ಪ್ರವೀಣ್ ನೆಟ್ಟಾರು ಪತ್ನಿ ನೌಕರಿಯಿಂದ ವಜಾ: ಕಾಂಗ್ರೆಸ್ ಹೇಳಿದ್ದೇನು?
ಬೆಂಗಳೂರು, ಮೇ 27: ಕರ್ನಾಟಕದಲ್ಲಿ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರವು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡಿದ್ದ ಎಲ್ಲಾ ನೌಕರಿಗಳನ್ನು ಈಗಿನ ಕಾಂಗ್ರೆಸ್ ಸರ್ಕಾರ ವಜಾಗೊಳಿಸಿದೆ. ಎಲ್ಲಾ ನೇಮಕಾತಿಗಳನ್ನು ರದ್ದುಗೊಳಿಸಲು ಕಾಂಗ್ರೆಸ್ ನೇತೃತ್ವದ ಸರ್ಕಾರವು ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಅನುಕಂಪದ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲೆಗೀಡಾಗಿರುವ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿಯೂ ಕೆಲಸ ಕಳೆದುಕೊಂಡಿದ್ದಾರೆ.
ಸೆಪ್ಟೆಂಬರ್ 29, 2022 ರಂದು ಹೊರಡಿಸಲಾದ ಅಧಿಸೂಚನೆಯಲ್ಲಿ ಪ್ರವೀಣ್ ಅವರ ಪತ್ನಿ ನೂತನ್ ಕುಮಾರಿ ಎಂ ಅವರನ್ನು ಮುಖ್ಯಮಂತ್ರಿ ಕಚೇರಿಯಲ್ಲಿ 'ಗ್ರೂಪ್ ಸಿ' ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಿಸಲಾಗಿದೆ ಎಂದು ಹೇಳಲಾಗಿದೆ.

ಅವರ ನೇಮಕಾತಿಯ ಅಧಿಸೂಚನೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುವವರೆಗೆ ಅಥವಾ ಅವರ ಕೆಲಸಕ್ಕೆ ಸಂಬಂಧಿಸಿದ ಯಾವುದೇ ಹೊಸ ಆದೇಶ ಹೊರಡಿಸುವವರೆಗೆ ಅವರು ಸೇವೆಯಲ್ಲಿರುತ್ತಾರೆ ಎಂದು ತಿಳಿಸಲಾಗಿತ್ತು.
ನೂತನ್ ಕುಮಾರಿ ಅವರು ಕೋರಿಕೆಯ ಮೇರೆಗೆ ಅಕ್ಟೋಬರ್ 13 ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಪತ್ತು ನಿರ್ವಹಣಾ ಇಲಾಖೆಗೆ ಸೇರಿದ್ದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಹಿಂದಿನ ಸರ್ಕಾರದ ಅವಧಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನಡೆದ ಎಲ್ಲಾ ನೇಮಕಾತಿಗಳನ್ನು ಸ್ಥಗಿತಗೊಳಿಸಲಾಗಿದೆ. ಅದರಂತೆ ನೂತನ್ ಕುಮಾರಿ ಕೂಡ ಕೆಲಸ ಕಳೆದುಕೊಂಡಿದ್ದಾರೆ.

ಈ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಮಾತನಾಡಿ, ಸರಕಾರ ಬದಲಾದಾಗ ಹಿಂದಿನ ಎಲ್ಲ ತಾತ್ಕಾಲಿಕ ನೇಮಕಾತಿಗಳು ಸ್ವಾಭಾವಿಕವಾಗಿ ರದ್ದಾಗುತ್ತವೆ ಎಂದು ಹೇಳಿದ್ದಾರೆ.
ಕೆಲಸದಿಂದ ಬಿಡುಗಡೆ ಮಾಡುವ ವಿಚಾರವನ್ನು ನೂತನ್ ಕುಮಾರಿ ಅವರ ಗಮನಕ್ಕೆ ತರಲಾಗಿದೆ. ಆಕೆ ತನ್ನನ್ನು ಮುಂದುವರಿಸಲು ಡಿಸಿ ಕಚೇರಿಗೆ ಪತ್ರ ಸಲ್ಲಿಸಿದರೆ, ಅದನ್ನು ಸರ್ಕಾರಕ್ಕೆ ಪರಿಗಣನೆಗೆ ತರಲಾಗುತ್ತದೆ ಎಂದೂ ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಹೇಳಿದ್ದೇನು?
ಈ ವಿಚಾರವಾಗಿ ಟ್ವೀಟ್ ಮಾಡಿರುವ ಕರ್ನಾಟಕದ ಕಾಂಗ್ರೆಸ್, 'ಭ್ರಷ್ಟಾಚಾರವೇ ಕುಲದೈವ ಎಂದು ನಂಬಿರುವ ಬಿಜೆಪಿಗೆ ನೀತಿ ನಿಯಮಗಳನ್ನು ಅಧ್ಯಯನ ಮಾಡಲು ಆಸಕ್ತಿ ಮತ್ತು ಸಮಯ ಇರಲು ಸಾಧ್ಯವೇ? ನಿಯಮದ ಪ್ರಕಾರ, ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ. ಬದುಕಿಗೆ ಶಾಶ್ವತ ದಾರಿ ತೋರಿಸದೆ ಇಂತಹ ಪೇಪರ್ ಚಾಕ್ಲೆಟ್ ನೀಡುವ ಮೂಲಕ ಬಿಜೆಪಿ ಪ್ರವೀಣ್ ಪತ್ನಿಗೆ ದ್ರೋಹವೆಸಗಿದೆ' ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ












Click it and Unblock the Notifications