ಬೋಗಸ್ ಸಮೀಕ್ಷೆ ನಂಬಿ ಟಿಕೆಟ್ ನೀಡಲು ಹಿಂಜರಿಯುತ್ತಿದ್ದಾರೆ: ಹಾಲಪ್ಪ
ಬೆಂಗಳೂರು, ಮಾರ್ಚ್ 31: ಮಾಜಿ ಸಚಿವ, ಬಿಜೆಪಿಯ ಹರತಾಳು ಹಾಲಪ್ಪ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದೆ, ಬಿಜೆಪಿಯು ಹಾಲಪ್ಪ ಅವರ ಬದಲಿಗೆ ಬೇಳೂರು ಗೋಪಾಲಕೃಷ್ಣ ಅವರಿಗೆ ಟಿಕೆಟ್ ನೀಡಲಿದೆ ಎಂಬ ಸುದ್ದಿ ಕ್ಷೇತ್ರದಲ್ಲಿ ಹರಿದಾಡುತ್ತಿದೆ. ಜೊತೆಗೆ ಹಾಲಪ್ಪ ಕಾಂಗ್ರೆಸ್ ಸೇರುತ್ತಾರೆ ಎಂಬ ಸುದಿಯೂ ಇದೆ. ಹಾಲಪ್ಪ ಅವರ ಹೇಳಿಕೆಯೂ ಇದಕ್ಕೆ ಪುಷ್ಟೀಕರಣ ನೀಡಿವೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
'ನಾನು ಸಾಗರದಲ್ಲಿ ಗೆಲ್ಲುವುದಿಲ್ಲ ಎಂಬ ಯಾವುದೋ ಬೋಗಸ್ ಸಮೀಕ್ಷೆ ನಂಬಿ ನನಗೆ ಟಿಕೆಟ್ ನಿರಾಕರಿಸಲು ಚಿಂತಿಸಲಾಗುತ್ತದೆ' ಎಂದು ಹಾಲಪ್ಪ ಅವರು ಹೇಳಿದ್ದಾರೆ.
ಬಸವೇಶ್ವರನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು 'ಕ್ಷೇತ್ರವಾರು ಮಾಡಿರುವ ಸಮೀಕ್ಷೆಗಳೆಲ್ಲವೂ ಸುಳ್ಳು, ಯಾರು ಹಣ ಕೊಡುತ್ತಾರೋ ಅವರ ಪರವಾಗಿ ಸಮೀಕ್ಷೆ ಬರುವಂತೆ ನೋಡಿಕೊಳ್ಳಲಾಗಿದೆ. ಆದರೆ ಇದನ್ನ ನಂಬಿ ಸಾಗರ ಕ್ಷೇತ್ರದಲ್ಲಿ ಮೂರನೇ ಸ್ಥಾನದಲ್ಲಿ ಸೋತವರಿಗೆ ಬಿಜೆಪಿಯವರು ಟಿಕೆಟ್ ಕೊಡುತ್ತಾರಂತೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಬೇರೆ ಪಕ್ಷದವರು ಈಗಾಗಲೇ ತಮ್ಮನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿರುವುದಾಗಿ ಹೇಳಿದ ಹಾಲಪ್ಪ, 'ಇನ್ನು ಕೆಲವೇ ದಿನಗಳಲ್ಲಿ ನಿರ್ಧಾರ ಪ್ರಕಟಿಸುತ್ತೇನೆ' ಎಂದು ಬೇರೆ ಪಕ್ಷ ಸೇರುವ ಮುನ್ಸೂಚನೆಯನ್ನೂ ನೀಡಿದರು.
ಬೇಳೂರು ಗೋಪಾಲಕೃಷ್ಣ ಅವರ ವಿರುದ್ಧ ಪರೋಕ್ಷವಾಗಿ ಹರಿಹಾಯ್ದ ಅವರು 'ಆರ್ಎಸ್ಎಸ್ ವಿರುದ್ಧ ಮಾತನಾಡಿದ, ಶೋಭಾ ಕರಂದ್ಲಾಜೆ -ಯಡಿಯೂರಪ್ಪ ಅವರ ನಡುವೆ ಸಂಬಂಧ ಕಲ್ಪಿಸಿದವರಿಗೆ ಇಂದು ಬಿಜೆಪಿ ಟಿಕೆಟ್ ನೀಡಲಾಗಿದೆ ಎಂದು ಹರಿಹಾಯ್ದರು.
ಯಡಿಯೂರಪ್ಪ ಅವರು ಬಿಜೆಪಿ ತೊರೆದಾಗ ನಾನು ಅವರ ಜೊತೆಗೆ ಇದ್ದೆ, ನಾವೆಲ್ಲರೂ ಅವರನ್ನೇ ನಂಬಿದ್ದವರು, ಎಂಥದ್ದೇ ಸಂದರ್ಭದಲ್ಲೂ ಅವರ ಬೆನ್ನಿಗೆ ನಿಂತವರು. ಈ ಬಗ್ಗೆ ಅವರಾಗಿಯೇ ಕರೆದು ಮಾತನಾಡಿದರೆ ಹೋಗುತ್ತೇನೆ ಇಲ್ಲವಾದರೆ ಹಿತೈಷಿಗಳ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ತೇನೆ ಎಂದು ಅವರ ಮುಂದಿನ ನಡೆ ಬಗ್ಗೆ ಕುತೂಹಲ ಮೂಡಿಸಿದರು.
-
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ











Click it and Unblock the Notifications