ಬಿಜೆಪಿಯಿಂದ ಶಾಸಕರ ಖರೀದಿಗೆ 4,500 ಕೋಟಿ: ಆನಂದ್ ಶರ್ಮಾ ಬಾಂಬ್
ನವದೆಹಲಿ, ಮೇ 21: ಬಹುಮತ ಬರದಿದ್ದರೂ ಸರಕಾರ ರಚಿಸಲು ಹೊರಟಿದ್ದ ಬಿಜೆಪಿ ಶಾಸಕರ ಖರೀದಿಗೆ 4,500 ಕೋಟಿ ರೂಪಾಯಿ ಎತ್ತಿಟ್ಟಿತ್ತು ಎಂದು ಕಾಂಗ್ರೆಸ್ ವಕ್ತಾರ ಆನಂದ್ ಶರ್ಮಾ ಹೊಸ ಬಾಂಬ್ ಸಿಡಿಸಿದ್ದಾರೆ.
ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಕರ್ನಾಟಕ ಚುನಾವಣೆಗಾಗಿ ಬಿಜೆಪಿ ಬರೋಬ್ಬರಿ 11 ಸಾವಿರ ಕೋಟಿ ರೂಪಾಯಿ ತೆಗೆದಿರಿಸಿತ್ತು. ಇದರಲ್ಲಿ ಚುನಾವಣೆಗೆ 6,500 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಉಳಿದ 4,500 ಕೋಟಿ ರೂಪಾಯಿಯನ್ನು ಶಾಸಕರ ಖರೀದಿಗೆ ತೆಗೆದಿರಿಸಿತ್ತು. ಈ ಮೂಲಕ ವಾಮ ಮಾರ್ಗದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ನಾಯಕರು ಹೊರಟಿದ್ದರು," ಎಂದು ಅವರು ವಾಗ್ದಾಳಿ ನಡೆಸಿದರು.
"ನನಗೆ ಅಮಿತ್ ಶಾ ಅವರಿಗೆ ಸಂವಿಧಾನದ ಬಗ್ಗೆ ತಿಳುವಳಿಕೆ ಇದೆ ಅಥವಾ ಗೌರವ ಇದೆ ಎಂದು ಅನಿಸುತ್ತಿಲ್ಲ. ಒಂದೊಮ್ಮೆ ಸಂವಿಧಾನದ ಬಗ್ಗೆ ಗೊತ್ತಿದ್ದರೂ ಅವರು ಅದನ್ನು ಗೌರವಿಸುವುದಿಲ್ಲ," ಎಂದು ಶರ್ಮಾ ಕಿಡಿಕಾರಿದ್ದಾರೆ.

ಇದೇ ವೇಳೆ ಅವರು ಕರ್ನಾಟಕದಲ್ಲಿ ನಡೆಸಲು ಯತ್ನಿಸಿದ ಕುದುರೆ ವ್ಯಾಪಾರಕ್ಕೆ ಬಿಜೆಪಿ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ












Click it and Unblock the Notifications