ಹಾರೋಹಳ್ಳಿ ತಾಲೂಕು ಉದ್ಘಾಟನೆ; ಅಶ್ವತ್ಥ ನಾರಾಯಣ -ಅನಿತಾ ಕುಮಾರಸ್ವಾಮಿ ನಡುವೆ ಕ್ರೆಡಿಟ್ ವಾರ್
ಹಾರೋಹಳ್ಳಿ ನೂತನ ತಾಲೂಕು ಉದ್ಘಾಟನೆ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ ನಾರಾಯಣ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ನಡುವೆ ಮಾತಿನ ಜಟಾಪಟಿಗೆ ಸಾಕ್ಷಿಯಾಗಿದೆ.
ರಾಮನಗರ,ಫೆಬ್ರವರಿ21: 2023 ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದ್ದ ರಾಜಕೀಯ ಪಕ್ಷಗಳ ಜಟಾಪಟಿ ಜೋರಾಗಿದ್ದು, ಸಚಿವ ಅಶ್ವತ್ಥ ನಾರಾಯಣ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಮೇಲೆ ರಾಮನಗರ ಪಾಲಿಟಿಕ್ ರಾಜಕಾರಣದಲ್ಲಿ ಸಾಕಷ್ಟು ಚರ್ಚೆ ಗ್ರಾಸವಾಗಿದೆ.
ಈ ಹಿಂದೆ ಸಂಸದರಾದ ಡಿ ಕೆ ಸುರೇಶ್ ಹಾಗೂ ಸಚಿವ ಅಶ್ವತ್ಥ ನಾರಾಯಣ ನಡುವೆ ಅಭಿವೃದ್ದಿ ವಿಚಾರವಾಗಿ ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲಿ ಇಬ್ಬರ ನಾಯಕರ ವಾರ್ ಜೋರಾಗಿ ಸದ್ದು ಮಾಡಿದ್ದು, ಇದೀಗ ಮತ್ತೆ ಹಾರೋಹಳ್ಳಿ ನೂತನ ತಾಲೂಕು ಉದ್ಘಾಟನೆ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ ನಾರಾಯಣ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ನಡುವೆ ಮಾತಿನ ಜಟಾಪಟಿಗೆ ಸಾಕ್ಷಿಯಾಗಿದೆ.
ರಾಮನಗರದ ಹಾರೋಹಳ್ಳಿ ತಾಲ್ಲೂಕು ಉದ್ಘಾಟನೆ ಬಳಿಕ ವೇದಿಕೆಯ ಮೇಲೆ ಮಾತನಾಡಿದ ಸಚಿವ ಅಶ್ವಥ್ ನಾರಾಯಣ್, ಹಾರೋಹಳ್ಳಿ ತಾಲ್ಲೂಕು ರಚನೆಗೆ ನಮ್ಮ ಸರ್ಕಾರ ಸಾಕಷ್ಟು ಶ್ರಮ ವಹಿಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಈ ವೇಳೆ ಅಶ್ವಥ್ ನಾರಾಯಣ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕಿ ಅನಿತಾ ಕುಮಾರಸ್ವಾಮಿ, ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಯೋಜನೆ ಜಾರಿ ತಂದಿದ್ದು, ತಾಲ್ಲೂಕು ಘೋಷಣೆಯಾಗಿದ್ದು ಎಂದು ತಾಲೂಕು ರಚನೆಯ ಕ್ರೆಡಿಟ್ ವಾರ್ ಗೆ ಬಿಜೆಪಿ ಜೆಡಿಎಸ್ ನಾಯಕರು ಮುಂದಾಗಿರುವ ಪ್ರಸಂಗ ನಡೆದಿದೆ.

ಇದಕ್ಕೆ ಪ್ರತಿಯಾಗಿ ಉತ್ತರಿಸಿದಅಶ್ವಥ್ ನಾರಾಯಣ್, ನಾವು ಸುಮ್ಮನೆ ಬೋರ್ಡ್ ಹಾಕಿಕೊಳ್ಳಲ್ಲ. ಹೆಚ್.ಡಿಕೆ ಮುಖ್ಯಂತ್ರಿ ಆಗಿದ್ದಾಗ 2019ರಲ್ಲಿ ತಾತ್ವಿಕ ಅನುಮೋದನೆ ಕೊಟ್ಟಿದ್ದರು. 2022ರಲ್ಲಿ ತಾಲ್ಲೂಕು ರಚನೆಗೆ ಅಂತಿಮ ಅಧಿಸೂಚನೆ ಕೊಟ್ಟಿದ್ದು ನಮ್ಮ ಸರ್ಕಾರ. ನಮ್ಮ ಸರ್ಕಾರದಲ್ಲಿಯೇ ತಾಲ್ಲೂಕು ರಚನೆಗೆ ಅಧಿಸೂಚನೆ ಕೊಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಮನಗರ ಜಿಲ್ಲೆ ಅಭಿವೃದ್ದಿಯಾಗಿದೆ ಎಂದು ಹೇಳಿದ್ದಾರೆ.

ಇನ್ನೂ ಕಾರ್ಯಕ್ರಮದಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿ ಮಾತು ಪ್ರಾರಂಭಿಸುತ್ತಿದ್ದಂತೆ ಸಚಿವ ಅಶ್ವಥ್ ನಾರಾಯಣ್ ಅಲ್ಲಿಂದ ತೆರಳಿದರು. ಈ ವೇಳೆ ಮಾತನಾಡಿ ಅಶ್ವಥ್ ನಾರಾಯಣ್ ಗೆ ತಿರುಗೇಟು ನೀಡಿದ ಅನಿತಾ ಕುಮಾರಸ್ವಾಮಿ, ನಾವು ಬರುವುದಕ್ಕೂ ಮುನ್ನ ಕಚೇರಿ ಉದ್ಘಾಟನೆಯಾಗಿದೆ. ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನವೇ ತಾಲೂಕು ಘೋಷಣೆಯಾಗಿತ್ತು. 450 ಕೋಟಿ ರೂ ವೆಚ್ಚದಲ್ಲಿ ಕುಡಿಯವ ನೀರು ಯೋಜನೆಯಾಗಿದ್ದು ಹೆಚ್.ಡಿ ಕುಮಾರಸ್ವಾಮಿ ಅವಧಿಯಲ್ಲಿ ಈ ಕಾರ್ಯಕ್ರಮಕ್ಕೆ ಕುಮಾರಸ್ವಾಮಿ ಬಂದಿದ್ದರೇ ಯಾರು ಮಾತನಾಡುತ್ತಿರಲಿಲ್ಲ ಎಂದು ಅಶ್ವಥ್ ನಾರಾಯಣ್ ವಿರುದ್ದ ಕಿಡಿಕಾರಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications