ಪ್ರತಾಪ್ ಸಿಂಹನ್ನ ಬಿಜೆಪಿ ಕಿತ್ತು ಬಿಸಾಕಿದೆ, ಪಾಪ ಆತನೂ ರಾಜಕೀಯ ಮಾಡಬೇಕಲ್ಲ?
ರಾಜ್ಯ ಸರ್ಕಾರ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಈ ಬಗ್ಗೆ ಸಿಎಂ ಈಗಾಗಲೇ ಉತ್ತರ ನೀಡಿದ್ದಾರೆ. ಪ್ರತಾಪ್ ಸಿಂಹ ಅವರನ್ನು ಬಿಜೆಪಿ ಈಗಾಗಲೇ ಕಡೆಗಣಿಸಿದೆ. ಪಾಪ ಆತನಿಗೂ ರಾಜಕೀಯ ಮಾಡಬೇಕು. ಹೀಗಾಗಿ ತನ್ನ ಅಸ್ತಿತ್ವ ತೋರಿಸಿಕೊಳ್ಳಲು ಹೀಗೆಲ್ಲ ಮಾಡುತ್ತಿದ್ದಾರೆ. ಈ ಬಗ್ಗೆ ಕೋರ್ಟ್ ವಿಚಾರಣೆ ಮಾಡಿ ತೀರ್ಮಾನ ಮಾಡಲಿದೆ ಎಂದು ತಿರುಗೇಟು ನೀಡಿದ್ದಾರೆ.
ನಾಡ ಹಬ್ಬ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಬಗ್ಗೆ ಮಾತನಾಡಿ, ಇದರ ಹೊರತಾಗಿ ರಾಜಕೀಯ ಮಾಡಲು ಅವರಿಗೆ ಬೇರೆ ವಿಚಾರ ಇಲ್ಲ. ಅವರಿಗೆ ರಾಜ್ಯದ ಬಗ್ಗೆ ಕಾಳಜಿ ಇದ್ದರೆ ದೆಹಲಿಗೆ ಹೋಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಬೆಂಗಳೂರು ಅಭಿವೃದ್ಧಿಗೆ ಅನುದಾನ, ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಅನುಮತಿ, ನರೇಗಾ ಅನುದಾನ ಕೊಡಿಸಲಿ ಎಂದು ಸವಾಲ್ ಹಾಕಿದ್ದಾರೆ. ಅದನ್ನು ಬಿಟ್ಟು ಈ ರೀತಿ ಖಾಲಿ ಮಾತು ಆಡೋದು ಬೇಡ. ಕೇವಲ ಪ್ರಚಾರಕ್ಕೆ ಅವರೆಲ್ಲ ಹೀಗೆ ರಾಜಕೀಯ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಎರಡು ಗುಂಪುಗಳ ನಡುವೆ ಕಿತ್ತಾಟ
"ಧರ್ಮಸ್ಥಳ ವಿಚಾರದಲ್ಲಿ ಸತ್ಯಾಂಶ ಒದಗಿಸಿದ್ದು ನಾವು. ಆದರೆ ಅವರು ನಮಗಿಂತ ಮುಂಚಿತವಾಗಿ ಹೈಸ್ಪೀಡ್ನಲ್ಲಿ ಹೊರಟಿದ್ದಾರೆ. ಬಿಜೆಪಿಯ ಎರಡು ಗುಂಪುಗಳ ನಡುವಣ ತಿಕ್ಕಾಟಕ್ಕೆ ಧರ್ಮಸ್ಥಳವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಬಲಿಪಶು ಮಾಡುತ್ತಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ಮಾಡುತ್ತಿರುವವರು ಬಿಜೆಪಿಯವರು. ಬುರುಡೆ ಗಿರಾಕಿ ಯಾರು? ಬಿಜೆಪಿ ಕಾರ್ಯಕರ್ತರಲ್ಲವೇ? ಧರ್ಮಸ್ಥಳಕ್ಕೆ ಅಪಮಾನ ಆಗಿದ್ದರೆ ಅದು ಬಿಜೆಪಿ ನಾಯಕರು ಹಾಗೂ ಅದರ ಸಂಘಟನೆಯವರಿಂದ ಮಾತ್ರ ಎಂದು ಆರೋಪಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸುವ ಬಗ್ಗೆ ಬಿಜೆಪಿ ಟೀಕೆಗೆ ಉತ್ತರ ನೀಡಿರುವ ಡಿಕೆ ಶಿವಕುಮಾರ್, ಒಂದೆರಡು ದಿನಗಳಲ್ಲಿ ಬಿಜೆಪಿಯವರು ಮಾಡಿರುವ ಕಾನೂನನ್ನು ನಿಮ್ಮ ಮುಂದೆ ತಂದಿಡುತ್ತೇನೆ. ಅವರು ಮಾಡಿರುವ ಕಾನೂನಿನಲ್ಲಿ ಈ ಚುನಾವಣೆ ವೇಳೆ ಮತಯಂತ್ರ ಅಥವಾ ಮತಪತ್ರ ಬಳಕೆ ಮಾಡಬಹುದು ಎಂದು ಹೇಳಿದ್ದಾರೆ. ಅವರೇ ಮಾಡಿರುವ ಕಾನೂನು ಪ್ರಕಾರ ನಡೆದರೆ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.
ತಮ್ಮ ಬೈಕ್ನಲ್ಲೇ ಬೆಂಗಳೂರು ರೌಂಡ್ಸ್
ಡಿಕೆ ಶಿವಕುಮಾರ್ ಅವರು ತಮ್ಮ ನೆಚ್ಚಿನ ಹಳೆಯ ಬೈಕ್ ಏರಿ ಸಂಡೇ ರೌಂಡ್ಸ್ ಹೊಡೆದಿದ್ದಾರೆ. ಇಂದು ತುಂಬಿದ ವೇಳಾಪಟ್ಟಿಯ ನಡುವೆ, ನನ್ನ ಯೌವನವನ್ನು ಮತ್ತೆ ಅನುಭವಿಸಲು ನಾನು ಸ್ವಲ್ಪ ಸಮಯ ತೆಗೆದುಕೊಂಡೆ. ಯುವ ಕಾಂಗ್ರೆಸ್ ರಾಜ್ಯ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಲು ಬೆಂಗಳೂರಿನ ಬೀದಿಗಳಲ್ಲಿ ಬೈಕ್ ಸವಾರಿ ಮಾಡಿದೆ. ಇದು ಕೇವಲ ಸವಾರಿಗಿಂತ ಹೆಚ್ಚಿನದಾಗಿತ್ತು. ನಗರದೊಂದಿಗೆ ಮತ್ತೆ ಸಂಪರ್ಕ ಸಾಧಿಸಲು ಮತ್ತು ನಮ್ಮ ನಾಗರಿಕರು ಎದುರಿಸುತ್ತಿರುವ ಗುಂಡಿಗಳಂತಹ ದೈನಂದಿನ ಸವಾಲುಗಳನ್ನು ನೇರವಾಗಿ ವೀಕ್ಷಿಸಲು ಇದು ಒಂದು ಅವಕಾಶವಾಗಿತ್ತು. ನಾವು ಒಟ್ಟಿಗೆ ಇದ್ದೇವೆ, ಕೇಳುತ್ತಿದ್ದೇವೆ, ನೋಡುತ್ತಿದ್ದೇವೆ ಮತ್ತು ಉತ್ತಮ ಬೆಂಗಳೂರನ್ನು ನಿರ್ಮಿಸಲು ಬದ್ಧರಾಗಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications