ಈ ಸರ್ಕಾರ ಬದುಕಿಲ್ಲ; ರೈತರ ಬೆನ್ನುಮೂಳೆ ಮುರಿಯಲು ಮುಂದಾದ ಸಿದ್ದರಾಮಯ್ಯರ ಸರಕಾರ: ಸಿ.ಟಿ.ರವಿ
ಬೆಂಗಳೂರು, ಆಗಸ್ಟ್ 09: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿಯ ಕೇಂದ್ರ ಸರಕಾರವು ರೈತರ, ಜನಹಿತವನ್ನು ಕಾಪಾಡುತ್ತಿದೆ. ರೈತರ ಬೆನ್ನುಮೂಳೆ ಮುರಿಯಲು ಸಿದ್ದರಾಮಯ್ಯರ ಸರಕಾರ ಮುಂದಾಗಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ವಿರುದ್ದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಬಿಜೆಪಿ ಬೆಂಗಳೂರು ಮಹಾನಗರ ರೈತ ಮೋರ್ಚಾ ವತಿಯಿಂದ ನಡೆದ ಪ್ರತಿಭಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯರವರ ನೇತೃತ್ವದ ಸರಕಾರದಲ್ಲಿ ನೀರಾವರಿಗೂ ಹಣ ಇಲ್ಲ. ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ, ಭೂಸಿರಿ ಸೇರಿ ಅನೇಕ ಯೋಜನೆಗಳು ರದ್ದಾಗಿವೆ. ರೈತರ ಬೆನ್ನುಮೂಳೆ ಮುರಿಯಲು ಸಿದ್ದರಾಮಯ್ಯರ ಸರಕಾರ ಮುಂದಾಗಿದೆ ಎಂದು ಕಿಡಿಕಾರದರು.

ಇದು ಜನವಿರೋಧಿ ಸರಕಾರ. ಮತಬ್ಯಾಂಕಿನ ರಾಜಕಾರಣಕ್ಕಾಗಿ ಸರಕಾರದ ಬೊಕ್ಕಸವನ್ನು ಲೂಟಿ ಮಾಡಿ ರೈತರ ಸರ್ವನಾಶ ಮಾಡಲು ಈ ಕಾಂಗ್ರೆಸ್ ಸರಕಾರ ಹೊರಟಿದೆ ಎಂದು ಆಕ್ಷೇಪಿಸಿದರು.
ಈ ಸರಕಾರದ ಭ್ರಷ್ಟಾಚಾರ, ಜನವಿರೋಧಿ ನೀತಿ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಸರಕಾರದ ಆಡಳಿತದ ಕೇವಲ 80 ದಿನಗಳಲ್ಲಿ ರಾಜ್ಯದ 50ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಪೂರಿತ ನೀರು ಸೇವಿಸಿ ಹಲವರು ಮೃತಪಟ್ಟಿದ್ದಾರೆ. ಈ ಸರಕಾರ ಬದುಕಿಲ್ಲ ಎಂದು ಕುಟುಕಿದರು.
ದಲಿತರು, ಬಡವರು, ರೈತರು ಸೇರಿದಂತೆ ಜನವಿರೋಧಿ ನೀತಿ ಈ ಸರಕಾರದ್ದು ಎಂದ ಅವರು, ಜನಪರ ಬಿಜೆಪಿ ಯೋಜನೆಗಳನ್ನು ಪುನರ್ ಸ್ಥಾಪಿಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿದರು. ಕೇಂದ್ರ ಸರಕಾರವು ಕನಿಷ್ಠ ಬೆಂಬಲ ಬೆಲೆ ಯೋಜನೆ ಜಾರಿಗೊಳಿಸಿದೆ. ನೀವು ಕೂಡ ಬೆಂಬಲ ಬೆಲೆ ಯೋಜನೆ ಜಾರಿ ಮಾಡಿ ಎಂದು ಆಗ್ರಹಿಸಿದರು.
ರಾಗಿ ಖರೀದಿ ಆರಂಭಿಸಿ. ಕಿಸಾನ್ ಸಮ್ಮಾನ್ ಯೋಜನೆಯಡಿ ಬಿಜೆಪಿ ಸರಕಾರ ಕೊಡುತ್ತಿದ್ದ 4 ಸಾವಿರವನ್ನು ಮುಂದುವರಿಸಿ. 6 ಸಾವಿರ ಕೊಟ್ಟು ನಿಮ್ಮ ಸಾಮಥ್ರ್ಯ ತೋರಿಸಿ ಎಂದು ಸವಾಲೆಸೆದರು. ನೀರಾವರಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿ. ಕಂಟ್ರಾಕ್ಟರ್ಗಳು ನಿಮ್ಮ ಮುಖಕ್ಕೆ ಮಂಗಳಾರತಿ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಈ ಸರಕಾರ ರೈತವಿರೋಧಿಯಾಗಿ ಕೆಲಸ ಮಾಡುತ್ತಿದೆ. ನಮ್ಮ ರೈತರಿಗೆ ನೀರು ಕೊಟ್ಟು ಹೆಚ್ಚುವರಿ ನೀರನ್ನು ತಮಿಳುನಾಡಿಗೆ ಕೊಡಿ ಎಂದು ಅವರು ಸಲಹೆ ನೀಡಿದರು. ರಾಜ್ಯದ ಹಿತ ಬಲಿ ಕೊಡದಿರಿ ಎಂದು ಸಿ ಟಿ ರವಿ ಒತ್ತಾಯಿಸಿದರು.
ಇನ್ನೂ ಈ ಪ್ರತಿಭಟನೆಯಲ್ಲಿ ರಾಜ್ಯದ ಮಾಜಿ ಸಚಿವ ಸಿ.ಎನ್. ಅಶ್ವತ್ಥನಾರಾಯಣ್, ಎಸ್ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕೇಶ್ ಗೌಡ, ಬೆಂಗಳೂರು ಉತ್ತರ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸತೀಶ್ ಕಡತನಮಲೆ, ಬೆಂಗಳೂರು ಕೇಂದ್ರ ರೈತ ಮೋರ್ಚಾ ಜಿಲ್ಲಾಧ್ಯಕ್ಷ ರುದ್ರಪ್ಪ, ಬೆಂಗಳೂರು ದಕ್ಷಿಣ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ್ ಮುತ್ತಸಂದ್ರ, ಮತ್ತು ಪಕ್ಷದ ಮುಖಂಡರು ಭಾಗವಹಿಸಿದ್ದರು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications