ಡಿ. ಕೆ. ಶಿವಕುಮಾರ್ ಭೇಟಿಯಾದ ಬಿಜೆಪಿ ನಾಯಕ ಎಸ್. ಎಂ. ಕೃಷ್ಣ
Recommended Video
ಬೆಂಗಳೂರು, ನವೆಂಬರ್ 07 : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದರು. ಡಿ. ಕೆ. ಶಿವಕುಮಾರ್ಗೆ ಎಸ್. ಎಂ. ಕೃಷ್ಣ ರಾಜಕೀಯ ಗುರು, ಕುಟುಂಬಕ್ಕೂ ಆಪ್ತರು.
ಬುಧವಾರ ರಾತ್ರಿ ಎಸ್. ಎಂ. ಕೃಷ್ಣ ಪತ್ನಿ ಪ್ರೇಮಾ ಅವರ ಜೊತೆ ಸದಾಶಿವ ನಗರದಲ್ಲಿರುವ ಡಿ. ಕೆ. ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದರು. ಡಿ. ಕೆ. ಶಿವಕುಮಾರ್ ಮತ್ತು ಡಿ. ಕೆ. ಸುರೇಶ್ ಭೇಟಿ ಮಾಡಿ ಮಾತುಕತೆ ನಡೆಸಿದರು.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ. ಕೆ. ಶಿವಕುಮಾರ್ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿದ್ದರು. ದೆಹಲಿಯ ತಿಹಾರ್ ಜೈಲಿನಿಂದ ಅವರು ಬಿಡುಗಡೆಗೊಂಡ ಬಳಿಕ ಮೊದಲ ಬಾರಿಗೆ ಎಸ್. ಎಂ. ಕೃಷ್ಣ ಭೇಟಿ ಮಾಡಿದ್ದಾರೆ.
ಡಿ. ಕೆ. ಶಿವಕುಮಾರ್ ಮತ್ತು ಸಂಸದ ಡಿ. ಕೆ. ಸುರೇಶ್ ಎದ್ದು ನಿಂತು ಎಸ್. ಎಂ. ಕೃಷ್ಣ ಜೊತೆ ಮಾತುಕತೆ ನಡೆಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಎಸ್. ಎಂ. ಕೃಷ್ಣ ಕಾಂಗ್ರೆಸ್ ಪಕ್ಷ ತೊರೆದಿದ್ದು ಅವರು ಬಿಜೆಪಿಯಲ್ಲಿದ್ದಾರೆ.

ಪಕ್ಷದ ಮಾತಿಲ್ಲ, ರಾಜಕೀಯ ಗುರು
ಎಸ್. ಎಂ. ಕೃಷ್ಣ ಬಿಜೆಪಿ ನಾಯಕರು. ಡಿ. ಕೆ. ಶಿವಕುಮಾರ್ ಕರ್ನಾಟಕ ಕಾಂಗ್ರೆಸ್ ಪ್ರಭಾವಿ ನಾಯಕರು. ಆದರೆ, ಇಲ್ಲಿ ಪಕ್ಷದ ಮಾತಿಲ್ಲ. ಡಿ. ಕೆ. ಶಿವಕುಮಾರ್ ಮತ್ತು ಡಿ. ಕೆ. ಸುರೇಶ್ಗೆ ಎಸ್. ಎಂ. ಕೃಷ್ಣ ರಾಜಕೀಯ ಗುರುಗಳು.

ಯಾರೂ ಪ್ರಶ್ನೆ ಮಾಡುವುದಕ್ಕೆ ಆಗಲ್ಲ
ಎಸ್. ಎಂ. ಕೃಷ್ಣ ಮತ್ತು ಡಿ. ಕೆ. ಶಿವಕುಮಾರ್ ಬೇರೆ-ಬೇರೆ ಪಕ್ಷದಲ್ಲಿರಲಿ. ಹೊಸ ವರ್ಷ, ಹುಟ್ಟು ಹಬ್ಬದ ಸಂದರ್ಭದಲ್ಲಿ ಡಿ. ಕೆ. ಶಿವಕುಮಾರ್ ಎಸ್. ಎಂ. ಕೃಷ್ಣ ಭೇಟಿ ಮಾಡುತ್ತಾರೆ. "ಎಸ್. ಎಂ. ಕೃಷ್ಣ ಜೊತೆ ನನ್ನ ಸಂಬಂಧ ಬಗ್ಗೆ ಯಾರೂ ಪ್ರಶ್ನೆ ಮಾಡುವುದಕ್ಕಾಗಲ್ಲ. ನನಗೆ ಅವರು ತಂದೆ ಸಮಾನ, ರಾಜಕೀಯವಾಗಿ ಮಾರ್ಗದರ್ಶನ ತೋರಿದವರು" ಎಂದು ಡಿ. ಕೆ. ಶಿವಕುಮಾರ್ ಹಲವು ಬಾರಿ ಹೇಳಿದ್ದಾರೆ.

ಕುಟುಂಬಕ್ಕೂ ಆಪ್ತರು
ರಾಜಕೀಯ ಹೊರತುಪಡಿಸಿ ಎಸ್. ಎಂ. ಕೃಷ್ಣ ಕುಟುಂಬಕ್ಕೂ ಡಿ. ಕೆ. ಶಿವಕುಮಾರ್ ಆಪ್ತರು. ಎಸ್. ಎಂ. ಕೃಷ್ಣ ಅಳಿಯ ದಿ. ಸಿದ್ದಾರ್ಥಗೂ ಡಿ. ಕೆ. ಶಿವಕುಮಾರ್ ಆಪ್ತರಾಗಿದ್ದರು. ಸಿದ್ದಾರ್ಥ ಅವರ ಸಾವಿನ ಸಂದರ್ಭದಲ್ಲಿ ಡಿ. ಕೆ. ಶಿವಕುಮಾರ್ ಎಸ್. ಎಂ. ಕೃಷ್ಣ ಕುಟುಂಬದ ಜೊತೆ ಇದ್ದು ಧೈರ್ಯ ತುಂಬಿದ್ದರು.

ಹಲವು ನಾಯಕರು ಭೇಟಿ ಮಾಡಿದ್ದಾರೆ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ. ಕೆ. ಶಿವಕುಮಾರ್ ದೆಹಲಿಯ ತಿಹಾರ್ ಜೈಲು ಸೇರಿದ್ದರು. ಅವರು ಜೈಲಿನಿಂದ ಬಿಡುಗಡೆಗೊಂಡ ಬಳಿಕ ಹಲವು ನಾಯಕರು ಅವರನ್ನು ಭೇಟಿಯಾಗಿದ್ದಾರೆ. ಬಿಜೆಪಿ ನಾಯಕ ಎಸ್. ಎಂ. ಕೃಷ್ಣ ಬುಧವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.
-
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್











Click it and Unblock the Notifications