ನಾನು ತಾಲಿಬಾಲಿನವನಲ್ಲ; ಬಾಂಬ್ ಹಾಕಿದವನಲ್ಲ: ಸಿ ಟಿ ರವಿ ಹೇಳಿದ್ದೇನು?
ಕೋಲಾರ, ಅಕ್ಟೋಬರ್ 03: ಕೋಲಾರದಲ್ಲಿ ಪ್ರತಿಭಟನೆಗೆ ಬರಬಾದರು ಎಂದು ಹೇಳುತ್ತಾರೆ. ಇದೇನು ಪಾಕಿಸ್ತಾನದಲ್ಲಿದೆಯೇ ಎಂದು ಕೇಳಿದರು. ನಾನು ತಾಲಿಬಾಲಿನವನಲ್ಲ, ಬಾಂಬ್ ಹಾಕಿದವನಲ್ಲ. ಕೋಲಾರದ ಜನರು ಉಂಡ ಮನೆಗೆ ಎರಡು ಬಗೆದವರ ಬಗ್ಗೆ ಎಚ್ಚರ ವಹಿಸಬೇಕು ಎಂದು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
ಕೋಲಾರದಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದ ಅವರು, ಶ್ರೀನಿವಾಸಪುರದಲ್ಲಿ ಕಳೆದ ಹತ್ತಾರು ವರ್ಷಗಳಿಂದ ವ್ಯವಸಾಯ ಮಾಡುವ ಅನ್ನದಾತರ ಮೇಲೆ ದೌರ್ಜನ್ಯ ನಡೆದಿದೆ. ಈ ಸರಕಾರ ಭೂಗಳ್ಳರ ಸರಕಾರ. ಈ ಸರಕಾರ ರೈತವಿರೋಧಿ ಮಾತ್ರವಲ್ಲ, ಭೂಗಳ್ಳರ ಸರಕಾರ ಎಂದು ಹೇಳಿದರು.

ಈ ಸರಕಾರಕ್ಕೆ ತಾಕತ್ತಿದ್ದರೆ ಅರ್ಕಾವತಿ ಹಗರಣಕ್ಕೆ ಸಂಬಂಧಿಸಿದ ಕೆಂಪಣ್ಣ ವರದಿಯನ್ನು ಮಂಡಿಸಬೇಕು. ನೈಸ್ ಹಗರಣದಲ್ಲಿ ರೈತರ ಭೂಮಿ ಕಿತ್ತುಕೊಂಡ ಸಂಬಂಧದ ಟಿ.ಬಿ.ಜಯಚಂದ್ರರ ಸದನ ಸಮಿತಿ ವರದಿಯನ್ನು ಮಂಡಿಸಬೇಕು ಎಂದು ಆಗ್ರಹಿಸಿದರು. ಆಗ ಬಹಳ ಜನ ಭೂಗಳ್ಳರು ಸರಕಾರ ಭಾಗ ಆಗಿರುವುದು ಗೊತ್ತಾಗುತ್ತದೆ.
ಈ ಸರಕಾರದ ಪಾಪದ ಕೊಡ ತುಂಬಿದೆ ಎಂದ ಅವರು, ಈ ಪಾಪಿಗಳ ಸರಕಾರ ಮುಂದುವರೆಯಬೇಕಾ ಎಂದು ಪ್ರಶ್ನಿಸಿದರು. ಮರ ಕಡಿದ ಪಾಪಿಯ ಪಾಪಕ್ಕೆ ಪ್ರಾಯಶ್ಚಿತ್ತ ಇಲ್ಲವೆನ್ನಲು ಇಲ್ಲಿ ಬಂದಿದ್ದೇವೆ ಎಂದು ತಿಳಿಸಿದರು. ಪಾಪಿಗಳು ನೀವು; ನಿಮ್ಮನ್ನು ನಂಬಿ ಅಧಿಕಾರ ಕೊಟ್ಟದ್ದಕ್ಕೆ ಒಕ್ಕಲೆಬ್ಬಿಸುವ ಕೆಲಸ ಮಾಡಿದ್ದೀರಿ ಎಂದು ಟೀಕಿಸಿದರು.
ಇನ್ನೂ ಈ ವೇಳೆ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಮಾತನಾಡಿ, ಜನರಿಂದ ಆಯ್ಕೆಯಾದ ನಮ್ಮ ಸಂಸದ ಮುನಿಸ್ವಾಮಿಯವರನ್ನು ವೇದಿಕೆಯಿಂದ ಕೆಳಕ್ಕಿಳಿಸಿದ್ದರ ಔಚಿತ್ಯ ಏನು? ಎಂದು ಮುಖ್ಯಮಂತ್ರಿಯನ್ನು ಪ್ರಶ್ನಿಸಿದರು. ಅವರನ್ನು ಅವಮಾನಿಸಿದ್ದು, ಸಂವಿಧಾನ ವಿರೋಧಿ ಕ್ರಮವಲ್ಲವೇ ಎಂದು ಕೇಳಿದರು. ಹಾಗಿದ್ದರೆ ನಿಮ್ಮ ಎಸ್ಪಿಯನ್ನು ಕೂಡಲೇ ಅಮಾನತು ಮಾಡಿ ಎಂದು ಒತ್ತಾಯಿಸಿದರು.
ದೇಶ ಮತ್ತು ವಿದೇಶಗಳಿಗೆ ಮಾವಿನಹಣ್ಣು ಕಳಿಸುವ ಶ್ರೀನಿವಾಸಪುರ ತಾಲ್ಲೂಕಿನ ರೈತರ ಜಮೀನಿಗೆ ಕಳ್ಳರಂತೆ 70-80 ಜೆಸಿಬಿ ಜೊತೆ ರಾತ್ರೋರಾತ್ರಿ ಬಂದ ಡಿಎಫ್ಒ ಏಡುಕೊಂಡ್ಲು, ಮಾವಿನ ಮರಗಳನ್ನು ಬೀಳಿಸಿದ್ದಾರೆ. ನೋಟಿಸ್ ಕೂಡ ನೀಡದೆ ಅಕ್ರಮವಾಗಿ ನಾಶ ಕಾರ್ಯ ನಡೆದಿದೆ. ಡಿಎಫ್ಒರನ್ನು ಕೂಡಲೇ ಅಮಾನತು ಮಾಡಿ ಎಂದು ಆಗ್ರಹಿಸಿದರು. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಒಂದಿಂಚು ಜಮೀನನ್ನೂ ಮುಟ್ಟಿಲ್ಲ ಎಂದು ಟೀಕಿಸಿದರು.
ಈ ವೇಳೆ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ.ಸದಾನಂದ ಗೌಡ ಅವರು ಮಾತನಾಡಿ, ಸರಕಾರ ಪ್ರಜಾತಂತ್ರ ವ್ಯವಸ್ಥೆಗೆ ಅವಮಾನ ಮಾಡಿದೆ. ಬಾಬಾಸಾಹೇಬ ಡಾ.ಅಂಬೇಡ್ಕರರ ಸಂವಿಧಾನಕ್ಕೆ ಅವಮಾನ ಮಾಡಿದ್ದು ಖಂಡನಾರ್ಹ. ಇದನ್ನು ಗಮನಿಸಿದ ಜನತೆ ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಎಂದು ಎಚ್ಚರಿಸಿದರು.
-
Bengaluru : ಬಾಲ ಭವನ ಬೇಸಿಗೆ ಶಿಬಿರ 2026 ; ಕೇವಲ 1000 ರೂ.ಗೆ 10 ಬಗೆಯ ಕೌಶಲ್ಯ ತರಬೇತಿ, ಇಂದೇ ಅರ್ಜಿ ಸಲ್ಲಿಸಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ












Click it and Unblock the Notifications