ಬಿಜೆಪಿ ಗೆಲುವಿಗಾಗಿ ಮುರಳೀಧರ ರಾವ್ ಬೆಂಗಳೂರಲ್ಲೇ ವಾಸ್ತವ್ಯ
ಕರ್ನಾಟಕದಲ್ಲಿ ಬಿಜೆಪಿ ಉಸ್ತುವಾರಿ ಹೊತ್ತಿರುವ ಮುರಳೀಧರ ರಾವ್ ಅವರು ಶೀಘ್ರದಲ್ಲೇ ಬೆಂಗಳೂರಿನಲ್ಲೇ ಬಂದು ನೆಲೆಸಲಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಟಾರ್ಗೆಟ್ 150 ಗುರಿ ಪೂರೈಕೆಗೆ ಕಾರ್ಯತಂತ್ರ ರೂಪಿಸಲು ಅನುಕೂಲ
ಬೆಂಗಳೂರು, ಜೂನ್ 6: ಕರ್ನಾಟಕದಲ್ಲಿ ಬಿಜೆಪಿಯ ಉಸ್ತುವಾರಿ ವಹಿಸಿಕೊಂಡಿರುವ ಮುರಳೀಧರ ರಾವ್ ಅವರು, ಇದೇ ವರ್ಷ ಆಗಸ್ಟ್ ತಿಂಗಳಿನಿಂದ ಬೆಂಗಳೂರಿನಲ್ಲೇ ವಾಸ್ತವ್ಯ ಹೂಡಲು ನಿರ್ಧರಿಸಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಗಾಗಿ 'ಟಾರ್ಗೆಟ್ 150' ಕಾರ್ಯತಂತ್ರವನ್ನು ಸಿದ್ಧಪಡಿಸಿಕೊಂಡಿರುವ ಬಿಜೆಪಿಯು ತನ್ನ ಈ ರಣತಂತ್ರದಲ್ಲಿ ವಿಜಯಿಯಾಗಲು ಮುರಳೀಧರ ಅವರ ಬೆಂಗಳೂರು ವಾಸ್ತವ್ಯ ಅತ್ಯಗತ್ಯ ಎಂದು ಮನಗಂಡಿದೆ. ಹಾಗಾಗಿಯೇ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಸೂಚನೆ ಮೇರೆಗೆ ಬೆಂಗಳೂರಿನಲ್ಲಿಯೇ ಮುರಳೀಧರ ಅವರು ವಾಸ್ತವ್ಯ ಹೂಡಲಿದ್ದಾರೆ.[ವಿಶ್ವನಾಥ್ ಸಂದರ್ಶನ : ಇರುವುದೋ ಬಿಡುವುದೋ ನೀವೇ ಹೇಳಿ!]

ಎಲ್ಲಿ ವಾಸ್ತವ್ಯ?
ನಗರದ ಮಲ್ಲೇಶ್ವರಂ ನಲ್ಲಿ ಬಿಜೆಪಿಯ ರಾಜ್ಯ ಶಾಖೆಯ ಪ್ರಧಾನ ಕಚೇರಿಯಿರುವುದರಿಂದ ಮಲ್ಲೇಶ್ವರಂ ನಲ್ಲಿಯೇ ಮನೆಯೊಂದನ್ನು ಬಾಡಿಗೆಗೆ ಪಡೆದು ಮುರಳೀಧರ ಅವರಿಗೆ ವಾಸ್ತವ್ಯ ಕಲ್ಪಿಸಲು ಬಿಜೆಪಿ ನಿರ್ಧರಿಸಿದೆ.[ತಡರಾತ್ರಿ ಉಸ್ತುವಾರಿ ಭೇಟಿ ಮಾಡಿದ ಸಿದ್ದರಾಮಯ್ಯ: ಏನೇನೋ ಸುದ್ದಿ!]
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಉಸ್ತುವಾರಿ ವಹಿಸಿಕೊಂಡಿರುವ ವೇಣುಗೋಪಾಲ ರಾವ್ ಅವರು ಶೀಘ್ರದಲ್ಲೇ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆಂದು ಹೇಳಲಾಗುತ್ತಿದೆ. ಇದು ಮುರಳೀಧರ ರಾವ್ ಅವರ ಬೆಂಗಳೂರು ವಾಸ್ತವ್ಯದ ಯೋಜನೆಗೆ ಮತ್ತೊಂದು ಕಾರಣವಾಗಿದೆ.
-
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ: ಶಿವಕುಮಾರ್ ಮೆಣಸಿನಕಾಯಿ ಬರಹ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ












Click it and Unblock the Notifications