Bjp: ʻಕರ್ನಾಟಕ ಬಿಜೆಪಿ ಒಳಜಗಳ ಬಿಜೆಪಿ ಹೈಕಮಾಂಡ್ಗೆ ಗೊತ್ತಾಗಿದೆʼ
ಬಿಜೆಪಿಯಲ್ಲಿ ಒಳಜಗಳ ಹಾಗೂ ಭಿನ್ನಮತ ಇದೀಗ ಬೀದಿಗೆ ಬಂದು ನಿಂತಿದೆ. ಬಿಜೆಪಿಯಲ್ಲಿ ನಾಯಕರು ಕಿತ್ತಾಡುತ್ತಿರುವುದನ್ನು ನೋಡಿ ಬಿಜೆಪಿಯ ಕಾರ್ಯಕರ್ತರೂ ಸಹ ಕಸಿವಿಸಿಗೆ ಒಳಗಾಗುತ್ತಿದ್ದಾರೆ. ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ (ಬಿಜೆಪಿ ಮೈತ್ರಿ) ಸೋತ ನಂತರವಂತೂ ಬಿಜೆಪಿಯಲ್ಲಿ ಭಿನ್ನಮತ ಬುಗಿಲೆದ್ದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ವಾಕ್ಸಮರ ತಾರಕಕ್ಕೇರಿದ್ದು, ಬಿಜೆಪಿಯ ನಾಯಕರೇ ಇದರ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಇದೀಗ ಬಿಜೆಪಿ ಹೈಕಮಾಂಡ್ನಲ್ಲಿ ಈ ಬಗ್ಗೆ ನಡೆಯುತ್ತಿರುವ ಚರ್ಚೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಮಾತನಾಡಿದ್ದಾರೆ.
ಬಿಜೆಪಿಯಲ್ಲಿನ ಗೊಂದಲವು ಪಕ್ಷದ ವರಿಷ್ಠರ ಗಮನಕ್ಕೆ ಈಗಾಗಲೇ ಬಂದಿದೆ. ಅವರೆಲ್ಲ ಸರಿಯಾದ ಸಮಯಕ್ಕೆ ಯೋಗ್ಯ ಕ್ರಮ ಕೈಗೊಳ್ಳುವ ವಿಶ್ವಾಸವಿದೆ ಎಂದು ಬೆಳಗಾವಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದ್ದಾರೆ. ಯಾವಾಗಲೂ ನಮ್ಮ ಪಕ್ಷದಲ್ಲಿ ಇಂತಹ ಭಿನ್ನಾಭಿಪ್ರಾಯಗಳು ಬಂದಾಗ ಹಿರಿಯ ನಾಯಕರು ಅದನ್ನು ಸರಿ ಮಾಡುತ್ತಾರೆ ಎಂದಿದ್ದಾರೆ. ಇನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅವರು ಬಸವಣ್ಣನವರ ಬಗ್ಗೆ ಹೇಳಿರುವ ಹೇಳಿಕೆ ಬಗ್ಗೆ ನಾನು ಯಾವುದೇ ಟಿಪ್ಪಣಿ ಮಾಡುವುದಿಲ್ಲ.

ರಾಜಕೀಯ ಪಕ್ಷದಲ್ಲಿ ಈ ರೀತಿಯ ಗೊಂದಲಗಳು ಇರಬಾರದು. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಬಿಜೆಪಿಯಲ್ಲಿ ಗೊಂದಲ ಬೇಗನೇ ಬಗೆಹರಿಯುತ್ತದೆ. ಕಾಂಗ್ರೆಸ್, ಬೇರೆ ಪಕ್ಷಗಳಲ್ಲಿ ಗೊಂದಲ ಕಾಯಂ ಇರುತ್ತದೆ ಎಂದರು. ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿರುವ ಬಗ್ಗೆ ಕಾಂಗ್ರೆಸ್ಸಿಗರು ನೀತಿ ಆಯೋಗದ ಸಭೆಯಲ್ಲಿ, ಸಂಸತ್ ಅಧಿವೇಶನದಲ್ಲಿ ಮಾತನಾಡುವುದಿಲ್ಲ. ಸಂಸತ್ ಅಧಿವೇಶನದಲ್ಲಿ ಗದ್ದಲ-ಗಲಾಟೆ ಮಾಡಿ ಯಾವುದೇ ವಿಷಯದ ಕುರಿತು ಚರ್ಚೆ ಮಾಡಲು ಅವಕಾಶ ಕೊಡುವುದಿಲ್ಲ. ತಾವು ಮಾತನಾಡುವುದಿಲ್ಲ, ನಮಗೂ ಉತ್ತರ ಕೊಡಲು ಅವಕಾಶ ಕೊಡುವುದಿಲ್ಲ.
ಹೊರಗಡೆ ರಾಜಕೀಯ ಉದ್ದೇಶದಿಂದ ಅನುದಾನ ಹಂಚಿಕೆ, ಮಹದಾಯಿ ವಿಷಯದಲ್ಲಿ ಅನ್ಯಾಯವಾಗಿದೆಯೆಂದು ಮಾತನಾಡುತ್ತಾರೆ ಎಂದು ಟೀಕಿಸಿದರು. ಅಲ್ಲದೇ ಮುಡಾ, ವಾಲ್ಮೀಕಿ ಹಗರಣದಲ್ಲಿ ಲೋಕಾಯುಕ್ತ, ಇಡಿ ತನಿಖೆ ನಡೆಯುತ್ತಿದ್ದು, ಇಂದಲ್ಲ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಭವಿಷ್ಯ ನುಡಿದರು.

ಇದರಿಂದ ಜನರ ಗಮನ ಬೇರೆಡೆ ಸೆಳೆಯಲು ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಹಳೇ ಪ್ರಕರಣಗಳನ್ನು ಕೆದಕುತ್ತಿದ್ದಾರೆ. ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಸುಮ್ಮನೆ ಕುಳಿತಿದ್ದು ಯಾಕೆ ಎಂಬುದಕ್ಕೆ ಕಾಂಗ್ರೆಸ್ ಉತ್ತರ ನೀಡಬೇಕು. ರಾಜಕೀಯ ದ್ವೇಷ ಸಾಧನೆ ಹಾಗೂ ಬಿಜೆಪಿ ವಿರುದ್ಧ ಅಪ ಪ್ರಚಾರ ನಡೆಸುವ ಇಂಥ ಪ್ರಯತ್ನಗಳು ಕಾಂಗ್ರೆಸ್ಸಿಗೆ ವ್ಯತಿರಿಕ್ತ ಪರಿಣಾಣ ಉಂಟು ಮಾಡಲಿದೆ ಎಂದು ಅವರು ಎಚ್ಚರಿಸಿದರು.
ಬಿಜೆಪಿ ನಾಯಕರ ಅಸಮಾಧಾನ: ಇನ್ನು ಬಿಜೆಪಿಯಲ್ಲಿ ಅಸಮಾಧಾನ ಹೆಚ್ಚಾಗುತ್ತಿರುವುದು ಹಾಗೂ ಬಿಜೆಪಿ ನಾಯಕರು ಬಹಿರಂಗವಾಗಿ ಹೇಳಿಕೆಗಳನ್ನು ಕೊಡುತ್ತಿರುವುದು ಬಿಜೆಪಿ ನಾಯಕರಲ್ಲಿ ಅಸಮಾಧಾನ ಸೃಷ್ಟಿಸಿದೆ. ಈಚೆಗೆ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ಸಹ ಇದೇ ವಿಚಾರಕ್ಕೆ ಅಸಮಾಧಾನ ಹೊರ ಹಾಕಿದ್ದರು. ಈ ವಿಚಾರವನ್ನು ನಾನು ಈಗಾಗಲೇ ಬಿಜೆಪಿ ಹೈಕಮಾಂಡ್ ನಾಯಕರ ಗಮನಕ್ಕೆ ತಂದಿದ್ದರೂ ಸಮಸ್ಯೆ ಪರಿಹಾರವಾಗಿಲ್ಲ ಎಂದಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications