ಜನೌಷಧಿ ಕೇಂದ್ರಗಳನ್ನು ಮುಚ್ಚಿಸುತ್ತಿರುವುದು ಇದೇ ಕಾರಣಕ್ಕೆ: ಅಶೋಕ್ ಗಂಭೀರ ಆರೋಪ
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧಿ ಕೇಂದ್ರಗಳನ್ನ ತೆರೆಯಲು ಸಲ್ಲಿಕೆಯಾಗಿದ್ದ 31 ಪ್ರಸ್ತಾವನೆಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ತಿರಸ್ಕರಿಸಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪ ಮಾಡಿದ್ದಾರೆ. ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಪ್ರಧಾನಮಂತ್ರಿ ಜನಔಷಧಿ ಕೇಂದ್ರಗಳನ್ನ ಮುಚ್ಚುವಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಹೊರಡಿಸಿರುವ ಆದೇಶ ಅತ್ಯಂತ ಜನವಿರೋಧಿ ನಡೆಯಾಗಿದ್ದು, ಇದು ರಾಜಕೀಯ ಪ್ರೇರಿತ ನಿರ್ಧಾರ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಖಂಡಿಸಿದ್ದಾರೆ.
ಬಡವರು ಹಾಗೂ ಜನಸಾಮಾನ್ಯರಿಗೆ ಅಗ್ಗದ ಬೆಲೆಯಲ್ಲಿ ಉತ್ಕೃಷ್ಟ ಗುಣಮಟ್ಟದ ಒದಗಿಸುತ್ತಿರುವ ಜನೌಷಧಿ ಕೇಂದ್ರಗಳಿಗೆ ಅವಕಾಶ ನೀಡದಿರಲು ಕಾರಣವೇನು? ಸರ್ಕಾರಿ ಆಸ್ಪತ್ರೆಗಳ ವೈದ್ಯರು ಜೆನೆರಿಕ್ ಔಷಧಿ ಚೀಟಿ ಬರೆಯುವುದಕ್ಕೂ ಜನಔಷಧಿ ಕೇಂದ್ರಗಳಿಗೆ ಅವಕಾಶ ನೀಡದಿರುವುದಕ್ಕೂ ಸಂಬಂಧವೇನು? ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇಂದಿರಾ ಕ್ಯಾಂಟೀನ್ಗಳಲ್ಲಿ ಕಡಿಮೆ ದರದಲ್ಲಿ ಆಹಾರ ಸಿಗುತ್ತದೆ ಎನ್ನುವ ಕಾರಣಕ್ಕೆ ಬೇರೆ ಹೋಟೆಲ್ಗಳು ತೆರೆಯಲು ಅವಕಾಶ ನೀಡುವುದಿಲ್ಲ ಎನ್ನುವುದಕ್ಕೆ ಸಾಧ್ಯವೇ? ಜನರು ತಮಗೆ ಸಕಾಲಕ್ಕೆ, ಕೈಗೆಟಕುವ ಬೆಲೆಗೆ, ಉತ್ತಮ ಗುಣಮಟ್ಟದ ಔಷಧಿ ಎಲ್ಲಿ ಸಿಗುತ್ತದೋ ಅಲ್ಲಿ ಖರೀದಿ ಮಾಡುತ್ತಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಸಿಕ್ಕರೆ ಅದನ್ನೇ ಪಡೆಯುತ್ತಾರೆ. ಅದಕ್ಕಾಗಿ ಜನಔಷಧಿ ಕೇಂದ್ರಗಳನ್ನ ಮುಚ್ಚುವ ಅವಶ್ಯಕತೆ ಏನಿದೆ? ಎಂದು ಪ್ರಶ್ನಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರೇ, ರಾಜ್ಯ ಸರ್ಕಾರ ಕಾರ್ಪೊರೇಟ್ ಔಷಧ ಕಂಪನಿಗಳು, ಖಾಸಗಿ ಮೆಡಿಕಲ್ ಶಾಪ್ಗಳ ಲಾಬಿಗೆ ಮಣಿದು ಜನೌಷಧಿ ಕೇಂದ್ರಗಳಿಗೆ ಅವಕಾಶ ನೀಡುತ್ತಿಲ್ಲವೋ ಅಥವಾ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತಿದೆ ಎಂಬ ಅಸೂಯೆಯೋ? ಎಂದು ಟೀಕಿಸಿದ್ದಾರೆ.
ಈಗ ಒಂದು ವೇಳೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಬರೆದುಕೊಟ್ಟ ಚೀಟಿಯಲ್ಲಿರುವ ಔಷಧಿ ಸ್ಟಾಕ್ ಇಲ್ಲದಿದ್ದರೆ, ಪಾಪ ಬಡವರು ಏನು ಮಾಡಬೇಕು? ಅದರಿಂದ ಏನಾದರೂ ಅನಾಹುತ ಆದರೆ ಅದಕ್ಕೆ ಯಾರು ಹೊಣೆ? ಈ ನಾಲಾಯಕ್ ಕಾಂಗ್ರೆಸ್ ಸರ್ಕಾರಕ್ಕೆ ಜನರಿಗೆ ಒಳ್ಳೆಯದಾಗುವ ಕೆಲಸ ಮಾಡುವ ಮನಸ್ಸಿಲ್ಲ. ಇನ್ನೊಬ್ಬರು ಮಾಡಿದರೆ ಅದನ್ನೂ ಸಹಿಸಲ್ಲ. ಈ ಪಾಪಿ ಕಾಂಗ್ರೆಸ್ ಸರ್ಕಾರಕ್ಕೆ ಬಡವರ ಶಾಪ ತಟ್ಟದೇ ಇರಲ್ಲ ಎಂದು ಎಚ್ಚರಿಸಿದ್ದಾರೆ.
ಆರೋಗ್ಯ ಸಚಿವ ಹೇಳಿದ್ದೇನು?
ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ರೋಗಿಗಳಿಗೆ ಖಾಸಗಿ ಮೆಡಿಕಲ್ ಶಾಪ್ಗಳಿಂದ ಔಷಧಿ ಖರೀದಿಸುವಂತೆ ಚೀಟಿ ಬರೆದುಕೊಡುವ ಸಂಸ್ಕೃತಿ ಕೈಬಿಡಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿಯೇ ರೋಗಿಗಳಿಗೆ ಉಚಿತವಾಗಿ ಔಷಧಿಗಳು ಸಮರ್ಪಕವಾಗಿ ದೊರೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳ ಔಷಧಿ ಕೇಂದ್ರಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧಿ ಕೇಂದ್ರಗಳನ್ನ ತೆರೆಯಲು ಸಲ್ಲಿಕೆಯಾಗಿದ್ದ 31 ಪ್ರಸ್ತಾವನೆಗಳನ್ನು ತಿರಸ್ಕರಿಸಲಾಗಿದೆ. ಜೆನರಿಕ್ ಔಷಧಿಗಳ ಖರೀದಿಗೆ ಬಿಪಿಪಿಐನೊಂದಿಗೆ ಕೆಎಸ್ಎಂಎಸ್ಎಲ್ನವರು ವಿಶೇಷ ದರಗಳನ್ನು ರೂಪಿಸಲು ಸೂಚಿಸಲಾಗಿದ್ದು, ಪರ್ಯಾಯವಾಗಿ ಆಸ್ಪತ್ರೆಗಳು ಬಿಪಿಪಿಐನಿಂದ ಔಷಧಿಗಳನ್ನು ಖರೀದಿಸಿ ರೋಗಿಗಳಿಗೆ ಉಚಿತವಾಗಿ ವಿತರಿಸಬಹುದು. ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳಲ್ಲಿರುವ ಔಷಧಿ ಕೇಂದ್ರಗಳಲ್ಲಿಯೇ ಔಷಧಿಗಳನ್ನು ಉಚಿತವಾಗಿ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral












Click it and Unblock the Notifications