Get Updates
Get notified of breaking news, exclusive insights, and must-see stories!

ಪ್ರತಾಪ್ ಸಿಂಹನ್ನ ಬಿಜೆಪಿ ಕಿತ್ತು ಬಿಸಾಕಿದೆ, ಪಾಪ ಆತನೂ ರಾಜಕೀಯ ಮಾಡಬೇಕಲ್ಲ?

ರಾಜ್ಯ ಸರ್ಕಾರ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್‌, ಈ ಬಗ್ಗೆ ಸಿಎಂ ಈಗಾಗಲೇ ಉತ್ತರ ನೀಡಿದ್ದಾರೆ. ಪ್ರತಾಪ್‌ ಸಿಂಹ ಅವರನ್ನು ಬಿಜೆಪಿ ಈಗಾಗಲೇ ಕಡೆಗಣಿಸಿದೆ. ಪಾಪ ಆತನಿಗೂ ರಾಜಕೀಯ ಮಾಡಬೇಕು. ಹೀಗಾಗಿ ತನ್ನ ಅಸ್ತಿತ್ವ ತೋರಿಸಿಕೊಳ್ಳಲು ಹೀಗೆಲ್ಲ ಮಾಡುತ್ತಿದ್ದಾರೆ. ಈ ಬಗ್ಗೆ ಕೋರ್ಟ್ ವಿಚಾರಣೆ ಮಾಡಿ ತೀರ್ಮಾನ ಮಾಡಲಿದೆ ಎಂದು ತಿರುಗೇಟು ನೀಡಿದ್ದಾರೆ.

ನಾಡ ಹಬ್ಬ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಬಗ್ಗೆ ಮಾತನಾಡಿ, ಇದರ ಹೊರತಾಗಿ ರಾಜಕೀಯ ಮಾಡಲು ಅವರಿಗೆ ಬೇರೆ ವಿಚಾರ ಇಲ್ಲ. ಅವರಿಗೆ ರಾಜ್ಯದ ಬಗ್ಗೆ ಕಾಳಜಿ ಇದ್ದರೆ ದೆಹಲಿಗೆ ಹೋಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಬೆಂಗಳೂರು ಅಭಿವೃದ್ಧಿಗೆ ಅನುದಾನ, ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಅನುಮತಿ, ನರೇಗಾ ಅನುದಾನ ಕೊಡಿಸಲಿ ಎಂದು ಸವಾಲ್‌ ಹಾಕಿದ್ದಾರೆ. ಅದನ್ನು ಬಿಟ್ಟು ಈ ರೀತಿ ಖಾಲಿ ಮಾತು ಆಡೋದು ಬೇಡ. ಕೇವಲ ಪ್ರಚಾರಕ್ಕೆ ಅವರೆಲ್ಲ ಹೀಗೆ ರಾಜಕೀಯ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

bjp-ignores-pratap-simha-dk-shivakumar-sarcastic-remark

ಬಿಜೆಪಿ ಎರಡು ಗುಂಪುಗಳ ನಡುವೆ ಕಿತ್ತಾಟ

"ಧರ್ಮಸ್ಥಳ ವಿಚಾರದಲ್ಲಿ ಸತ್ಯಾಂಶ ಒದಗಿಸಿದ್ದು ನಾವು. ಆದರೆ ಅವರು ನಮಗಿಂತ ಮುಂಚಿತವಾಗಿ ಹೈಸ್ಪೀಡ್‌ನಲ್ಲಿ ಹೊರಟಿದ್ದಾರೆ. ಬಿಜೆಪಿಯ ಎರಡು ಗುಂಪುಗಳ ನಡುವಣ ತಿಕ್ಕಾಟಕ್ಕೆ ಧರ್ಮಸ್ಥಳವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಬಲಿಪಶು ಮಾಡುತ್ತಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ಮಾಡುತ್ತಿರುವವರು ಬಿಜೆಪಿಯವರು. ಬುರುಡೆ ಗಿರಾಕಿ ಯಾರು? ಬಿಜೆಪಿ ಕಾರ್ಯಕರ್ತರಲ್ಲವೇ? ಧರ್ಮಸ್ಥಳಕ್ಕೆ ಅಪಮಾನ ಆಗಿದ್ದರೆ ಅದು ಬಿಜೆಪಿ ನಾಯಕರು ಹಾಗೂ ಅದರ ಸಂಘಟನೆಯವರಿಂದ ಮಾತ್ರ ಎಂದು ಆರೋಪಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸುವ ಬಗ್ಗೆ ಬಿಜೆಪಿ ಟೀಕೆಗೆ ಉತ್ತರ ನೀಡಿರುವ ಡಿಕೆ ಶಿವಕುಮಾರ್‌, ಒಂದೆರಡು ದಿನಗಳಲ್ಲಿ ಬಿಜೆಪಿಯವರು ಮಾಡಿರುವ ಕಾನೂನನ್ನು ನಿಮ್ಮ ಮುಂದೆ ತಂದಿಡುತ್ತೇನೆ. ಅವರು ಮಾಡಿರುವ ಕಾನೂನಿನಲ್ಲಿ ಈ ಚುನಾವಣೆ ವೇಳೆ ಮತಯಂತ್ರ ಅಥವಾ ಮತಪತ್ರ ಬಳಕೆ ಮಾಡಬಹುದು ಎಂದು ಹೇಳಿದ್ದಾರೆ. ಅವರೇ ಮಾಡಿರುವ ಕಾನೂನು ಪ್ರಕಾರ ನಡೆದರೆ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.

ತಮ್ಮ ಬೈಕ್‌ನಲ್ಲೇ ಬೆಂಗಳೂರು ರೌಂಡ್ಸ್‌

ಡಿಕೆ ಶಿವಕುಮಾರ್‌ ಅವರು ತಮ್ಮ ನೆಚ್ಚಿನ ಹಳೆಯ ಬೈಕ್‌ ಏರಿ ಸಂಡೇ ರೌಂಡ್ಸ್‌ ಹೊಡೆದಿದ್ದಾರೆ. ಇಂದು ತುಂಬಿದ ವೇಳಾಪಟ್ಟಿಯ ನಡುವೆ, ನನ್ನ ಯೌವನವನ್ನು ಮತ್ತೆ ಅನುಭವಿಸಲು ನಾನು ಸ್ವಲ್ಪ ಸಮಯ ತೆಗೆದುಕೊಂಡೆ. ಯುವ ಕಾಂಗ್ರೆಸ್ ರಾಜ್ಯ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಲು ಬೆಂಗಳೂರಿನ ಬೀದಿಗಳಲ್ಲಿ ಬೈಕ್‌ ಸವಾರಿ ಮಾಡಿದೆ. ಇದು ಕೇವಲ ಸವಾರಿಗಿಂತ ಹೆಚ್ಚಿನದಾಗಿತ್ತು. ನಗರದೊಂದಿಗೆ ಮತ್ತೆ ಸಂಪರ್ಕ ಸಾಧಿಸಲು ಮತ್ತು ನಮ್ಮ ನಾಗರಿಕರು ಎದುರಿಸುತ್ತಿರುವ ಗುಂಡಿಗಳಂತಹ ದೈನಂದಿನ ಸವಾಲುಗಳನ್ನು ನೇರವಾಗಿ ವೀಕ್ಷಿಸಲು ಇದು ಒಂದು ಅವಕಾಶವಾಗಿತ್ತು. ನಾವು ಒಟ್ಟಿಗೆ ಇದ್ದೇವೆ, ಕೇಳುತ್ತಿದ್ದೇವೆ, ನೋಡುತ್ತಿದ್ದೇವೆ ಮತ್ತು ಉತ್ತಮ ಬೆಂಗಳೂರನ್ನು ನಿರ್ಮಿಸಲು ಬದ್ಧರಾಗಿದ್ದೇವೆ ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+