ಕನ್ನಡ ನಟರಿಗೆ ನಟ್ಟು ಬೋಲ್ಟು ಟೈಟ್, ಕಮಲ್ ಹಾಸನ್ ವಿಚಾರಕ್ಕೆ ಏಕೆ ಲಿಮಿಟ್?
ಕಮಲ್ ಹಾಸನ್ ಕನ್ನಡ ವಿವಾದದ ಕುರಿತಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು, ಈ ವಿಚಾರದಲ್ಲಿ ನಮ್ಮವರೂ ಲಿಮಿಟ್ನಲ್ಲಿರಬೇಕು ಎಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ವಾಗ್ದಾಳಿ ನಡೆಸಿದ್ದು, ಈ ಹಿಂದೆ ಕನ್ನಡ ಚಿತ್ರರಂಗದರ ನಟ್ಟು ಬೋಲ್ಟು ಟೈಟ್ ಮಾಡುವ ಹೇಳಿಕೆಯನ್ನು ಉಲ್ಲೇಖಿಸಿ ಟಾಂಗ್ ನೀಡಿದ್ದಾರೆ. ಕಮಲ್ ಹಾಸನ್ ವಿಚಾರವಾಗಿ ಜಾಣಮೌನ ವಹಿಸುತ್ತಿರುವುದು ಏಕೆ? ಎಂದು ಡಿಕೆ ಶಿವಕುಮಾರ್ ಅವರನ್ನ ಅಶೋಕ್ ಪ್ರಶ್ನಿಸಿದ್ದಾರೆ.
ಕನ್ನಡ ಚಿತ್ರರಂಗದ ಕಲಾವಿದರ ನಟ್ಟು ಬೋಲ್ಟು ಟೈಟ್ ಮಾಡುವ ಧಮ್ಕಿ ಹಾಕಿದ್ದಾಯ್ತು, ಈಗ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತಂದ ತಮಿಳು ನಟ ಕಮಲ್ ಹಾಸನ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಕನ್ನಡಿಗರು ಲಿಮಿಟ್ನಲ್ಲಿರಬೇಕು ಎಂದು ಕರ್ನಾಟಕದ ಜನತೆಗೆ ನೀತಿ ಪಾಠ ಹೇಳುತ್ತಿದ್ದಾರೆ ಸನ್ಮಾನ್ಯ ಡಿಸಿಎಂ ಡಿಕೆ ಶಿವಕುಮಾರ್ ಸಾಹೇಬರು ಎಂದು ಕಿಡಿಕಾರಿದ್ದಾರೆ.

ಸ್ವಾಮಿ ಡಿ.ಕೆ.ಶಿವಕುಮಾರ್ ಅವರೇ, ಕಮಲ್ ಹಾಸನ್ ಅಂದರೆ ಅಷ್ಟೊಂದು ಸಾಫ್ಟ್ ಕಾರ್ನರ್ ಯಾಕೆ ಸ್ವಾಮಿ? ಕಮಲ್ ಹಾಸನ್ ಅವರು ನಿಮ್ಮ ನಾಯಕ ರಾಹುಲ್ ಗಾಂಧಿ ಅವರ ಪರಮಮಿತ್ರ ಎಂದೋ? ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರ ಜೊತೆ ಹೆಜ್ಜೆ ಹಾಕಿದ ಮಾತ್ರಕ್ಕೆ ಕಮಲ್ ಹಾಸನ್ ಅವರು ಏನು ಹೇಳಿದರೂ ಕನ್ನಡಿಗರು ಸುಮ್ಮನಿರಬೇಕಾ? ನಿಮ್ಮಂತಹ ನಾಡದ್ರೋಹಿ ನಾಯಕರು ಈ ನಾಡಿನ ಮುಖ್ಯಮಂತ್ರಿಯಾಗಲು ಹೊರಟಿರುವುದು ಕರ್ನಾಟಕದ ದುರಂತ ಎಂದಿದ್ದಾರೆ.
ನಮ್ಮವರೂ ಲಿಮಿಟ್ನಲ್ಲಿರಬೇಕು: ಡಿಕೆಶಿ
ಕಮಲ್ ಹಾಸನ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ಕನ್ನಡಪರ ಸಂಘಟನೆಗಳು ಜಾಗರೂಕತೆಯಿಂದ ಇರಬೇಕು. ಕಮಲ್ ಹಾಸನ್ ಪರ ನಾವು ಸಾಫ್ಟ್ ಕಾರ್ನರ್ ತೋರುತ್ತಿಲ್ಲ. ಈ ವಿಚಾರ ಈಗ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಅಲ್ಲಿ ಏನು ತೀರ್ಪು ಬರುತ್ತೆದೆಯೋ ಅದನ್ನ ನಾವು ಪಾಲಿಸಬೇಕು ಎಂದು ಹೇಳಿದ್ದಾರೆ.
ಕಮಲ್ ಹಾಸನ್ ಅವರು ಕೂಡ ವೈಯಕ್ತಿಕವಾಗಿ ಬಹಳ ಹಠದಲ್ಲಿದ್ದಾರೆ. ಇಲ್ಲಿ ನಮ್ಮವರು ಕೂಡ ಸ್ವಲ್ಪ ಲಿಮಿಟ್ನಲ್ಲಿರಬೇಕು. ನಾವು ರಾಜ್ಯದ ಹಿತ ಕಾಪಾಡಿಕೊಳ್ಳಬೇಕು. ಈಗಾಗಲೇ ಈ ವಿಚಾರದಲ್ಲಿ ಪ್ರತಿಭಟನೆಯೂ ನಡೆದಿದೆ. ಈ ವಿವಾದ ಈಗ ಹೈಕೋರ್ಟ್ನಲ್ಲಿದ್ದು ಅಲ್ಲಿ ಏನು ಆದೇಶ ಬರುತ್ತೋ ಅದನ್ನ ಪಾಲಿಸಬೇಕು. ಭಾಷೆ, ಜಾತಿ, ರಾಜ್ಯದ ನಡುವೆ ಜಗಳ ಮಾಡಿಸೋಕೆ ಆಗುತ್ತಾ? ಬಿಜೆಪಿಯವರು ಕತ್ತರಿಯಂತೆ, ನಾವು ಅದನ್ನು ಪೋಣಿಸುವ ಸೂಜಿ ಎಂದು ಬೆನ್ನುತಟ್ಟಿಕೊಂಡಿದ್ದಾರೆ.
ಬಿಜೆಪಿಯವರು ಜನರ ಮಧ್ಯೆ ಬಿರುಕು ತರುತ್ತಾರೆ. ಆದರೆ ಕಾಂಗ್ರೆಸ್ನವರು ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವವರು. ನಾವು ಕಮಲ್ ಹಾಸನ್ ವಿಚಾರದಲ್ಲಿ ಯಾವುದೇ ಮೃಧು ಧೋರಣೆ ತಾಳುತ್ತಿಲ್ಲ. ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಕಮಲ್ ಹಾಸನ್ ವಿಚಾರದಲ್ಲಿ ತಪ್ಪು ಯಾರದ್ದು? ಸರಿ ಯಾರದ್ದು? ಎನ್ನುವುದನ್ನ ಚರ್ಚೆ ಮಾಡಿದ್ದೇವೆ. ನಾವೆಲ್ಲರೂ ದ್ರಾವಿಡ ಭಾಗಕ್ಕೆ ಸೇರಿದವರು, ಇಲ್ಲಿ ಮೇಲು, ಕೀಳು ಎನ್ನುವುದಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications