ರಾಜೀನಾಮೆ ವಾಪಸ್ ಪಡೆಯಲಿದ್ದಾರೆ ಯಡಿಯೂರಪ್ಪ ಆಪ್ತ!
ಬೆಂಗಳೂರು, ಆಗಸ್ಟ್ 20 : ಬಿಜೆಪಿ ನಾಯಕ, ಮಾಜಿ ವಿಧಾನಪರಿಷತ್ ಸದಸ್ಯ ಬಿ.ಜೆ.ಪುಟ್ಟಸ್ವಾಮಿ ಅವರು ರಾಜೀನಾಮೆ ವಾಪಸ್ ಪಡೆಯಲಿದ್ದಾರೆ. ಯಡಿಯೂರಪ್ಪ ವಿರುದ್ಧ ಅಸಮಾಧಾನಗೊಂಡಿದ್ದ ಅವರು ಜೂನ್ನಲ್ಲಿ ರಾಜೀನಾಮೆ ನೀಡಿದ್ದರು.
ಬಿ.ಜೆ.ಪುಟ್ಟಸ್ವಾಮಿ ಅವರು ರಾಜೀನಾಮೆ ವಾಪಸ್ ಪಡೆಯುವುದಾಗಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದ್ದಾರೆ. ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಅವರು ರಾಜೀನಾಮೆ ಕೊಟ್ಟಿದ್ದರು.

ವಿಧಾನಪರಿಷತ್ ಚುನಾವಣೆಯಲ್ಲಿ ಯಡಿಯೂರಪ್ಪ ಅವರು ತಮ್ಮನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿ ಬಿ.ಜೆ.ಪುಟ್ಟಸ್ವಾಮಿ ರಾಜೀನಾಮೆ ನೀಡಿದ್ದರು. ಬಿ.ಎಸ್.ಯಡಿಯೂರಪ್ಪ ಅವರಿಗೆ 2 ಪುಟಗಳ ಪತ್ರವನ್ನು ಬರೆದಿದ್ದರು.
ಬಿಜೆಪಿ ಬಿಟ್ಟಿದ್ದು ಏಕೆ? : ವಿಧಾನಸಭೆಯಿಂದ ಪರಿಷತ್ತಿಗೆ 11 ಸದಸ್ಯರನ್ನು ಆಯ್ಕೆ ಮಾಡಲು ಜೂನ್ 11ರಂದು ಚುನಾವಣೆ ನಡೆದಿತ್ತು. 5 ಸದಸ್ಯರನ್ನು ಬಿಜೆಪಿ ಆಯ್ಕೆ ಮಾಡಿ ಕಳಿಸಬಹುದಿತ್ತು.
ರಘುನಾಥ ಮಲ್ಕಾಪುರೆ, ಎನ್.ರವಿಕುಮಾರ್, ತೇಜಸ್ವಿನಿ ಗೌಡ, ಕೆ.ಪಿ.ನಂಜುಂಡಿ, ಎಸ್.ರುದ್ರೇಗೌಡ ಅವರನ್ನು ಪರಿಷತ್ಗೆ ಆಯ್ಕೆ ಮಾಡಿ ಕಳಸಲಾಗಿತ್ತು. ಪರಿಷತ್ ಸ್ಥಾನದ ಆಕಾಂಕ್ಷಿಯಾಗಿದ್ದ ಬಿ.ಜೆ.ಪುಟ್ಟಸ್ವಾಮಿ ಅವರು ತಮ್ಮನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಈಗ ಅವರು ರಾಜೀನಾಮೆ ವಾಪಸ್ ಪಡೆಯುವುದಾಗಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ರಾಜೀನಾಮೆ ವಾಪಸ್ ಪಡೆಯಲಿದ್ದಾರೆಯೇ? ಎಂದು ಕಾದು ನೋಡಬೇಕು.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications