ವರದಿಗಾರ್ತಿ ನನ್ನ ತಂಗಿ ಇದ್ದಂತೆ, ಕ್ಷಮೆಯಾಚಿಸುತ್ತೇನೆ: ಈಶ್ವರಪ್ಪ
ಬೆಂಗಳೂರು, ಅ.18: ಅತ್ಯಾಚಾರ ಪ್ರಕರಣಗಳ ಬಗ್ಗೆ ಬಿಟಿವಿ ವರದಿಗಾರ್ತಿ ಕೇಳಿದ ಪ್ರಶ್ನೆಗೆ ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ ಅವರು ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿರುವುದು ಗೊತ್ತಿರಬಹುದು. ಈಗ ಶಿವಮೊಗ್ಗದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಈಶ್ವರಪ್ಪ, 'ವರದಿಗಾರ್ತಿ ನನ್ನ ತಂಗಿ ಇದ್ದಂತೆ, ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ' ಎಂದಿದ್ದಾರೆ.
ಇಷ್ಟಕ್ಕೂ ನಾನ್ನು ತಪ್ಪು ಮಾಡಿದ್ರೆ ಎಂದರೆ ಜನರು ತೀರ್ಮಾನ ತೆಗೆದುಕೊಳ್ಳಲಿ. ಸುಮ್ಮನೆ ಒಂದು ಕ್ಲಿಪ್ಪಿಂಗ್ ಮಾತ್ರ ಹಾಕಿ ನನ್ನ ಹೇಳಿಕೆಯನ್ನು ವಿವಾದಕ್ಕೆ ಕಾರಣ ಮಾಡಬೇಡಿ. ರಾಜ್ಯದಲ್ಲಿ ಅತ್ಯಾಚಾರ ಪ್ರಕರಣ, ರೈತರ ಆತ್ಮಹತ್ಯೆಯನ್ನು ಕಾಂಗ್ರೆಸ್ ಸರ್ಕಾರವೇ ತಡೆಯಲು ಆಗುತ್ತಿಲ್ಲ. ಅಡಳಿತವಿಲ್ಲದ ವಿರೋಧ ಪಕ್ಷದವರಾದ ನಾವು ಏನು ಮಾಡಲು ಸಾಧ್ಯ ಎಂದು ನಾನು ಹೇಳಿದೆ.

ವರದಿಗಾರ್ತಿ ಕೇಳಿದ ಪ್ರಶ್ನೆಗೂ ಮುನ್ನ ನಾನು ನೀಡಿದ ವಿವರಣೆ ಪೂರ್ತಿ ಕೇಳಿಸಿಕೊಳ್ಳಿ. ಇಷ್ಟಾದರೂ ವರದಿಗಾರ್ತಿ ನನ್ನ ತಂಗಿ ಇದ್ದಂತೆ, ನನ್ನ ಹೇಳಿಕೆಯಿಂದ ಆಕೆಗೆ ನೋವಾಗಿದ್ದರೆ, ನಾನು ಆಕೆ ಹಾಗೂ ರಾಜ್ಯದ ಜನತೆಯನ್ನು ಕ್ಷಮೆಯಾಚಿಸುತ್ತೇನೆ. ಈ ವಿಷಯವನ್ನು ಹೆಚ್ಚಿಗೆ ಬೆಳೆಸಲು ಇಷ್ಟವಿಲ್ಲ ಎಂದು ಹೇಳಿದರು.[ಈಶ್ವರಪ್ಪ ಹೇಳಿಕೆ ವಿರುದ್ಧ ಭುಗಿಲೆದ್ದ ಪ್ರತಿಭಟನೆ]
ಟಿವಿ ವರದಿಗಾರ್ತಿ ಪೂರ್ಣಿಮಾ ಅವರು ಕೇಳಿದ ಪ್ರಶ್ನೆಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ನೀಡಿದ್ದ ಹೇಳಿಕೆ "ನಿನ್ನನ್ನು ಯಾವನೋ ಎಳೆದ್ಕೊಂಡು ಹೋಗಿ ರೇಪ್ ಮಾಡಿದ್ರೆ ನಾ ಏನ್ ಮಾಡೋಕಾಗುತ್ತೆ? ನಾನು ಎಲ್ಲೋ ಇರ್ತೀನಿ, ಎಲ್ಲದಕ್ಕೂ ಪ್ರತಿಭಟಿಸೋಕಾಗುತ್ತಾ?" ವಿವಾದಕ್ಕೆ ಕಾರಣವಾಗಿದೆ.
ಸಿಎಂಗೆ ಮನವಿ ಈಶ್ವರಪ್ಪ ವಿರುದ್ಧ ಅನೇಕ ಸಂಘಟನೆಗಳು ಪ್ರತಿಭಟನೆ ನಡೆಸಿವೆ.ಮಹಿಳೆಯ ಗೌರವ ಕ್ಕೆ ಧ್ಕೆ ತರುವುದು ಐಪಿಸಿ ಸೆಕ್ಷನ್ 509 ಹಾಗೂ 294 ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ. ಈಶ್ವರಪ್ಪ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಂಡು, ಮಹಿಳೆಯ ಗೌರವ ಹಾಗೂ ಪತ್ರಿಕಾ ಸ್ವಾತಂತ್ರವನ್ನು ಎತ್ತಿ ಹಿಡಿಯಬೇಕು ಎಂದು ಪತ್ರಕರ್ತೆ ಗೌರಿ ಲಂಕೇಶ್ ಅವರಿದ್ದ ಪತ್ರಕರ್ತರ ನಿಯೋಗ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.ಪರಿಶೀಲನೆ ನಡೆಸಿ ಕಾನೂನು ರೀತಿ ಸೂಕ್ತ ಕ್ರಮ ಕೈಗೊಳ್ಳುವು ದಾಗಿ ಪತ್ರಕರ್ತರ ನಿಯೋಗಕ್ಕೆ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications