'ಜನವರಿಯಲ್ಲಿ ರಾಜ್ಯ ಸರ್ಕಾರ ಪತನ; ಮಧ್ಯಂತರ ಚುನಾವಣೆ ನಿಶ್ಚಿತ!'
ಮಂಗಳೂರು, ನವೆಂಬರ್ 06: ನವೆಂಬರ್ನಲ್ಲಿ ಯಾರು ಮುಖ್ಯಮಂತ್ರಿ ಆಗ್ತಾರೆ ಅನ್ನೋ ಬಗ್ಗೆ ಬಿಜೆಪಿಗೆ ಸಂಬಂಧ ಇಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ, ನವೆಂಬರ್ ಕ್ರಾಂತಿ ಅನ್ನೋದು ಕಾಂಗ್ರೆಸ್ ನವರೇ ಹುಟ್ಟು ಹಾಕಿರೋದು. ಸದ್ಯದ ಪರಿಸ್ಥಿತಿ ನೋಡಿದರೆ ಜನವರಿಯಲ್ಲಿ ಸರ್ಕಾರ ಪತನವಾಗಿ ಮಧ್ಯಂತರ ಚುನಾವಣೆಯಾಗುವುದು ನಿಶ್ಚಿತ. ಈ ನಿಟ್ಟಿನಲ್ಲಿ ಬಿಜೆಪಿ ಈಗಾಗಲೇ ಸಿದ್ಧತೆ ಆರಂಭಿಸಿದೆ ಎಂದು ಬಿಜೆಪಿ ನಾಯಕ, ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿದರು.
ಇಂದು(ಗುರುವಾರ) ಮಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸುನೀಲ್ ಕುಮಾರ್ ಅವರು, ರಾಜ್ಯದಲ್ಲಿ ಅಭಿವೃದ್ಧಿ ಚಟುವಟಿಕೆ ಸಂಪೂರ್ಣ ನೆಲಕಚ್ಚಿದ್ದು, ಮುಖ್ಯಮಂತ್ರಿ ಯಾರಾಗಬೇಕು ಅನ್ನೋ ಗೊಂದಲದಲ್ಲೇ ಆಡಳಿತ ನಡೆಸುವವರು ಕಾಲ ಹರಣ ಮಾಡುತ್ತಿದ್ದಾರೆ. ಗ್ರಾಮ ಮಟ್ಟದಿಂದ ವಿಧಾನಸೌಧತನಕ ಆಡಳಿತ ವ್ಯವಸ್ಥೆ ಕುಸಿದಿದೆ.

ಇವರ ಗೊಂದಲದ ಒಟ್ಟು ವಾತಾವರಣ ನೋಡಿದ್ರೆ ಆಡಳಿತ ಪಕ್ಷದ ಶಾಸಕರು ಬೇರೆ ಬೇರೆ ಗುಂಪಾಗಿ ವಿಂಗಡನೆಯಾಗಿ ಸಭೆ ಮಾಡ್ತಾ ಇದ್ದಾರೆ. ಇದನ್ನೆಲ್ಲಾ ನೋಡಿದರೆ ಜನವರಿ ಹೊತ್ತಿಗೆ ಈ ಸರಕಾರ ಪತನವಾಗುವುದು ಕಣ್ಣ ಮುಂದೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮಧ್ಯಂತರ ಚುನಾವಣೆಗೆ ಸಿದ್ದತೆ ಮಾಡಿಕೊಳ್ತಾ ಇದ್ದೀವಿ. ಬಹುಮತವನ್ನು ರಾಜ್ಯದ ಜನರು ಕೊಟ್ಟಾಗ ಒಳ್ಳೆಯ ಆಡಳಿತದ ನಿರೀಕ್ಷೆ ಮಾಡಿದ್ದೆವು. ಆದರೆ ಅದರ ಬದಲು ಆಂತರಿಕ ಕಚ್ಚಾಟದಲ್ಲಿ ಈ ಸರಕಾರ ಮುಳುಗಿದೆ ಎಂದರು.
ರಾಜ್ಯದ ಅಭಿವೃದ್ಧಿ ದೃಷ್ಟಿಯಲ್ಲಿಟ್ಟು ದೆಹಲಿಗೆ ಹೋಗೋದನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮರೆತು ಬಿಟ್ಟಿದ್ದಾರೆ. ರಾಜ್ಯದ ಅಭಿವೃದ್ಧಿ ವಿಚಾರವಿಟ್ಟುಕೊಂಡು ದೆಹಲಿಗೆ ಹೋಗ್ತಾ ಇಲ್ಲ. ಈ ಹಿಂದೆ ಪ್ರಧಾನ ಮಂತ್ರಿ ವಿರುದ್ದ ಪ್ರತಿಭಟನೆಗೆ ವಿಶೇಷ ವಿಮಾನದಲ್ಲಿ ಹೋಗಿದ್ರು. ಈ ಸರಕಾರ ಯಾವಾಗ ಕುಸಿದು ಬೀಳುತ್ತೆ, ಅನ್ನೋದನ್ನ ಜನರು ಕೂಡ ನಿರೀಕ್ಷೆಯಿಂದ ನೋಡ್ತಾ ಇದ್ದಾರೆ. ರಾಜ್ಯದಲ್ಲಿ ಶೇ.80 ಕಮಿಷನ್ ಆಗಿದೆ, ದುಟ್ಟು ಕೊಟ್ಟರೂ ಕೆಲಸ ಆಗದ ವಾತಾವರಣ ಗ್ರಾ.ಪಂ ತನಕ ಬಂದಿದೆ. ಕರಾವಳಿ ಭಾಗದ ಜಿಲ್ಲೆಗಳ ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿದೆ ಎಂದರು.
ಆರೆಸ್ಸೆಸ್ ವಿರುದ್ದ ಸಚಿವ ಪ್ರಿಯಾಂಕ್ ಖರ್ಗೆ ಆರೋಪ ವಿಚಾರ ಮಾಧ್ಯಮಗಳ ಪ್ರತಿನಿಧಿಗಳ ಪ್ರಶ್ನೆಗೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಮಾತನಾಡಿ, ಯಾರಿಗೆ ಅಜ್ಞಾನ ಇದ್ಯೋ ಅವರು ಆರೆಸ್ಸೆಸ್ ಬಗ್ಗೆ ನಿರಂತರವಾಗಿ ಮಾತನಾಡುತ್ತಾ ಇರುತ್ತಾರೆ. ಅಜ್ಞಾನಿಗಳ ಹಾಗೂ ಅಪ್ರಬುದ್ದರ ಬಗ್ಗೆ ಹೆಚ್ಚು ಮಾತನಾಡೋದು ಒಳ್ಳೆಯದಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications