ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಮ್ಮ ಪಕ್ಷ ಶವಾಗಾರ ಅಲ್ಲ, ಸಿದ್ದರಾಮಯ್ಯ ಅವರ ಹೆಣ ಬಿಜೆಪಿಗೆ ಬೇಕಿಲ್ಲ: ಛಲವಾದಿ ನಾರಾಯಣಸ್ವಾಮಿ

ಸಿದ್ದರಾಮಯ್ಯನವರ ಶವ ಇಲ್ಲಿಗ್ಯಾಕೆ ಬರ್ತದೆ?. ನಮ್ಮ ಪಕ್ಷ ಶವಾಗಾರ ಅಲ್ಲ. ಅವರಿಗೆ ಬಹುಶಃ ಬುದ್ಧಿಭ್ರಮಣೆ ಆಗಿದೆ ಎಂದು ಸಿದ್ದರಾಮಯ್ಯ ವಿರುದ್ದ ಛಲವಾದಿ ನಾರಾಯಣ ಸ್ವಾಮಿ ಕಿಡಿಕಾರಿದರು.

|
Google Oneindia Kannada News

ಬೆಂಗಳೂರು, ಜನವರಿ 30: ಸಿದ್ದರಾಮಯ್ಯನವರ ಶವ ಇಲ್ಲಿಗ್ಯಾಕೆ ಬರ್ತದೆ. ನಮ್ಮ ಪಕ್ಷ ಶವಾಗಾರ ಅಲ್ಲ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ಶವ ಹೋಗಬೇಕಿರುವುದು ಬೇರೆ ಜಾಗಕ್ಕೆ. ಸಿದ್ದರಾಮಯ್ಯನವರ ಶವ ಇಲ್ಲಿಗ್ಯಾಕೆ ಬರ್ತದೆ?. ನಮ್ಮ ಪಕ್ಷ ಶವಾಗಾರ ಅಲ್ಲ. ಅವರಿಗೆ ಬಹುಶಃ ಬುದ್ಧಿಭ್ರಮಣೆ ಆಗಿದೆ. ಅವರು ಶವದ ಬಗ್ಗೆ ಯಾಕೆ ಮಾತನಾಡುತ್ತಾರೋ ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಅವರಿಗೆ ಟೀಕಿಸಿದರು.

ಅವನೊಬ್ಬ ಬಫೂನ್, ಅವನು ವಿಧೂಶಕ ಎಂದು ಕಟೀಲ್ ವಿರುದ್ಧ ಸಿದ್ದರಾಮಯ್ಯ ಕಿಡಿಅವನೊಬ್ಬ ಬಫೂನ್, ಅವನು ವಿಧೂಶಕ ಎಂದು ಕಟೀಲ್ ವಿರುದ್ಧ ಸಿದ್ದರಾಮಯ್ಯ ಕಿಡಿ

ಕೋಲಾರದಲ್ಲೂ ಅವರ ರಾಜಕೀಯ ಅಂತ್ಯಸಂಸ್ಕಾರ ಆರಂಭವಾಗಿದೆ. ಅದರಿಂದಾಗಿಯೇ ಅವರಿಗೆ ಶವದ ನೆನಪು ಬಂದಿರಬೇಕು. ಇದು ಕೊನೆಯ ಚುನಾವಣೆ ಎನ್ನುತ್ತಿದ್ದರು. ಆದರೆ, ಇದು ಸೋಲಿನ ಚುನಾವಣೆ ಆಗಿರಲಿದೆ ಎಂಬ ಅನಿಸಿಕೆ ನನ್ನದು ಎಂದು ಹೇಳಿದರು.

BJP Leader Chalavadi Narayanaswamy Slams Siddaramaiah

ಸೋಲಿನ ಭಯದಿಂದ ವಿಚಲಿತರಾಗಿ ಬಿಜೆಪಿ ಮತ್ತು ಬಿಜೆಪಿ ಮುಖಂಡರ ಬಗ್ಗೆ ಕೆಟ್ಟಕೆಟ್ಟದಾಗಿ ಬಿಂಬಿಸಿ ಮಾತನಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಅವರಲ್ಲಿ ಮನವಿ ಮಾಡುತ್ತೇನೆ. ನೀವೊಬ್ಬ ಮಾಜಿ ಮುಖ್ಯಮಂತ್ರಿಗಳು. ನಿಮ್ಮ ಬಗ್ಗೆ ನಮಗೆಲ್ಲರಿಗೂ ಗೌರವ ಇದೆ. ಆ ಗೌರವ ಉಳಿಸಿಕೊಳ್ಳುವ ಕೆಲಸ ಮಾಡಬೇಕು. ನಿಮ್ಮನ್ನು ಕೆಟ್ಟದಾಗಿ ತೋರಿಸಲು ನಮಗೆ ಇಚ್ಛೆ ಇಲ್ಲ. ಆದರೆ, ಆ ಕೆಟ್ಟ ಸಂಸ್ಕೃತಿಯನ್ನು ನೀವ್ಯಾಕೆ ಮೇಲೆ ಹಾಕಿಕೊಳ್ಳುತ್ತೀರಿ ಎಂದು ಕೇಳಿದರು.

ಬಿಜೆಪಿ ನಿಮ್ಮಂಥವರಿಗಾಗಿ ಇರುವ ಪಕ್ಷ ಅಲ್ಲ. ನೀವು ಬಂದರೂ ನಿಮ್ಮನ್ನು ಈ ಪಕ್ಷದಲ್ಲಿ ಬಹುಶಃ ಸೇರಿಸಿಕೊಳ್ಳುವುದಿಲ್ಲ. ಮೋದಿಜಿ ಅವರು ಮಾಡುತ್ತಿರುವ ಕಾರ್ಯ, ಈ ದೇಶ ರಕ್ಷಣೆ, ಸಮಾಜದ ಉತ್ತಮ ವ್ಯವಸ್ಥೆ ಮಾಡುತ್ತಿರುವುದನ್ನು ನೋಡಿ ನಿಮ್ಮ ಮಕ್ಕಳು, ನಿಮ್ಮ ಮೊಮ್ಮಕ್ಕಳು ನಿಮ್ಮನ್ನೇ ತೊರೆದು ನಮ್ಮ ಪಕ್ಷ ಸೇರಲಿದ್ದಾರೆ ಎಂಬುದಾಗಿ ನಮ್ಮ ಅಧ್ಯಕ್ಷರು ಈಗಷ್ಟೇ ಹೇಳಿದ್ದಾರೆ. ಇದನ್ನು ಅರ್ಥ ಮಾಡಿಕೊಳ್ಳಿ ಎಂದು ಆಗ್ರಹಿಸಿದರು.

ಇವತ್ತು ಅನೇಕರು ನಮ್ಮ ಪಕ್ಷಕ್ಕೆ ಹೊಸದಾಗಿ ಸೇರಿದ್ದಾರೆ. ನನ್ನದೇ ಸ್ನೇಹಿತ- ಮೈಸೂರಿನ ಮಾಜಿ ಶಾಸಕ ವಾಸು ಅವರ ಮಗನೂ ನಮ್ಮ ಪಕ್ಷಕ್ಕೆ ಬಂದಿದ್ದಾರೆ. ನಾನು ನನ್ನ ತಂದೆಯವರ ಜೊತೆ ಕೆಲಸ ಮಾಡಿದ್ದರೂ ಕೂಡ ಆ ಪಕ್ಷದ ಜೊತೆಯಲ್ಲಿದ್ದರೂ ಕೂಡ, ನಾನು ಬಿಜೆಪಿ ಸಿದ್ಧಾಂತಗಳನ್ನು ಒಪ್ಪಿ, ಮೋದಿಯವರ ನಡತೆ ಮತ್ತು ಅವರ ಕಾರ್ಯವೈಖರಿ ಮೆಚ್ಚಿ ಬಿಜೆಪಿಗೆ ಬರುತ್ತಿದ್ದೇನೆ ಎಂದಿದ್ದಾರೆ. 'ಅಂದರೆ, ನಿಮ್ಮ ಮಕ್ಕಳು, ನಿಮ್ಮ ಮೊಮ್ಮಕ್ಕಳೂ ಕೂಡ ನಿಮ್ಮನ್ನೇ ತಿರಸ್ಕಾರ ಮಾಡಿ ನಮ್ಮ ಪಕ್ಷ ಸೇರುವ ಸ್ಥಿತಿ ಇವತ್ತು ದೇಶದಲ್ಲಿದೆ. ಆದ್ದರಿಂದ ನೀವೂ ಬೇಡ; ನಿಮ್ಮ ಹೆಣವೂ ಇಲ್ಲಿ ಬರುವುದು ಬೇಡ ಎಂದು ವ್ಯಂಗ್ಯವಾಡಿದರು.

English summary
MLC Chalavadi Narayanaswamy said that Our party is not a morgue
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X