ಡಿ. ಕೆ. ಶಿವಕುಮಾರ್ ಭೇಟಿಯಾದ ಬಿಜೆಪಿ ನಾಯಕ ಎಸ್. ಎಂ. ಕೃಷ್ಣ
Recommended Video
ಬೆಂಗಳೂರು, ನವೆಂಬರ್ 07 : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದರು. ಡಿ. ಕೆ. ಶಿವಕುಮಾರ್ಗೆ ಎಸ್. ಎಂ. ಕೃಷ್ಣ ರಾಜಕೀಯ ಗುರು, ಕುಟುಂಬಕ್ಕೂ ಆಪ್ತರು.
ಬುಧವಾರ ರಾತ್ರಿ ಎಸ್. ಎಂ. ಕೃಷ್ಣ ಪತ್ನಿ ಪ್ರೇಮಾ ಅವರ ಜೊತೆ ಸದಾಶಿವ ನಗರದಲ್ಲಿರುವ ಡಿ. ಕೆ. ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದರು. ಡಿ. ಕೆ. ಶಿವಕುಮಾರ್ ಮತ್ತು ಡಿ. ಕೆ. ಸುರೇಶ್ ಭೇಟಿ ಮಾಡಿ ಮಾತುಕತೆ ನಡೆಸಿದರು.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ. ಕೆ. ಶಿವಕುಮಾರ್ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿದ್ದರು. ದೆಹಲಿಯ ತಿಹಾರ್ ಜೈಲಿನಿಂದ ಅವರು ಬಿಡುಗಡೆಗೊಂಡ ಬಳಿಕ ಮೊದಲ ಬಾರಿಗೆ ಎಸ್. ಎಂ. ಕೃಷ್ಣ ಭೇಟಿ ಮಾಡಿದ್ದಾರೆ.
ಡಿ. ಕೆ. ಶಿವಕುಮಾರ್ ಮತ್ತು ಸಂಸದ ಡಿ. ಕೆ. ಸುರೇಶ್ ಎದ್ದು ನಿಂತು ಎಸ್. ಎಂ. ಕೃಷ್ಣ ಜೊತೆ ಮಾತುಕತೆ ನಡೆಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಎಸ್. ಎಂ. ಕೃಷ್ಣ ಕಾಂಗ್ರೆಸ್ ಪಕ್ಷ ತೊರೆದಿದ್ದು ಅವರು ಬಿಜೆಪಿಯಲ್ಲಿದ್ದಾರೆ.

ಪಕ್ಷದ ಮಾತಿಲ್ಲ, ರಾಜಕೀಯ ಗುರು
ಎಸ್. ಎಂ. ಕೃಷ್ಣ ಬಿಜೆಪಿ ನಾಯಕರು. ಡಿ. ಕೆ. ಶಿವಕುಮಾರ್ ಕರ್ನಾಟಕ ಕಾಂಗ್ರೆಸ್ ಪ್ರಭಾವಿ ನಾಯಕರು. ಆದರೆ, ಇಲ್ಲಿ ಪಕ್ಷದ ಮಾತಿಲ್ಲ. ಡಿ. ಕೆ. ಶಿವಕುಮಾರ್ ಮತ್ತು ಡಿ. ಕೆ. ಸುರೇಶ್ಗೆ ಎಸ್. ಎಂ. ಕೃಷ್ಣ ರಾಜಕೀಯ ಗುರುಗಳು.

ಯಾರೂ ಪ್ರಶ್ನೆ ಮಾಡುವುದಕ್ಕೆ ಆಗಲ್ಲ
ಎಸ್. ಎಂ. ಕೃಷ್ಣ ಮತ್ತು ಡಿ. ಕೆ. ಶಿವಕುಮಾರ್ ಬೇರೆ-ಬೇರೆ ಪಕ್ಷದಲ್ಲಿರಲಿ. ಹೊಸ ವರ್ಷ, ಹುಟ್ಟು ಹಬ್ಬದ ಸಂದರ್ಭದಲ್ಲಿ ಡಿ. ಕೆ. ಶಿವಕುಮಾರ್ ಎಸ್. ಎಂ. ಕೃಷ್ಣ ಭೇಟಿ ಮಾಡುತ್ತಾರೆ. "ಎಸ್. ಎಂ. ಕೃಷ್ಣ ಜೊತೆ ನನ್ನ ಸಂಬಂಧ ಬಗ್ಗೆ ಯಾರೂ ಪ್ರಶ್ನೆ ಮಾಡುವುದಕ್ಕಾಗಲ್ಲ. ನನಗೆ ಅವರು ತಂದೆ ಸಮಾನ, ರಾಜಕೀಯವಾಗಿ ಮಾರ್ಗದರ್ಶನ ತೋರಿದವರು" ಎಂದು ಡಿ. ಕೆ. ಶಿವಕುಮಾರ್ ಹಲವು ಬಾರಿ ಹೇಳಿದ್ದಾರೆ.

ಕುಟುಂಬಕ್ಕೂ ಆಪ್ತರು
ರಾಜಕೀಯ ಹೊರತುಪಡಿಸಿ ಎಸ್. ಎಂ. ಕೃಷ್ಣ ಕುಟುಂಬಕ್ಕೂ ಡಿ. ಕೆ. ಶಿವಕುಮಾರ್ ಆಪ್ತರು. ಎಸ್. ಎಂ. ಕೃಷ್ಣ ಅಳಿಯ ದಿ. ಸಿದ್ದಾರ್ಥಗೂ ಡಿ. ಕೆ. ಶಿವಕುಮಾರ್ ಆಪ್ತರಾಗಿದ್ದರು. ಸಿದ್ದಾರ್ಥ ಅವರ ಸಾವಿನ ಸಂದರ್ಭದಲ್ಲಿ ಡಿ. ಕೆ. ಶಿವಕುಮಾರ್ ಎಸ್. ಎಂ. ಕೃಷ್ಣ ಕುಟುಂಬದ ಜೊತೆ ಇದ್ದು ಧೈರ್ಯ ತುಂಬಿದ್ದರು.

ಹಲವು ನಾಯಕರು ಭೇಟಿ ಮಾಡಿದ್ದಾರೆ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ. ಕೆ. ಶಿವಕುಮಾರ್ ದೆಹಲಿಯ ತಿಹಾರ್ ಜೈಲು ಸೇರಿದ್ದರು. ಅವರು ಜೈಲಿನಿಂದ ಬಿಡುಗಡೆಗೊಂಡ ಬಳಿಕ ಹಲವು ನಾಯಕರು ಅವರನ್ನು ಭೇಟಿಯಾಗಿದ್ದಾರೆ. ಬಿಜೆಪಿ ನಾಯಕ ಎಸ್. ಎಂ. ಕೃಷ್ಣ ಬುಧವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.
-
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು












Click it and Unblock the Notifications