10 ಶಾಸಕರ ಅಮಾನತು ವಿರೋಧಿಸಿ ವಿಧಾನಸಭೆ ಕಲಾಪ ಬಹಿಷ್ಕರಿಸಿದ ಬಿಜೆಪಿ, ಜೆಡಿಎಸ್
ಬೆಂಗಳೂರು, ಜುಲೈ 21: ಸದನದಲ್ಲಿ ಅಸಭ್ಯ ಮತ್ತು ಅಗೌರವ ತೋರಿದ ಕಾರಣಕ್ಕಾಗಿ ಸ್ಪೀಕರ್ 10 ಬಿಜೆಪಿ ಸದಸ್ಯರನ್ನು ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಿದ ನಂತರ, ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಶುಕ್ರವಾರ ಕರ್ನಾಟಕ ವಿಧಾನಸಭೆಯ ಎರಡನೇ ದಿನ ಕಲಾಪವನ್ನು ಬಹಿಷ್ಕರಿಸಿದವು.
ಜುಲೈ 3 ರಂದು ಆರಂಭವಾದ ವಿಧಾನಮಂಡಲ ಅಧಿವೇಶನದ ಕೊನೆಯ ದಿನವಾದ ಇಂದು ಬಿಜೆಪಿ ಶಾಸಕರು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿ ಸರ್ಕಾರ ಮತ್ತು ಸ್ಪೀಕರ್ ಯು ಟಿ ಖಾದರ್ ವಿರುದ್ಧ ಘೋಷಣೆಗಳನ್ನು ಕೂಗಿದರು. ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ಕಾರ್ಯನಿರ್ವಹಣೆ ಅದರ ದಮನಕಾರಿ ಮತ್ತು ಸರ್ವಾಧಿಕಾರಿ ಸ್ವಭಾವ ಮತ್ತು ಸ್ಪೀಕರ್ ಅವರ ನಡವಳಿಕೆಯ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಎರಡೂ ಜಂಟಿ ನಿಯೋಗ ಗುರುವಾರ ಕರ್ನಾಟಕ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ಗೆ ಮನವಿ ಸಲ್ಲಿಸಿದೆ.

ಸ್ಪೀಕರ್ ಕೂಡ ಉಪಸಭಾಪತಿ ರುದ್ರಪ್ಪ ಲಮಾಣಿ ಅವರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗಿ ಬುಧವಾರ ವಿಧಾನಸಭೆ ಕಲಾಪಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಿದ್ದರು. ಕಲಾಪದಲ್ಲಿ ಸಿಟ್ಟಿಗೆದ್ದಿದ್ದ ಬಿಜೆಪಿ ಶಾಸಕರು ವಿಧೇಯಕಗಳು ಮತ್ತು ಕಾರ್ಯಸೂಚಿಯ ಪ್ರತಿಗಳನ್ನು ಹರಿದು ಅಧ್ಯಕ್ಷತೆ ವಹಿಸಿದ್ದ ಲಮಾಣಿ ಅವರತ್ತ ಎಸೆದಿದ್ದರಿಂದ ಬುಧವಾರ ವಿಧಾನಸಭೆ ಅಸ್ತವ್ಯಸ್ತ ಮತ್ತು ಅಶಿಸ್ತಿನ ದೃಶ್ಯಗಳಿಗೆ ಸಾಕ್ಷಿಯಾಗಿತ್ತು.
ಸದನದಲ್ಲಿ ಅಸಭ್ಯ ಮತ್ತು ಅಗೌರವ ತೋರಿದ ಕಾರಣಕ್ಕಾಗಿ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಂಡಿರುವ 10 ಬಿಜೆಪಿ ಶಾಸಕರಲ್ಲಿಸಿ ಎನ್ ಅಶ್ವತ್ಥ್ ನಾರಾಯಣ್, ವಿ ಸುನೀಲ್ ಕುಮಾರ್, ಆರ್ ಅಶೋಕ, ಆರಗ ಜ್ಞಾನೇಂದ್ರ (ಎಲ್ಲರೂ ಮಾಜಿ ಸಚಿವರು), ಡಿ ವೇದವ್ಯಾಸ ಕಾಮತ್, ಯಶಪಾಲ್ ಸುವರ್ಣ, ಧೀರಜ್ ಮುನಿರಾಜ್, ಎ ಉಮತ್ತ್ ಬೆಳ್ಳಾಡ್ ಸೇರಿದ್ದಾರೆ.
ಬುಧವಾರ ಸದನವು ಈ ಕುರಿತು ಪ್ರಸ್ತಾವನೆಯನ್ನು ಅಂಗೀಕರಿಸಿದ ನಂತರ ಅವರನ್ನು ಅಮಾನತುಗೊಳಿಸಲಾಯಿತು. ಪ್ರತಿಯಾಗಿ, ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ನ ಶಾಸಕರು ವಿಧಾನಸಭಾ ಕಾರ್ಯದರ್ಶಿಗೆ ಸ್ಪೀಕರ್ ವಿರುದ್ಧ ಅವಿಶ್ವಾಸ ನೋಟಿಸ್ ನೀಡಿದರು.
ಸೋಮವಾರ ಮತ್ತು ಮಂಗಳವಾರ ನಗರದಲ್ಲಿ 2024ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಸಭೆ ನಡೆಸಿದ್ದ ತನ್ನ ಮೈತ್ರಿಕೂಟದ ನಾಯಕರನ್ನು ಸೇವೆ ಮಾಡಲು ಕಾಂಗ್ರೆಸ್ ಸರ್ಕಾರ 30 ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸದನದ ಬಾವಿಯಿಂದ ಪ್ರತಿಭಟನೆ ನಡೆಸುತ್ತಿದ್ದಂತೆ ಪರಿಸ್ಥಿತಿ ಕೈಮೀರಿತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications