ಬೇಳೂರು ಗೋಪಾಲಕೃಷ್ಣ ಉದ್ಧಟತನ ಹೇಳಿಕೆ: ಬಿಜೆಪಿಗರ ಉಗ್ರ ಪ್ರತ್ಯುತ್ತರ
Recommended Video

ಬೆಂಗಳೂರು, ಮಾರ್ಚ್ 05: ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲ್ ಕೃಷ್ಣ ಅವರು ಮೋದಿಗೆ ಗುಂಡಿಕ್ಕಿ ಎಂದು ಉದ್ಧಟತನದ ಹೇಳಿಕೆ ನೀಡಿರುವುದು ರಾಜ್ಯದಾದ್ಯಂತ ಬಿಜೆಪಿ ಕಾರ್ಯಕರ್ತರು ಮುಖಂಡರಲ್ಲಿ ಆಕ್ರೋಶ ಕೆರಳಿಸಿದೆ.
ಬಿಜೆಪಿಯಲ್ಲಿದ್ದು ಕಾಂಗ್ರೆಸ್ಗೆ ಪಕ್ಷಾಂತರ ಮಾಡಿರುವ ಬೇಳೂರು ಗೋಪಾಲಕೃಷ್ಣ ಅವರು ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ಮೋದಿಗೆ ಗುಂಡು ಹೊಡೆಯಿರಿ ಎಂದು ಹೇಳಿದ್ದರು. ಈ ವಿಡಿಯೋವನ್ನು ಕರ್ನಾಟಕ ಬಿಜೆಪಿ ಟ್ವಿಟ್ಟರ್ನಲ್ಲಿ ಇಂದು ಹಾಕಿದೆ.
ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಬೇಳೂರು ಗೋಪಾಲಕೃಷ್ಣ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಬಿಜೆಪಿಯ ಮುಖ್ಯ ಟ್ವಿಟ್ಟರ್ ಖಾತೆಯಲ್ಲಿ ಸಹ ವಿಡಿಯೋವನ್ನು ಹಾಕಲಾಗಿದ್ದು, ಬೇಳೂರ ಗೋಪಾಲಕೃಷ್ಣ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ.
ರಾಜ್ಯ ಬಿಜೆಪಿ ಮುಖಂಡರು ಬೇಳೂರು ಗೋಪಾಲಕೃಷ್ಣ ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಹಲವರು ಈ ಕುರಿತು ಹೇಳಿಕೆಗಳನ್ನು ನೀಡಿದ್ದಾರೆ.

ಆಘಾತಕಾರಿ ಹೇಳಿಕೆ: ಶೋಭಾ
ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಅವರು ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಸಮಾಜದ ಒಂದು ವಿಭಾಗವನ್ನು ಸಂತುಷ್ಟಿಗೊಳಿಸಲೆಂದು ಮೋದಿಯನ್ನು ಕೊಲ್ಲಿ ಎಂದು ಅವರು ಹೇಳಿದ್ದಾರೆ. ಈ ಕೂಡಲೇ ಪರಮೇಶ್ವರ್ ಹಾಗೂ ಕುಮಾರಸ್ವಾಮಿ ಅವರು ಬೇಳೂರು ಗೋಪಾಲಕೃಷ್ಣ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಶೋಭಾ ಒತ್ತಾಯಿಸಿದ್ದಾರೆ.

'ಪಾಕಿಸ್ತಾನದ ಭಾಷೆ ಮಾತನಾಡುತ್ತಿದ್ದಾರೆ'
ಬಿಜೆಪಿ ಮುಖಂಡ ಸಿಟಿ ರವಿ ಅವರು ಟ್ವೀಟ್ ಮಾಡಿ, ಕಾಂಗ್ರೆಸ್ ಪಕ್ಷದ ಮುಖಂಡರು ಪಾಕಿಸ್ತಾನದ ಭಾಷೆ ಮಾತನಾಡುತ್ತಿದ್ದಾರೆ. ಪ್ರಜೆಗಳಿಂದ ಆಯ್ಕೆಯಾದ ಮೋದಿ ಅವರನ್ನು ಕೊಲ್ಲುವಂತೆ ಹೇಳುತ್ತಿದ್ದಾರೆ. ಇದೇನು ಪ್ರಜಾಪ್ರಭುತ್ವವೇ ಎಂದು ಸಿಟಿ.ರವಿ, ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ. ಕೂಡಲೇ ಬೇಳೂರು ಅವರನ್ನು ಬಂಧಿಸಬೇಕೆಂದು ರವಿ ಒತ್ತಾಯಿಸಿದ್ದಾರೆ.

'ಕಾಂಗ್ರೆಸ್ ಮನಸ್ಥಿತಿಯನ್ನು ತೋರುತ್ತದೆ'
ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ಈ ಹೇಳಿಕೆ ಕಾಂಗ್ರೆಸ್ ಪಕ್ಷದ ಮನಸ್ಥಿತಿಯನ್ನು ತೋರುತ್ತದೆ. ಕಾಂಗ್ರೆಸ್ ಪಕ್ಷ ಅತ್ಯಂತ ಕೀಳುಮಟ್ಟಕ್ಕೆ ಇಳಿಯುತ್ತಿದೆ ಎಂದು ಹೇಳಿದ್ದಾರೆ.

ಕೂಡಲೇ ಬಂಧಿಸಿ
ಕರ್ನಾಟಕ ಬಿಜೆಪಿ ಸಹ ಇದನ್ನು ಟ್ವೀಟ್ ಮಾಡಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲಕ ಆಯ್ಕೆ ಆಗಿರುವ ಪ್ರಧಾನಿ ಅವರನ್ನು ಹತ್ಯೆ ಮಾಡಿ ಎಂದು ಕಾಂಗ್ರೆಸ್ನ ಮುಖಂಡ ಹೇಳಿದ್ದಾರೆ. ಇದು ರಾಷ್ಟ್ರೀಯ ಭದ್ರತೆಯ ವಿಷಯವೆಂದು ಪರಿಗಣಿಸಬೇಕು. ಕೂಡಲೇ ಬೇಳೂರು ಗೋಪಾಲಕೃಷ್ಣ ಅವರನ್ನು ಬಂಧಿಸಬೇಕು ಎಂದು ಬಿಜೆಪಿ ಟ್ವೀಟ್ ಮಾಡಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications