈಕಮಾಂಡ್ ರಾಮುಲು ಅವರನ್ನು ಕಾರಣ ಕೇಳಲಿದೆ ಹಾಗೂ ಲೋಕಸಭೆ ಚುನಾವಣೆಗೆ ಅನುಸರಿಸಬೇಕಿರುವ ತಂತ್ರದ ಬಗ್ಗೆ ಸೂಚನೆಗಳನ್ನು ನೀಡಲಿದೆ.

ಡಿ.ಕೆ.ಶಿವಕುಮಾರ್ ಕಟ್ಟಿ ಹಾಕಲು ತಂತ್ರ
ಬಳ್ಳಾರಿಯಲ್ಲಿ ಬಿಜೆಪಿ ಸೋಲಲು ಪ್ರಮುಖ ಕಾರಣ ಡಿ.ಕೆ.ಶಿವಕುಮಾರ್ ಕಾರ್ಯತಂತ್ರ ಹಾಗಾಗಿ ಅವರನ್ನು ಲೋಕಸಭೆ ಚುನಾವಣೆ ವೇಳೆಗೆ ಕಟ್ಟಿ ಹಾಕುವುದು ಹೇಗೆ ಎಂಬ ಬಗ್ಗೆ ಹೈಕಮಾಂಡ್ ರಾಮುಲು ಜೊತೆ ಮಾತನಾಡದೆ ಎನ್ನಲಾಗಿದೆ. ಜೊತೆಗೆ ಶಿವಕುಮಾರ್ ಅವರನ್ನು ಕಟ್ಟಿಹಾಕುವ ಜವಾಬ್ದಾರಿಯನ್ನು ಹೈಕಮಾಂಡ್ ರಾಮುಲು ಅವರಿಗೆ ವಹಿಸಲಿದೆ.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications