DCM DK Shivakumar: ಇದೇ ಕಾಂಗ್ರೆಸ್ ಹಾಗೂ ಬಿಜೆಪಿಗೆ ಇರುವ ವ್ಯತ್ಯಾಸ: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು, ಅಕ್ಟೋಬರ್‌ 06: ಕುವೆಂಪು ಅವರ ಸರ್ವಜನಾಂಗದ ಶಾಂತಿಯ ತೋಟ ನಿರ್ಮಾಣ ಮಾಡುವುದೇ ನಮ್ಮ ಗುರಿ ಹಾಗೂ ಉದ್ದೇಶ. ಬಿಜೆಪಿಯವರು ಸತ್ಯಶೋಧನ ಸಮಿತಿಯ ಮೂಲಕ ಅವರಿಗೆ ಏನು ಬೇಕೋ ಅದನ್ನು ಹೇಳುತ್ತಿದ್ದಾರೆ. ನಾವು ಸಮಾಜ ಜೋಡಿಸುತ್ತಿದ್ದರೆ, ಅವರು ಒಡೆಯುತ್ತಿದ್ದಾರೆ. ಇದೇ ಕಾಂಗ್ರೆಸ್ ಹಾಗೂ ಬಿಜೆಪಿಗೆ ಇರುವ ವ್ಯತ್ಯಾಸ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಶಿವಮೊಗ್ಗದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿ ಭಯದ ವಾತಾವರಣ ಉಂಟು ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಆರೋಪಕ್ಕೆ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಬ್ಬಿಣದಿಂದ ಸೂಜಿ ಮತ್ತು ಕತ್ತರಿ ತಯಾರಿಸಬಹುದು. ಕಾಂಗ್ರೆಸ್ ಸೂಜಿಯಿಂದ ಹೊಲಿಯುವ ಕೆಲಸ ಮಾಡುತ್ತಿದ್ದರೆ, ಬಿಜೆಪಿಯವರು ಕತ್ತರಿಯಿಂದ ಕತ್ತರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಛೇಡಿಸಿದರು.

BJP is Working To Divide The Society Says DK Shivakumar

ಇನ್ನೂ ಎಸ್.ಎಂ. ಕೃಷ್ಣ ಅವರ ಕಾಲದಲ್ಲಿ ಕುವೆಂಪು ಅವರ ಜಯ ಭಾರತ ಜನನಿಯ ತನುಜಾತೆ ಹಾಡನ್ನು ನಾಡಗೀತೆಯಾಗಿ ಘೋಷಣೆ ಮಾಡಿದೆವು. ಈ ಹಾಡೇ ಕಾಂಗ್ರೆಸ್ ಪಕ್ಷ ಕರ್ನಾಟಕಕ್ಕೆ ನೀಡಿರುವ ಸಂದೇಶ ಎಂದು ಹೇಳಿದರು.

ಕುವೆಂಪು ಅವರ ಸರ್ವಜನಾಂಗದ ಶಾಂತಿಯ ತೋಟ ನಿರ್ಮಾಣ ಮಾಡುವುದೇ ನಮ್ಮ ಗುರಿ ಹಾಗೂ ಉದ್ದೇಶ. ಬಿಜೆಪಿಯವರು ಸತ್ಯಶೋಧನ ಸಮಿತಿಯ ಮೂಲಕ ಅವರಿಗೆ ಏನು ಬೇಕೋ ಅದನ್ನು ಹೇಳುತ್ತಿದ್ದಾರೆ. ನಾವು ಸಮಾಜ ಜೋಡಿಸುತ್ತಿದ್ದರೆ, ಅವರು ಒಡೆಯುತ್ತಿದ್ದಾರೆ. ಇದೇ ಕಾಂಗ್ರೆಸ್ ಹಾಗೂ ಬಿಜೆಪಿಗೆ ಇರುವ ವ್ಯತ್ಯಾಸ ಎಂದು ಹೇಳಿದರು.

ನಮ್ಮ ಜಿಲ್ಲಾ ಉಸ್ತುವಾರಿ ಸಚಿವರು ಹಿಂದೂ ಮತ್ತು ಮುಸ್ಲಿಂ ಇಬ್ಬರನ್ನೂ ಭೇಟಿ ಮಾಡಿ ಮಾತನಾಡಿದ್ದಾರೆ. ಅವರ ಸಮಸ್ಯೆ ಆಲಿಸಿದ್ದಾರೆ. ಯಾರೇ ತಪ್ಪು ಕೆಲಸ ಮಾಡಿದ್ದಾರೋ, ಅದನ್ನು ಖಂಡಿಸಿದ್ದಾರೆ, ಇಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಮೇಯ ಬರುವುದೇ ಇಲ್ಲ. ಯಾರು ಕಾನೂನು ಮೀರಿ ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ನೀಡುವ ಕೆಲಸ ಮಾಡುತ್ತೇವೆ. ಆದರೆ ಬಿಜೆಪಿಯವರು ಪಟ್ಟಿ ಇಟ್ಟುಕೊಂಡು ಕೆಲವರ ಮನೆಗೆ ಹೋಗಿದ್ದಾರೆ. ನಾವು ನಿಜವಾದ ಹಿಂದುಗಳು, ಬಿಜೆಪಿಯವರು ನಕಲಿ ಹಿಂದುಗಳು ಎನ್ನುವ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಮಾತಿಗೆ ಇದೇ ವೇಳೆ ಸಹಮತ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+