ಶ್ರೀರಾಮುಲುಗೆ ಹೈಕಮಾಂಡ್ ಬುಲಾವ್: ಹೊಗಳಿಕೆಯೋ? ತೆಗಳಿಕೆಯೋ?
Recommended Video

ಬೆಂಗಳೂರು, ನವೆಂಬರ್ 08: ಬಳ್ಳಾರಿಯಲ್ಲಿ ಹೀನಾಯವಾಗಿ ಸೋತು ಆತ್ಮವಿಮರ್ಶೆಯಲ್ಲಿ ತೊಡಗಿರುವ ಬಿಜೆಪಿ ಪ್ರಮುಖ ಮುಖಂಡ ಶ್ರೀರಾಮುಲು ಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ.
ಬಳ್ಳಾರಿಯಲ್ಲಿ ಹೀನಾಯವಾಗಿ ಸೋತಿದ್ದಕ್ಕೆ ತೆಗಳಲು ಕರೆದಿದಯೋ, ಒಂಟಿಯಾಗಿ ಹೋರಾಡಿದ್ದಕ್ಕೆ ಹೊಗಳಲಿಕ್ಕೆ ಕರೆಯಲಾಗಿದೆಯೋ ಅಥವಾ ಉಪಚುನಾವಣೆಯ ಸಂಪೂರ್ಣ ಚಿತ್ರಣದ ಮಾಹಿತಿಯನ್ನು ಕೇಳಲು ಕರೆದಿದ್ದಾರಾ ಸ್ಪಷ್ಟವಾಗಿಲ್ಲ.
ಜನಾರ್ದನ ರೆಡ್ಡಿ ಅವರಿಗೆ ಸಿಸಿಬಿ ಗಂಡಾಂತರ ಒದಗಿ ಬಂದಿರುವ ಕಾರಣ ಇಂದು ರಾಮುಲು ಅವರು ದೆಹಲಿಗೆ ತೆರಳಿಲ್ಲ ಆದರೆ ರೆಡ್ಡಿ ಅವರಿಗೆ ನಿರೀಕ್ಷಾ ಜಾಮೀನು ದೊರಕಿದ ನಂತರ ದೆಹಲಿಗೆ ಹೋಗಿ ಅಮಿತ್ ಶಾ ಅವರನ್ನೇ ರಾಮುಲು ಅವರು ಭೇಟಿ ಆಗಿದ್ದಾರೆ ಎನ್ನಲಾಗಿದೆ.

ರಾಜ್ಯ ನಾಯಕರ ವಿರುದ್ಧ ದೂರು ನೀಡಲಿದ್ದಾರೆ ರಾಮುಲು
ಕೆಲವು ಬಿಜೆಪಿ ಪ್ರಮುಖ ನಾಯಕರು ಬಳ್ಳಾರಿಗೆ ಪ್ರಚಾರಕ್ಕೆ ಬರದೆ ಅಂತರ ಕಾಯ್ದುಕೊಂಡರು, ಉತ್ತರ ಕರ್ನಾಟಕದ ಕೆಲವು ಮುಖಂಡರೇ ಪ್ರಚಾರದಲ್ಲಿ ಭಾಗವಹಿಸಲಿಲ್ಲ, ಯಡಿಯೂರಪ್ಪ ಸಹ ಕೇವಲ ನಾಮ್ ಕೆ ವಾಸ್ತೆ ಎಂಬಂತೆ ಹಾಗೆ ಬಂದು ಹೀಗೆ ಹೋದರು ಇದೆಲ್ಲದುರ ಬಗ್ಗೆ ರಾಮುಲು ಅವರು ಹೈಕಮಾಂಡ್ ಬಳಿ ದೂರು ನೀಡುವ ಸಾಧ್ಯತೆ ಇದೆ.

ಲೋಕಸಭೆ ಚುನಾವಣೆಗೆ ಅಭ್ಯರ್ಥಿ ಬದಲಾವಣೆ
ಶಾಂತಾ ಅವರು ಭಾರಿ ಅಂತರದಲ್ಲಿ ಸೋತಿರುವ ಕಾರಣ ಲೋಕಸಭಾ ಚುನಾವಣೆಗೆ ಬಳ್ಳಾರಿಗೆ ಬೇರೆ ಅಭ್ಯರ್ಥಿಯನ್ನು ಚುನಾವಣೆಗೆ ಆಯ್ಕೆ ಮಾಡುವಂತೆ ಸೂಚಿಸುವ ಮತ್ತು ಈಗಿನಿಂದಲೇ ತಯಾರಿ ನಡೆಸಲು ಹೈಕಮಾಂಡ್ ರಾಮುಲು ಅವರಿಗೆ ಆದೇಶ ನೀಡಲಿದೆ.

ಹಿಂದುಳಿದವರ ಮುಖಂಡ ಸ್ಥಾನಕ್ಕೆ ಕುತ್ತು
ಹೈಕಮಾಂಡ್ ರಾಮುಲು ಅವರನ್ನು ಸಿದ್ದರಾಮಯ್ಯ ಅವರ ಎದುರಿಗೆ ಹಿಂದುಳಿದ ಸಮುದಾಯಗಳ ನಾಯಕ ಎಂಬಂತೆ ಬಿಂಬಿಸುವ ಯತ್ನವನ್ನು ಮಾಡಿತ್ತು ಆದರೆ ಅದರ ಲೆಕ್ಕಾಚಾರ ಈಗ ಉಲ್ಟಾ ಆಗಿದೆ. ಬಳ್ಳಾರಿ ಸೋಲನ್ನು ಗಂಭೀರವಾಗಿ ಪರಿಗಣಿಸಿರುವ ಹೈಕಮಾಂಡ್ ರಾಮುಲು ಅವರನ್ನು ಕಾರಣ ಕೇಳಲಿದೆ ಹಾಗೂ ಲೋಕಸಭೆ ಚುನಾವಣೆಗೆ ಅನುಸರಿಸಬೇಕಿರುವ ತಂತ್ರದ ಬಗ್ಗೆ ಸೂಚನೆಗಳನ್ನು ನೀಡಲಿದೆ.

ಡಿ.ಕೆ.ಶಿವಕುಮಾರ್ ಕಟ್ಟಿ ಹಾಕಲು ತಂತ್ರ
ಬಳ್ಳಾರಿಯಲ್ಲಿ ಬಿಜೆಪಿ ಸೋಲಲು ಪ್ರಮುಖ ಕಾರಣ ಡಿ.ಕೆ.ಶಿವಕುಮಾರ್ ಕಾರ್ಯತಂತ್ರ ಹಾಗಾಗಿ ಅವರನ್ನು ಲೋಕಸಭೆ ಚುನಾವಣೆ ವೇಳೆಗೆ ಕಟ್ಟಿ ಹಾಕುವುದು ಹೇಗೆ ಎಂಬ ಬಗ್ಗೆ ಹೈಕಮಾಂಡ್ ರಾಮುಲು ಜೊತೆ ಮಾತನಾಡದೆ ಎನ್ನಲಾಗಿದೆ. ಜೊತೆಗೆ ಶಿವಕುಮಾರ್ ಅವರನ್ನು ಕಟ್ಟಿಹಾಕುವ ಜವಾಬ್ದಾರಿಯನ್ನು ಹೈಕಮಾಂಡ್ ರಾಮುಲು ಅವರಿಗೆ ವಹಿಸಲಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications