BJP Candidates 3rd List: ಮಾನ್ವಿ ಹಾಗೂ ಶಿವಮೊಗ್ಗ ನಗರಕ್ಕೆ ಅಭ್ಯರ್ಥಿ ಘೋಷಿಸದ ಬಿಜೆಪಿ
ಶಿವಮೊಗ್ಗ, ಏಪ್ರಿಲ್. 17: ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, ಮಾನ್ವಿ ಹಾಗೂ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಗಳಿಗೆ ಇನ್ನು ಅಭ್ಯರ್ಥಿಗಳನ್ನು ಫೈನಲ್ ಮಾಡಿಲ್ಲ. ಎರಡು ಕ್ಷೇತ್ರಗಳನ್ನು ಹಾಗೆ ಉಳಿಸಿಕೊಂಡಿದೆ.

ಕಳೆದ ವಾರ ಬಿಜೆಪಿ ತನ್ನ ಅಭ್ಯರ್ಥಿಗಳು ಎರಡನೇ ಪಟ್ಟಿ ಬಿಡುಗಡೆ ಮಾಡಿತ್ತು. ಈ ಹಿಂದಿನ ಎರಡು ಪಟ್ಟಿಗಳಲ್ಲಿ 212 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿತ್ತು. ಇದೀಗ 10 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಹುನಿರೀಕ್ಷಿತ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ಮತ್ತು ಮಾನ್ವಿ ವಿಧಾನಸಭಾ ಕ್ಷೇತ್ರಗಳನ್ನು ಹಾಗೆ ಉಳಿಸಿಕೊಂಡಿದ್ದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಶಿವಮೊಗ್ಗ ನಗರ ಕ್ಷೇತ್ರವನ್ನು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿನಿಧಿಸುತ್ತಿದ್ದು, ಈ ಬಾರಿ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಆದರೆ, ತಮ್ಮ ರಾಜಕೀಯ ಜೀವನ ಮುಡುಪಿಟ್ಟು ಮಗನ ಭವಿಷ್ಯ ಬೆಳಗಿಸುವ ಕನಸು ಕಾಣುತ್ತದ್ದಾರೆ. ಅವರ ಮಗ ಕಾಂತೇಶ್ಗೆ ಟಿಕೆಟ್ ನೀಡಬೇಕು ಎಂಬ ಬೇಡಿಕೆಯಿಟ್ಟಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರ ಮಗನಿಗೆ ಶಿಕಾರಿಪುರದಲ್ಲಿ ಅವಕಾಶ ಕೊಡುವುದಾದರೆ ತನ್ನ ಮಗನಿಗೇಕೆ ಶಿವಮೊಗ್ಗದಲ್ಲಿ ಟಿಕೆಟ್ ಕೊಡಬಾರದೆಂಬ ವಾದ ಈಶ್ವರಪ್ಪರದು ಎನ್ನಲಾಗುತ್ತಿದೆ.
ಈ ಎಲ್ಲಾ ಬೆಳವಣಿಗೆ ಹಿನ್ನೆಲೆ ಇಲ್ಲಿಯವರೆಗೂ ಮೂರು ಪಟ್ಟಿಗಳಲ್ಲೂ ಬಿಜೆಪಿ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಬಿಜೆಪಿಗೆ ಇಲ್ಲಿ ಸೂಡಾದ ಅಧ್ಯಕ್ಷರಾಗಿದ್ದ ಲಿಂಗಾಯತ ಸಮುದಾಯದ ಜ್ಯೋತಿ ಪ್ರಕಾಶ್ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಬಿಜೆಪಿ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ತನಗಿದು ಕೊನೆಯ ಅವಕಾಶ ಟಿಕೆಟ್ ನೀಡಬೇಕು ಇಲ್ಲದಿದ್ದರೆ ಕಾಂಗ್ರೆಸ್ ಸೇರುವುದಾಗಿ ಬೆದರಿಕೆಯನ್ನೇ ಹಾಕಿದ್ದಾರೆ.
ಇನ್ನು ರಾಯಚೂರು ಜಿಲ್ಲೆಯ ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೂ ಟಿಕೆಟ್ ಘೋಷಣೆಯಾಗಿಲ್ಲ. ರಾಯಚೂರಿನ 7 ವಿಧಾನಸಭಾ ಕ್ಷೇತ್ರಗಳಲ್ಲಿ ಮಾನ್ವಿ ಒಂದಾಗಿದ್ದು ಇದು ಎಸ್ಟಿ ಮೀಸಲು ಕ್ಷೇತ್ರ ಕೂಡ. ಇಲ್ಲಿ ಬಿಜೆಪಿಯಿಂದ ಮಾಜಿ ಶಾಸಕ ಗಂಗಾಧರ ನಾಯಕ ಹಾಗೂ ಮುಖಂಡ ಬಿ.ಮಾನಪ್ಪ ನಾಯಕ ಟಿಕೆಟ್ ನಿರೀಕ್ಷೆಯಲ್ಲಿದ್ದು, ದೇವದುರ್ಗ ಶಾಸಕ ಕೆ ಶಿವನಗೌಡ ನಾಯಕರ ಅಣತಿಯಂತೆ ಅಭ್ಯರ್ಥಿ ಘೋಷಣೆಯಾಗುವುದರಲ್ಲಿ ಅನುಮಾನವಿಲ್ಲ ಎನ್ನಲಾಗಿತ್ತು. ಆದರೆ, ಬಿಜೆಪಿ ಅಭ್ಯರ್ಥಿ ಘೋಷಿಸದೆ ಆಕಾಂಕ್ಷಿಗಳ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications