ಪೆನ್ನಿನ ಮಸಿ ಮೂಡಬೇಕಾದಲ್ಲಿ ರಕ್ತದ ಕಲೆಗಳು ಬಿದ್ದಿವೆ: ಸಿ.ಟಿ. ರವಿ ಕಿಡಿ
ಬೆಂಗಳೂರು,ಫೆ.1: ಬೆಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಸೋಮವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟಿಸುತ್ತಿದ್ದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ (ABVP) ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದು ಖಂಡನೀಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳು ಎಂದರೆ ಈ ದೇಶದ ಶಕ್ತಿ. ಅದರಲ್ಲೂ ಎಬಿವಿಪಿ ಸಂಘಟನೆಯು ವಿದ್ಯಾರ್ಥಿಗಳಿಗೆ ಅನ್ಯಾಯವಾದಾಗ ಅವರಿಗೆ ಸೂಕ್ತ ಪ್ರಾತಿನಿಧ್ಯ ಕೊಡುವಲ್ಲಿ ತನ್ನ ಸಂಘಟನಾ ಶಕ್ತಿಯನ್ನು ನ್ಯಾಯಯುತವಾಗಿ ತೋರಿಸುತ್ತಿದೆ. ಬೆಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳ ಅಂಕಪಟ್ಟಿ, ಹಾಸ್ಟೆಲ್ ಸಮಸ್ಯೆ, ಪದವಿ ಪರೀಕ್ಷೆ, ಮೌಲ್ಯಮಾಪನ ಮತ್ತು ಫಲಿತಾಂಶ ನೀಡುವಲ್ಲಿ ವಿಶ್ವವಿದ್ಯಾನಿಲಯ ವಿಳಂಬ ಮಾಡಿದೆ. ವಿವಿಧ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ ಮಾಡುವ ವೇಳೆ ಪೊಲೀಸರು ಲಾಠಿ ಚಾರ್ಚ್ ಮಾಡಿದ್ದಾರೆ ಎಂಬ ಸುದ್ದಿ ತಿಳಿದು ನೋವಾಯಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಎಬಿವಿಪಿ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ವಿಶ್ವ ವಿದ್ಯಾನಿಲಯದ ಪಟ್ಟಭದ್ರ ಹಿತಾಸಕ್ತಿಗಳ ಗುಂಪು ಏಕಾಏಕಿ ಮುಗಿಬಿದ್ದಾಗ ಪೊಲೀಸರ ಸಂಯಮ ಕಳೆದುಕೊಂಡು ವರ್ತಿಸಿದ್ದಾರೆ. ಈ ದೌರ್ಜನ್ಯ ನೋವಿನ ಸಂಗತಿ. ಎಲ್ಲಿ ಪೆನ್ನಿನ ಮಸಿ ಮೂಡಬೇಕಿತ್ತೊ ಅಲ್ಲಿ ರಕ್ತದ ಕಲೆಗಳು ಬಿದ್ದಿವೆ. ಇದು ನಮ್ಮ ಸಂಸ್ಕೃತಿ ಅಲ್ಲ. ವಿದ್ಯಾರ್ಥಿಗಳು ತಮ್ಮ ನ್ಯಾಯಯುತವಾದ ಬೇಡಿಕೆಗಳನ್ನು ಕೇಳುವುದು ಅವರ ಹಕ್ಕು. ಅವರ ಬೇಡಿಕೆಗಳನ್ನು ಕೇಳುವುದು ವಿವಿಯ ಆದ್ಯ ಕರ್ತವ್ಯ. ವಿಶ್ವವಿದ್ಯಾನಿಲಯದ ಆಡಳಿತ ವ್ಯವಸ್ಥೆ ಅದಕ್ಕೆ ಸ್ಪಂದಿಸುವುದು ಅದರ ಕಾರ್ಯ. ಪ್ರತಿಭಟನೆ ಮಾಡಲು ವಿದ್ಯಾರ್ಥಿಗಳು ಕಾನೂನು ಪ್ರಕಾರವೇ ಪೊಲೀಸ್ ಇಲಾಖೆಯಿಂದ ಒಪ್ಪಿಗೆ ಪಡೆದಿದ್ದರೂ ಪ್ರತಿಭಟನಾ ನಿರತ ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳ ಮೇಲೆ ಅಮಾನವೀಯವಾಗಿ ರಕ್ತ ಬರುವಂತೆ ಹಲ್ಲೆ ಮಾಡಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿವಿಯ ಆವರಣದಲ್ಲಿದ್ದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಷಡ್ಯಂತ್ರ ಇದಕ್ಕೆಲ್ಲಾ ಕಾರಣ. ಆ ಪಟ್ಟಭದ್ರ ಹಿತಾಸಕ್ತಿಗಳ ಕುಮ್ಮಕ್ಕಿನಿಂದ ಎಬಿವಿಪಿ ವಿದ್ಯಾರ್ಥಿ ಸಂಘಟನೆ ಮೇಲೆ ಪೊಲೀಸರು ದೌರ್ಜನ್ಯ ಮಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ವಿದ್ಯಾರ್ಥಿಗಳ ಮೇಲೆ ಅಪ್ರಚೋದನೀಯ ಲಾಠಿ ಪ್ರಹಾರ ಮಾಡಿದ ಪೊಲೀಸರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮಾನ್ಯ ಗೃಹ ಸಚಿವರು ಈ ಘಟನೆ ಬಗ್ಗೆ ಕೂಲಂಕಷ ತನಿಖೆಗೆ ಒಳಪಡಿಸಬೇಕು. ಮತ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಮಾನ್ಯ ಉನ್ನತ ಶಿಕ್ಷಣ ಸಚಿವರು ವಿದ್ಯಾರ್ಥಿಗಳು ಮಂಡಿಸಿದ ನ್ಯಾಯಯುತ ಬೇಡಿಕೆಗಳನ್ನು ಸ್ಪಂದಿಸುವ ಕಾರ್ಯಕ್ಕೆ ಮುಂದಾಗಬೇಕು. ಇಲ್ಲವಾದರೆ ವಿಶ್ವವಿದ್ಯಾನಿಲಯದ ಘನತೆ ಗೌರವಗಳು ಮಣ್ಣು ಪಾಲಾಗುತ್ತವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications