ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್‌ನತ್ತ ಬಿಜೆಪಿ ನಾಯಕರ ಒಲವು:ಹಿಂದಿರುವ ಕಾಣದ 'ಕೈ' ಯಾರದ್ದು?

|
Google Oneindia Kannada News

ಬೆಂಗಳೂರು, ನವೆಂಬರ್ 11: ಒಂದೆಡೆ ಆಪರೇಷನ್ ಕಮಲ ಮಾಡಿ ಒಂದಷ್ಟು ಕಾಂಗ್ರೆಸ್ ಶಾಸಕರನ್ನು ತನ್ನೆಡೆಗೆ ಸೆಳೆದುಕೊಳ್ಳುವಲ್ಲಿ ಬಿಜೆಪಿ ಸಫಲರಾಗಿದ್ದರೆ, ಇನ್ನೊಂದೆಡೆ ನಾವೇನು ಕಮ್ಮಿಯಿಲ್ಲ ಎಂಬಂತೆ ಬಿಜೆಪಿ ನಾಯಕರನ್ನು ಸೆಳೆಯುವ ಪ್ರಯತ್ನದಲ್ಲಿ ಕಾಂಗ್ರೆಸ್ ಕೂಡ ಇದೆ.

ಹೌದು ಬಿಜೆಪಿ ನಾಯಕ ರಾಜು ಕಾಗೆ ಹಾಗೂ ಗೋಕಾಕ್‌ ಕ್ಷೇತ್ರದ ಬಿಜೆಪಿ ಮುಖಂಡ ಅಶೋಕ್ ಪೂಜಾರಿ ಕಾಂಗ್ರೆಸ್‌ನತ್ತ ಒಲವು ತೋರಿಸಿದ್ದಾರೆ. ಹಾಗಾದರೆ ಅವರು ತಾವಾಗಿಯೇ ಕಾಂಗ್ರೆಸ್‌ಗೆ ಬರಲು ನಿರ್ಧರಿಸಿದ್ದಾರಾ ಅಥವಾ ಅವರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆಯಾ ಎಂಬುದು ಎಲ್ಲರ ಮನಸ್ಸಿನಲ್ಲಿ ಉದ್ಭವವಾಗಿರುವ ಪ್ರಶ್ನೆಯಾಗಿದೆ.

ಇನ್ನೊಂದೆಡೆ ರಮೇಶ್ ಜಾರಕಿಹೋಳಿ ಜೊತೆ ಪಕ್ಷ ತೊರೆದ ಶ್ರೀಮಂತ ಪಾಟೀಲ್, ಕಾಗವಾಡದ ರಾಜುಕಾಗೆಯನ್ನ ಕಾಂಗ್ರೆಸ್ಸಿಗೆ ಕರೆತರುವ ಪ್ರಯತ್ನ ಮಾಡಿ ರಮೇಶ್ ಜಾರಕಿಹೋಳಿಗೆ ಮತ್ತಷ್ಟು ಮುಖಭಂಗ ಮಾಡಲು ಮುಂದಾಗಿದ್ದಾರೆ.

ಲಕ್ಷ್ಮಿ ಪ್ರಯತ್ನದಂತೆ ಗೋಕಾಕ್ ನಲ್ಲಿ ಅಶೋಕ್ ಪೂಜಾರಿಗೆ ಕಾಂಗ್ರೆಸ್ ಟಿಕೆಟ್ ಅಂತೆಯೇ ಕಾಗವಾಡದಲ್ಲಿ ರಾಜು ಕಾಗೆಗೆ ಟಿಕೆಟ್ ಸಿಕ್ಕರೆ ಬೆಳಗಾವಿ ರಾಜಕಾರಣದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಕೈ ಮೇಲಾಗಲಿದೆ.

ಡಿಕೆ ಶಿವಕುಮಾರ್ ನಿವಾಸಕ್ಕೆ ರಾಜು ಕಾಗೆ, ಅಶೋಕ್ ಪೂಜಾರಿ ಭೇಟಿ ಡಿಕೆ ಶಿವಕುಮಾರ್ ನಿವಾಸಕ್ಕೆ ರಾಜು ಕಾಗೆ, ಅಶೋಕ್ ಪೂಜಾರಿ ಭೇಟಿ

ಒಟ್ಟಿನಲ್ಲಿ ಈಗಾಗಲೇ ಸಹೋದರರಿಗೆ ಸವಾಲು ಹಾಕಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಈ ಪ್ರಯತ್ನ ಯಶಸ್ವಿಯಾಗುತ್ತಾ ಅನ್ನೋದೇ ಸದ್ಯದ ಕುತೂಹಲವಾಗಿದೆ.

ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಬಿಜೆಪಿ ನಾಯಕರು

ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಬಿಜೆಪಿ ನಾಯಕರು

ರಾಜು ಕಾಗೆ ಹಾಗೂ ಗೋಕಾಕ್ ಬಿಜೆಪಿ ಮುಖಂಡ ಅಶೋಕ್ ಪೂಜಾರಿ ಭಾನುವಾರ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಮನೆಗೆ ತೆರಳಿದ್ದರು. ಆದರೆ ಭೇಟಿ ಬಳಿಕ ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದ್ದಾರೆ.

ಜಾರಕಿಹೊಳಿ ಬ್ರದರ್ಸ್ ಜೊತೆ ಲಕ್ಷ್ಮೀ ಕದನ

ಜಾರಕಿಹೊಳಿ ಬ್ರದರ್ಸ್ ಜೊತೆ ಲಕ್ಷ್ಮೀ ಕದನ

ಸಮ್ಮಿಶ್ರ ಸರ್ಕಾರದ ಬುಡವನ್ನೇ ಅಲ್ಲಾಡಿಸಿದ್ದ ಬೆಳಗಾವಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಸಹೋದರರ ನಡುವೆ ಮತ್ತೊಂದು ಸುತ್ತಿನ ಕದನ ನಡೆಯುವ ಲಕ್ಷಣಗಳು ಕಾಣತೊಡಗಿವೆ. ಸ್ವತಃ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಮ್ಮೆ ಪಂಥಾಹ್ವಾನ ನೀಡಿದಂತೆ ಕಾಣುತ್ತಿದೆ.

ಉಪ ಚುನಾವಣೆ; ಬಿಜೆಪಿ ನಾಯಕರಿಂದ ಡಿ. ಕೆ. ಶಿವಕುಮಾರ್ ಭೇಟಿ!ಉಪ ಚುನಾವಣೆ; ಬಿಜೆಪಿ ನಾಯಕರಿಂದ ಡಿ. ಕೆ. ಶಿವಕುಮಾರ್ ಭೇಟಿ!

ಲಖನ್ ಜಾರಕಿಹೊಳಿ ಅಖಾಡಕ್ಕಿಳಿಸಲು ಸಿದ್ಧತೆ

ಲಖನ್ ಜಾರಕಿಹೊಳಿ ಅಖಾಡಕ್ಕಿಳಿಸಲು ಸಿದ್ಧತೆ

ಹೌದು. ಗೋಕಾಕ್ ನಲ್ಲಿ ರಮೇಶ್ ಜಾರಕಿಹೋಳಿ ವಿರುದ್ಧ ಸಹೋದರ ಲಖನ್‍ರನ್ನ ಅಖಾಡಕ್ಕೆ ಇಳಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ ರಾಜಕೀಯ ದಾಳ ಉರುಳಿಸಿದ ಲಕ್ಷ್ಮಿ ಹೆಬ್ಬಾಳ್ಕರ್, ಗೋಕಾಕ್ ನ ಬಿಜೆಪಿ ಮುಖಂಡ ಅಶೋಕ್ ಪೂಜಾರಿಯನ್ನ ಕಾಂಗ್ರೆಸ್ಸಿಗೆ ಕರೆ ತಂದು ಅಭ್ಯರ್ಥಿ ಆಗಿಸುವ ಪ್ರಯತ್ನದಲ್ಲಿದ್ದಾರೆ.

ಬಿಜೆಪಿ ಮುಖಂಡರು-ಡಿಕೆಶಿ ಭೇಟಿಗೆ ಇವರೇ ಕಾರಣ

ಬಿಜೆಪಿ ಮುಖಂಡರು-ಡಿಕೆಶಿ ಭೇಟಿಗೆ ಇವರೇ ಕಾರಣ

ಅಶೋಕ್ ಪೂಜಾರಿಯನ್ನ ಡಿ.ಕೆ ಶಿವಕುಮಾರ್ ಭೇಟಿಯಾಗುವಂತೆ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜಾರಕಿಹೊಳಿ ಸಹೋದರರಿಗೆ ಸವಾಲು ಹಾಕಿದ್ದಾರೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕಾಗವಾಡದ ಬಿಜೆಪಿಯ ಮಾಜಿ ಶಾಸಕ ರಾಜು ಕಾಗೆಯನ್ನು ಕೂಡ ಡಿಕೆಶಿ ಭೇಟಿ ಮಾಡುವಂತೆ ನೋಡಿಕೊಂಡಿದ್ದಾರೆ. ಆ ಮೂಲಕ ಗೋಕಾಕ್ ನಲ್ಲಿ ಪರಸ್ಪರ ಒಬ್ಬರ ವಿರುದ್ಧ ಒಬ್ಬರು ತೊಡೆ ತಟ್ಟಿಕೊಂಡಿರುವ ಜಾರಕಿಹೊಳಿ ಸಹೋದರರಿಗೆ ಲಕ್ಷ್ಮಿ, ಅಶೋಕ್ ಪೂಜಾರಿ ಮೂಲಕ ಹೊಸ ಸವಾಲು ಹಾಕಿದ್ದಾರೆ.

English summary
As per Lakshmi Hebbalkar efforts, the Congress ticket for Ashok Poojari at Gokak and will be given to Raju Kage in Kagawada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X