Dharmasthala Case: ಧರ್ಮಸ್ಥಳದ ಕುರಿತು ಅಪಪ್ರಚಾರ; ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಅಭಿಯಾನ ಆರಂಭ
ಬೆಂಗಳೂರು, ಆಗಸ್ಟ್ 16: ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಇಂದಿನಿಂದ ಧರ್ಮಸ್ಥಳ ಚಲೋ ಅಭಿಯಾನ ಆರಂಭವಾಗಿದೆ. ಬೆಂಗಳೂರಿನ ನೆಲಮಂಗಲ ಟೋಲ್ ಮೂಲಕ ಸುಮಾರು 400ಕ್ಕೂ ಹೆಚ್ಚು ವಾಹನಗಳಲ್ಲಿ ಯಲಹಂಕ ಕ್ಷೇತ್ರದ ಭಕ್ತರೊಂದಿಗೆ ವಿಶ್ವನಾಥ್ ಅವರು ಶ್ರೀಕ್ಷೇತ್ರಕ್ಕೆ ಪ್ರಯಾಣ ಆರಂಭಿಸಲಿದ್ದಾರೆ.
"ಧರ್ಮಸ್ಥಳ ಚಲೋ" ಅಭಿಯಾನಕ್ಕೆ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು. ಪೂಜಾ ವಿಧಿವಿಧಾನ ನೆರವೇರಿಸಿ ನೂರಾರು ವಾಹನಗಳ ಅಭಿಯಾನವನ್ನು ಆರಂಭಿಸಲಾಯಿತು. ಅಪಪ್ರಚಾರ ಖಂಡಿಸಿ ಯಾತ್ರೆ ನಡೆಯುತ್ತಿದ್ದು, ಸಂಜೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಶಾಸಕ ಎಸ್.ಆರ್. ವಿಶ್ವನಾಥ್, ಹಾಲು ಪ್ರಕೋಷ್ಠದ ರಾಜ್ಯ ಸಂಚಾಲಕ ಬೇಲೂರು ರಾಘವೇಂದ್ರ ಶೆಟ್ಟಿ, ಪ್ರಮುಖರು, ಕಾರ್ಯಕರ್ತರು, ಅಭಿಮಾನಿಗಳು ಇದ್ದರು.

ಧರ್ಮಸ್ಥಳ ವಿಚಾರವಾಗಿ ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ಮಾತನಾಡಿ, ಉಪ ಮುಖ್ಯಮಂತ್ರಿಯವರು ನಿಜಕ್ಕೂ ಮಂಜುನಾಥೇಶ್ವರನನ್ನು ನಂಬಿದ್ದರೆ, ಶ್ರೀಕ್ಷೇತ್ರ ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯಲ್ಲಿರುವ ವ್ಯಕ್ತಿಗಳ ತನಿಖೆ ಮಾಡಿ ಬಯಲಿಗೆಳೆಯಬೇಕು ಎಂದು ಒತ್ತಾಯಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ವಿಷಯದಲ್ಲಿ ಜನರ ತಾಳ್ಮೆ, ಸಹನೆಯನ್ನು ಪರೀಕ್ಷೆ ಮಾಡುತ್ತಿದ್ದೀರಾ? ಸರಕಾರ ಬದುಕಿದೆಯೇ ಇಲ್ಲವೇ ಎಂದು ಗೊತ್ತಾಗಬೇಕಲ್ಲವೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಸರಕಾರ ಬದುಕಿದ್ದರೆ ತೋರಿಸಲಿ. ಯಾರಾದರೂ ತನಿಖೆಗೆ ಅಡಚಣೆ ಮಾಡಿದ್ದಾರಾ? ತನಿಖೆಯನ್ನು ಎಲ್ಲರೂ ಸ್ವಾಗತಿಸಿದ್ದಾರೆ. ಅನಾಮಿಕ ವ್ಯಕ್ತಿಯ ಕುರಿತಂತೆಯೂ ತನಿಖೆ ಆಗಬೇಕು ಎಂದು ಕೋರಿದರು. ಕೆಜಿ ಹಳ್ಳಿ, ಡಿಜೆ ಹಳ್ಳಿ ಘಟನೆ ಸಂದರ್ಭದಲ್ಲಿ ನೀವು ಅದನ್ನು ಸಮರ್ಥನೆ ಮಾಡಿದ್ದೀರಿ. ಪೊಲೀಸ್ ಠಾಣೆಗೆ ಬೆಂಕಿ, ಪೊಲೀಸರ ಮೇಲೆ ಹಲ್ಲೆ, ಪೊಲೀಸ್ ಜೀಪಿಗೆ ಬೆಂಕಿ, ಶಾಸಕರ ಮನೆಗೆ ಬೆಂಕಿ ಇಟ್ಟದ್ದನ್ನು ಸಮರ್ಥಿಸಿದ್ದೀರಿ ತಾನೇ ಎಂದು ಅವರು ಪ್ರಶ್ನಿಸಿದರು.
ಧರ್ಮಸ್ಥಳದಲ್ಲಿ ಇಂಥ ಘಟನೆ ನಡೆದಿದೆಯೇ? ಯೂ ಟ್ಯೂಬರ್ಗಳು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು. ಸಾಮಾಜಿಕ ಜಾಲತಾಣದಲ್ಲಿ ಇವರೇ ತನಿಖೆ ನಡೆಸಿ ಇವರೇ ತೀರ್ಪು ಕೊಡುತ್ತಾರೆ. ಇದರಿಂದ ಹಿಂದೂ ಸಮಾಜ- ಶ್ರೀ ಮಂಜುನಾಥೇಶ್ವರನನ್ನು ನಂಬುವ ಭಕ್ತರಿಗೆ ಬಹಳಷ್ಟು ನೋವಾಗಿದೆ ಎಂದು ತಿಳಿಸಿದರು. ಧರ್ಮಾಧಿಕಾರಿಗಳ ಮೇಲೂ ಆಪಾದನೆ ಮಾಡಿದ್ದನ್ನು ಆಕ್ಷೇಪಿಸಿದರು.
ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಯಾರೋ ಒಬ್ಬ ವ್ಯಕ್ತಿ ಒಂದು ಪೋಸ್ಟ್ ಹಾಕಿದ್ದಕ್ಕೆ ಪೊಲೀಸ್ ಠಾಣೆಗೇ ಬೆಂಕಿ ಹಾಕಿದ್ದರು. ಶಾಸಕನ ಮನೆಯನ್ನೇ ಸುಟ್ಟು ಹಾಕಿದ್ದರು. ಪೊಲೀಸರ ವಾಹನ ಸುಟ್ಟು, ಪೊಲೀಸರ ಮೇಲೆ ಹಲ್ಲೆ ಮಾಡಲಾಗಿತ್ತು. ಆಗ ಇದೇ ಕಾಂಗ್ರೆಸ್ ಪಕ್ಷ ಅದನ್ನು ಸಮರ್ಥಿಸಿಕೊಂಡಿತ್ತು ಎಂದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದರೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸುತ್ತಾರೆ. ಧರ್ಮಸ್ಥಳ, ಧರ್ಮಾಧಿಕಾರಿಗಳ ವಿಷಯದಲ್ಲಿ ಬೇರೆ ಬೇರೆ ಪೋಸ್ಟ್ ಹಾಕಿದಾಗ ಇದೇ ಗೃಹ ಇಲಾಖೆ ಯಾಕೆ ಕಾನೂನು ಕ್ರಮ, ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications